AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲಿನಿಂದ ತಾಯಿ ಮಗ ದುರ್ಮರಣ; ಬೈಕ್​​ನಲ್ಲಿ ತೆರಳ್ತಿದ್ದ ದಂಪತಿ ಜೊತೆ ಮೊಮ್ಮಗಳ ಸಾವು, ಬಸ್ ಡಿಕ್ಕಿ ಬೈಕ್​​ನಲ್ಲಿ ತೆರಳ್ತಿದ್ದ ಇಬ್ಬರ ಸಾವು

ಅಪಘಾತದಲ್ಲಿ ಕಿರಣ್(23) ಮತ್ತು ವೆಂಕಟೇಶ್​​(25) ಸಾವಿಗೀಡಾಗಿದ್ದಾರೆ. ಜಾತ್ರೆಯ ಊಟ ಮುಗಿಸಿದ ಬಳಿಕ ಇಬ್ಬರೂ ಸ್ನೇಹಿತರು ಊರಿಗೆ ವಾಪಸಾಗುತ್ತಿದ್ದರು. ಮೃತರು ಹೊಸಪೇಟೆ ತಾಲೂಕಿನ ಕಾಕುಬಾಳು ನಿವಾಸಿಗಳು.

ಸಿಡಿಲಿನಿಂದ ತಾಯಿ ಮಗ ದುರ್ಮರಣ; ಬೈಕ್​​ನಲ್ಲಿ ತೆರಳ್ತಿದ್ದ ದಂಪತಿ ಜೊತೆ ಮೊಮ್ಮಗಳ ಸಾವು, ಬಸ್ ಡಿಕ್ಕಿ ಬೈಕ್​​ನಲ್ಲಿ ತೆರಳ್ತಿದ್ದ ಇಬ್ಬರ ಸಾವು
ಸಿಡಿಲಿನಿಂದ ತಾಯಿ ಮಗ ದುರ್ಮರಣ; ಬೈಕ್​​ನಲ್ಲಿ ತೆರಳ್ತಿದ್ದ ದಂಪತಿ ಜೊತೆ ಮೊಮ್ಮಗಳ ಸಾವು, ಬಸ್ ಡಿಕ್ಕಿ ಬೈಕ್​​ನಲ್ಲಿ ತೆರಳ್ತಿದ್ದ ಇಬ್ಬರ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on: May 04, 2022 | 9:10 PM

Share

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಮೇಗಳಹಟ್ಟಿ ಗ್ರಾಮದ ಬಳಿ ಸಿಡಿಲು ಬಡಿದು ತಾಯಿ ಮತ್ತು ಮಗ ದುರ್ಮರಣಕ್ಕೀಡಾಗಿದ್ದಾರೆ. ಮೇಗಳಹಟ್ಟಿಯ ಮಾರಕ್ಕ(40) ಮತ್ತು ಮಗ ವೆಂಕಟೇಶ್​​​(17) ಮೃತರು. ಕುರಿ ಮೇಯಿಸಲು ಹೋಗಿದ್ದಾಗ ಸಿಡಿಲು ಬಡಿದು ಇಬ್ಬರೂ ಸಾವನ್ನಪ್ಪಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ಮೊಮ್ಮಗಳೊಂದಿಗೆ ದಂಪತಿ ಸಾವು: ದಾವಣಗೆರೆ ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕುಂದುವಾಡ ಕ್ರಾಸ್ ಬಳಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಮೊಮ್ಮಗಳ ಜೊತೆಗೆ ದಂಪತಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ಟಿಪ್ಪುನಗರದ ಮೊಹಮ್ಮದ್ ಜಬೀವುಲ್ಲಾ (45), ಅವರ ಪತ್ನಿ ಹಮೀದಾ (43) ಹಾಗೂ ಅವರ ಪುತ್ರಿಯ ಮಗಳಾದ ಗೌಸಿಯಾಬಾನು (4) ಮೃತರು. ಮೂವರೂ ಒಂದೇ ಬೈಕಿನಲ್ಲಿ ಶಿವಮೊಗ್ಗದಿಂದ ದಾವಣಗೆರೆಗೆ ಬರುತ್ತಿದ್ದರು. ದಾವಣಗೆರೆಯ ಚಿಕ್ಕನಹಳ್ಳಿಯ ಹೊಸ ಬಡಾವಣೆಯಲ್ಲಿರುವ ಮಗಳ ಮನೆಗೆ ಮೊಮ್ಮಗಳನ್ನು ಬಿಡಲು ಬರುತ್ತಿದ್ದರು. ಈ ವೇಳೆ ಬೈಕ್ ಆಯ ತಪ್ಪಿ ಬಿದ್ದು, ಲಾರಿಯ ಚಕ್ರಕ್ಕೆ ಸಿಲುಕಿದೆ. ಹಮೀದಾ ಹಾಗೂ ಗೌಸಿಯಾಬಾನು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಹಮ್ಮದ್‌ ಜಬೀವುಲ್ಲಾ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಾತ್ರೆಯ ಊಟ ಮುಗಿಸಿ ಊರಿಗೆ ಹೊರಟಿದ್ದ ಇಬ್ಬರು ಯುವಕರ ಸಾವು ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸರ್ಕಾರಿ ಬಸ್ ಡಿಕ್ಕಿ ಹೊಡೆದು ​ಬೈಕ್​​ನಲ್ಲಿ ತೆರಳುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಿರಣ್(23) ಮತ್ತು ವೆಂಕಟೇಶ್​​(25) ಸಾವಿಗೀಡಾಗಿದ್ದಾರೆ. ಜಾತ್ರೆಯ ಊಟ ಮುಗಿಸಿದ ಬಳಿಕ ಇಬ್ಬರೂ ಸ್ನೇಹಿತರು ಊರಿಗೆ ವಾಪಸಾಗುತ್ತಿದ್ದರು. ಮೃತರು ಹೊಸಪೇಟೆ ತಾಲೂಕಿನ ಕಾಕುಬಾಳು ನಿವಾಸಿಗಳು. ಹೊಸಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಯಿಂದ ಆಟೋ ಮೇಲೆ ಮರ ಬಿದ್ದು ವ್ಯಕ್ತಿ ಸಾವು: ಹುಬ್ಬಳ್ಳಿ ನಗರದ ಪಿಂಟೋ ರಸ್ತೆಯಲ್ಲಿ ಬುಧವಾರ ಸಂಜೆ ಮಳೆಯಿಂದ ಆಟೋ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಆಟೋದಲ್ಲಿದ್ದ ರಾಬಿನ್ ಮಾರ್ಶ್ ಗಂಭೀರ ಗಾಯಗೊಂಡಿದ್ದರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ರಾಬಿನ್ ಮಾರ್ಶ್ ಅಸುನೀಗಿದ್ದಾರೆ. ಮೃತ ರಾಬಿನ್​, ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರ ನಿವಾಸಿ. ಕಿಮ್ಸ್ ಆಸ್ಪತ್ರೆಗೆ ತಹಶೀಲ್ದಾರ್​​​​​ ಶಶಿಧರ್ ಮಾಡ್ಯಳ ಭೇಟಿ ನೀಡಿದ್ದರು.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ