ಬೆಂಗಳೂರು-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನಲ್ಲಿ ಪೆರುಮಾಚನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್​ ಗುದ್ದಿದೆ. ಕೋಲಾರ ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ಶ್ರೀನಿವಾಸ್ (50) ಮೃತ ಸವಾರ.

ಬೆಂಗಳೂರು-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು
ಅಪಘಾತವಾದ ಸ್ಥಳ
Edited By:

Updated on: Dec 23, 2020 | 8:03 PM

ಚಿಂತಾಮಣಿ: ಬೆಂಗಳೂರು-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು-ಬೈಕ್​ಗಳ ನಡುವೆ ಮುಖಾಮುಖಿಯಾಗಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನಲ್ಲಿ ಪೆರುಮಾಚನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್​ ಗುದ್ದಿದೆ. ಕೋಲಾರ ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ಶ್ರೀನಿವಾಸ್ (50) ಮೃತ ಸವಾರ. ಅಪಘಾತದ ರಭಸಕ್ಕೆ ಕಾರಿನ ಗಾಜು ಸಂಪೂರ್ಣ ನುಚ್ಚು ನೂರಾಗಿದೆ. ಬೈಕ್​ನ ಮುಂಭಾಗ ನಜ್ಜುಗುಜ್ಜಾಗಿದೆ. ರಸ್ತೆಯ ಮೇಲೆ ರಕ್ತ ಹರಿಯುತ್ತಿದ್ದ ದೃಶ್ಯ ಭೀತಿ ಹುಟ್ಟಿಸುವಂತಿತ್ತು.

ಅಪಘಾತವಾದ ಬಳಿಕ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಾರು ಚಾಲಕನಿಗಾಗಿ ಹುಡುಕಾಟ ಮುಂದುವರಿದಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ಬಂಧನದ ನಂತರವೇ ಯಾರ ತಪ್ಪು ಎನ್ನುವ ವಿಚಾರ ತಿಳಿದು ಬರಬೇಕಿದೆ.

ಹುಬ್ಬಳ್ಳಿ: ಬೈಕ್​ ಅಪಘಾತದಿಂದ ಹೊರ ಬಿತ್ತು ಲೈಂಗಿಕ ಕಿರುಕುಳ ಪ್ರಕರಣ!

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us