AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ, ರಾಮನಗರ, ಬಾಗಲಕೋಟೆದಲ್ಲಿ ಮೂರು ಪ್ರತ್ಯೇಕ ಅಪಘಾತ: 20 ಮಂದಿಗೆ ಗಾಯ

ರಾಯಚೂರು ಮಾರ್ಗದಿಂದ ಬಾಗಲಕೋಟೆಗೆ ಬರುತ್ತಿದ್ದ ಕೆಸ್​ಆರ್​ಟಿಸಿ ಬಸ್​ ಮತ್ತು ಬಾಗಲಕೋಟೆ ಮಾರ್ಗದಿಂದ ರಾಯಚೂರು ಮಾರ್ಗದತ್ತ ಹೊರಟಿದ್ದ ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ನಡುವೆ ಬೆಳಗಿನ ಜಾವ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದೆ.

ಉತ್ತರ ಕನ್ನಡ, ರಾಮನಗರ, ಬಾಗಲಕೋಟೆದಲ್ಲಿ ಮೂರು ಪ್ರತ್ಯೇಕ ಅಪಘಾತ: 20 ಮಂದಿಗೆ ಗಾಯ
ಬಾಗಲಕೋಟೆಯಲ್ಲಿ KSRTC ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ
preethi shettigar
|

Updated on:Mar 26, 2021 | 12:02 PM

Share

ಬಾಗಲಕೋಟೆ: ಜಿಲ್ಲೆಯ ಇಳಕಲ್ ಹೊರವಲಯದಲ್ಲಿ ಕೆಸ್​ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ನಾಲ್ವರು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಇಳಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರು ಮಾರ್ಗದಿಂದ ಬಾಗಲಕೋಟೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮತ್ತು ಬಾಗಲಕೋಟೆ ಮಾರ್ಗದಿಂದ ರಾಯಚೂರು ಮಾರ್ಗದತ್ತ ಹೊರಟಿದ್ದ ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ನಡುವೆ ಬೆಳಗಿನ ಜಾವ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದೆ. ಈ ಸಂಬಂಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡದಲ್ಲಿ ಎರಡು ಕ್ರಷರ್ ಮಧ್ಯೆ ಮುಖಾ ಮುಖಿ ಡಿಕ್ಕಿ: ಉತ್ತರ ಕನ್ನಡದಲ್ಲಿ ಎರಡು ಕ್ರಷರ್ ಮಧ್ಯೆ ಮುಖಾ ಮುಖಿ ಡಿಕ್ಕಿ ಹೊಡೆದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕೋಳಿಕೇರಿ ಗ್ರಾಮದ ಬಳಿ ಸಂಭವಿಸಿದೆ. ನಿನ್ನೆಯಷ್ಟೆ ಉಡಪಿಯಲ್ಲಿ ಸೈನಿಕ ತರಬೇತಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಉಡುಪಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕ್ರೂಷರ್ ಮತ್ತು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ತೆರಳುತ್ತಿದ್ದ ಇನ್ನೊಂದು ಕ್ರೂಷರ್ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರದಲ್ಲಿ ಹಾಲಿನ ಕ್ಯಾಂಟರ್​ಗೆ ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ ಹಾಲಿನ ಕ್ಯಾಂಟರ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಬೆಂಗಳೂರು ಮೂಲದ ಪ್ರಣಿತ್​ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಹಾಲಿನ ಕ್ಯಾಂಟರ್ ವಾಹನವನ್ನು ಬಿಟ್ಟು ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?

Published On - 12:00 pm, Fri, 26 March 21

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು