AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮಳೆಯಿಂದ ಪ್ರತಿಷ್ಠಿತ ವಿಲ್ಲಾಗಳು ಜಲಾವೃತ, ನೀರಿನಲ್ಲಿ ಸಿಲುಕಿದ ಬಸ್, ಶಿಥಿಲ ಶಾಲಾ ಕಟ್ಟಡ ಬಳಸದಿರಲು ಸೂಚನೆ

ಜಿಲ್ಲಾಧಿಕಾರಿ ಆದೇಶದ ಮೇರೆಗೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 15 ಅಡಿಗಳಿದ್ದ ರಾಜಕಾಲುವೆಯನ್ನು ಮುಚ್ಚಿ 8 ಅಡಿಗಳ ಚರಂಡಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

Karnataka Rains: ಮಳೆಯಿಂದ ಪ್ರತಿಷ್ಠಿತ ವಿಲ್ಲಾಗಳು ಜಲಾವೃತ, ನೀರಿನಲ್ಲಿ ಸಿಲುಕಿದ ಬಸ್, ಶಿಥಿಲ ಶಾಲಾ ಕಟ್ಟಡ ಬಳಸದಿರಲು ಸೂಚನೆ
ಕರ್ನಾಟಕದಲ್ಲಿ ಸತತ ಮಳೆ ಮುಂದುವರಿದಿದೆ
TV9 Web
| Edited By: |

Updated on:Nov 19, 2021 | 11:30 PM

Share

ಬೆಂಗಳೂರು: ಭಾರಿ ಮಳೆಯಿಂದಾಗಿ ದೇವನಹಳ್ಳಿ ಸುತ್ತಮುತ್ತಲ ಪ್ರತಿಷ್ಠಿತ ವಿಲ್ಲಾಗಳು ಜಲಾವೃತಗೊಂಡಿವೆ. ವಿಲ್ಲಾ, ಫ್ಲ್ಯಾಟ್​​ಗಳಿಗೆ ತೆರಳಲು ಸಾಧ್ಯವಾಗದೆ ನಿವಾಸಿಗಳ ಪರದಾಡುತ್ತಿದ್ದಾರೆ. ಹಿರಾನಂದನಿ ವಿಲ್ಲಾ, ಫ್ಲ್ಯಾಟ್​ಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ಒತ್ತುವರಿ ನೀರು ಕಟ್ಟಡಕ್ಕೆ ನುಗ್ಗಿ ಅವಾಂತರವಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 15 ಅಡಿಗಳಿದ್ದ ರಾಜಕಾಲುವೆಯನ್ನು ಮುಚ್ಚಿ 8 ಅಡಿಗಳ ಚರಂಡಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಲುವೆ ಮುಚ್ಚಿದ ಹಿನ್ನೆಲೆ ಇದೀಗ ನೀರು ನಿಂತು ಜನರು ಪರದಾಡುವಂತಾಗಿದೆ.

ಅಂಡರ್​ಪಾಸ್​ ನೀರಿನಲ್ಲಿ ನಿಂತ ಬಸ್ ಹಾವೇರಿ ಜಿಲ್ಲೆ ರಾಣೆಬೆನ್ನೂರು ಬಳಿಯಿರುವ ದೇವರಗುಡ್ಡ ರೈಲ್ವೆ ಅಂಡರ್​​ಪಾಸ್​​ನಲ್ಲಿ ನಿಂತಿದ್ದ ನೀರಿನಲ್ಲಿ ಬಸ್​ ಸಿಲುಕಿ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ಬಸ್​​ನಲ್ಲಿದ್ದವರನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಏಣಿ ಮೂಲಕ ಪ್ರಯಾಣಿಕರು, ಡ್ರೈವರ್, ಕಂಡಕ್ಟರ್​ರನ್ನು ರಕ್ಷಿಸಿದರು. ಈ ಬಸ್ ರಾಣೆಬೆನ್ನೂರಿನಿಂದ ಕನವಳ್ಳಿಗೆ ಹೊರಟಿತ್ತು. ರಾಣೆಬೆನ್ನೂರು ನಗರ​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ. ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿರುವುದರಿಂದ ಪ್ರತಿಬಾರಿ ಮಳೆ ಬಂದಾಗಲೂ ಅಂಡರ್​ಬ್ರಿಡ್ಜ್​ನಲ್ಲಿ ನೀರು ತುಂಬಿಕೊಂಡು ಜನರು ಸಂಕಷ್ಟ ಎದುರಿಸುತ್ತಾರೆ.

ಶಿಥಿಲ ಕಟ್ಟಡ ಬಳಸದಂತೆ ಸೂಚನೆ ಬೆಂಗಳೂರು: ರಾಜ್ಯಾದ್ಯಂತ ಸತತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಗೊಂಡ ಕಟ್ಟಡಗಳನ್ನು ಬಳಸಬಾರದು ಎಂದು ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಬಿಇಒಗಳಿಗೆ ಸುತ್ತೋಲೆ ಮೂಲಕ ಸೂಚಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣ ಅನುದಾನ ಅಥವಾ ಇತರ ಅನುದಾನಗಳಡಿ ಕಟ್ಟಡಗಳ ದುರಸ್ತಿ ಮಾಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಕಾರ್ತಿಕ ಮುಗಿಯುವವರೆಗೂ ಮಳೆ ನಿಲ್ಲೋದಿಲ್ಲ ಎಂದು ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಇದನ್ನೂ ಓದಿ: ಮಳೆಯಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ, ನಿರಾಶ್ರಿತರನ್ನು ಆರೈಕೆ ಮಾಡಿ: ಎಸ್​ಡಿಆರ್​ಎಫ್ ಸಭೆಯಲ್ಲಿ ಸೂಚನೆ

Published On - 11:25 pm, Fri, 19 November 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು