AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ

ಟಿಪ್ಪರ ಡಿಕ್ಕಿಯಾಗಿ‌ ಕಟ್ಟಡ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ವಿಜಯದಶಮಿ ದಿನವೇ ಘೋರ ಅಪಘಾತ ಸಂಭವಿಸಿದೆ. ಟಿಪ್ಪರ ಡಿಕ್ಕಿ ರಭಸಕ್ಕೆ ಯುವಕನ ದೇಹದ ಅಂಗಾಂಗಗಳು ಚೆಲ್ಲಾಪಿಲ್ಲಿ ಆಗಿವೆ. ರಸ್ತೆಯಲ್ಲಿ ಬಿದ್ದರೂ ಹೃದಯ ಬಡಿದುಕೊಳ್ಳುತ್ತಿತ್ತು.

ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ
ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ
ಶಿವಕುಮಾರ್ ಪತ್ತಾರ್
| Edited By: |

Updated on: Oct 12, 2024 | 9:28 PM

Share

ಧಾರವಾಡ, ಅಕ್ಟೋಬರ್​ 12: ವಿಜಯದಶಮಿ ದಿನವೇ ಹುಬ್ಬಳ್ಳಿಯಲ್ಲಿ ಘೋರ ಅಪಘಾತವೊಂದು (accident) ಸಂಭವಿಸಿದೆ. ಯುವಕ ರಸ್ತೆ ದಾಟುತ್ತಿರುವಾ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಸುಭಾಷ್ ಗುಂಡಪ್ಪನವರ (25) ಮೃತ ಕಾರ್ಮಿಕ. ಟಿಪ್ಪರ ಡಿಕ್ಕಿ ಹೊಡೆದ ರಭಸಕ್ಕೆ ದೇಹದ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿದ್ದು, ರಸ್ತೆಯಲ್ಲಿ ಬಿದ್ದರೂ ಸುಭಾಸ್ ಹೃದಯ ಬಡಿದುಕೊಳ್ಳುತ್ತಿತ್ತು.

ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಸುಭಾಷ್ ಮೂಲತಃ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ‌ ಸುಳೀಕಟ್ಟಿ ನಿವಾಸಿ. ಸುಳಿಕಟ್ಟಿಯಿಂದ ಕಲಘಟಗಿಗೆ ಬಂದಾಗ ಘೋರ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಆಪ್ತ ಸ್ನೇಹಿತನ ಕೊಲೆ; ಆರೋಪಿಗಳ ಕಾಲಿಗೆ ಗುಂಡೇಟು

ಅಪಘಾತ ವಿಡಿಯೋ ನೋಡಿದರೆ ಒಂದು ಕ್ಷಣ ಎದೆ ಬಡಿತ ನಿಲ್ಲೋದು ಗ್ಯಾರಂಟಿ. ರಸ್ತೆಯಲ್ಲಿ ಬಿದ್ದ ಹೃದಯ ಬಿಡಿತದ ವಿಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ‌ ಹಿಡಿದಿದ್ದಾರೆ.

ಚಾಲಕನ ನಿಯತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: 8 ಮಕ್ಕಳು ಓರ್ವ ವ್ಯಕ್ತಿ ಸೇರಿ ಒಂಬತ್ತು ಜನರಿಗೆ ಗಾಯ

ಕೊಪ್ಪಳ: ಕಾರಟಗಿ ತಾಲೂಕಿನ ಪಟ್ಟಣದೇವಿ ಕ್ಯಾಂಪ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ ಪಲ್ಟಿಯಾಗಿದ್ದು, 8 ಮಕ್ಕಳು ಮತ್ತು ಓರ್ವ ವ್ಯಕ್ತಿ ಸೇರಿ 9 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಪ್ರೇಯಸಿ ಪ್ರೀತಿಸಿ ಕೈಕೊಟ್ಟಳು ಅಂತ ಆಕೆಯೊಂದಿಗಿನ ಖಾಸಗಿ ಫೋಟೋ ಹರಿಬಿಟ್ಟ ದರ್ಶನ್​!

ದಸರಾ ಹಬ್ಬದ ಹಿನ್ನೆಲೆ ದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಟ್ರ್ಯಾಕ್ಟರ್​ ಪಲ್ಟಿ ಆಗಿದೆ. ಗಾಯಾಳುಗಳು ರಾಯಚೂರು ಜಿಲ್ಲೆಯ ಸಿಂಧನೂರಿನ ಜಂಬುನಾಥಹಳ್ಳಿಯವರು. 9 ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತಿದೆ. ಕಾರಟಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು 

ದಾವಣಗೆರೆ: ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶವಾಗಿ ಲೈನ್ ಮ್ಯಾನ್ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ತಾಲ್ಲೂಕಿನ ಮಳಲ್ಕೆರೆಯಲ್ಲಿ ನಡೆದಿದೆ. 32 ವರ್ಷದ ಮುತ್ತುರಾಜ್ ಸಾವನ್ನಪ್ಪಿದ್ದ ದುರ್ದೈವಿ. ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಪ್ರವಹಿಸಿತ್ತು. ಎಲ್​ಸಿ ತೆಗೆದುಕೊಂಡಿದ್ದರು ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂದು ಗ್ರಾಮಸ್ಥರಿಂದ ಗಲಾಟೆ ಮಾಡಲಾಗಿದೆ. ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More