AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮಳೆಯಿಂದ ಪ್ರತಿಷ್ಠಿತ ವಿಲ್ಲಾಗಳು ಜಲಾವೃತ, ನೀರಿನಲ್ಲಿ ಸಿಲುಕಿದ ಬಸ್, ಶಿಥಿಲ ಶಾಲಾ ಕಟ್ಟಡ ಬಳಸದಿರಲು ಸೂಚನೆ

ಜಿಲ್ಲಾಧಿಕಾರಿ ಆದೇಶದ ಮೇರೆಗೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 15 ಅಡಿಗಳಿದ್ದ ರಾಜಕಾಲುವೆಯನ್ನು ಮುಚ್ಚಿ 8 ಅಡಿಗಳ ಚರಂಡಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

Karnataka Rains: ಮಳೆಯಿಂದ ಪ್ರತಿಷ್ಠಿತ ವಿಲ್ಲಾಗಳು ಜಲಾವೃತ, ನೀರಿನಲ್ಲಿ ಸಿಲುಕಿದ ಬಸ್, ಶಿಥಿಲ ಶಾಲಾ ಕಟ್ಟಡ ಬಳಸದಿರಲು ಸೂಚನೆ
ಕರ್ನಾಟಕದಲ್ಲಿ ಸತತ ಮಳೆ ಮುಂದುವರಿದಿದೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 19, 2021 | 11:30 PM

Share

ಬೆಂಗಳೂರು: ಭಾರಿ ಮಳೆಯಿಂದಾಗಿ ದೇವನಹಳ್ಳಿ ಸುತ್ತಮುತ್ತಲ ಪ್ರತಿಷ್ಠಿತ ವಿಲ್ಲಾಗಳು ಜಲಾವೃತಗೊಂಡಿವೆ. ವಿಲ್ಲಾ, ಫ್ಲ್ಯಾಟ್​​ಗಳಿಗೆ ತೆರಳಲು ಸಾಧ್ಯವಾಗದೆ ನಿವಾಸಿಗಳ ಪರದಾಡುತ್ತಿದ್ದಾರೆ. ಹಿರಾನಂದನಿ ವಿಲ್ಲಾ, ಫ್ಲ್ಯಾಟ್​ಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ಒತ್ತುವರಿ ನೀರು ಕಟ್ಟಡಕ್ಕೆ ನುಗ್ಗಿ ಅವಾಂತರವಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 15 ಅಡಿಗಳಿದ್ದ ರಾಜಕಾಲುವೆಯನ್ನು ಮುಚ್ಚಿ 8 ಅಡಿಗಳ ಚರಂಡಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಲುವೆ ಮುಚ್ಚಿದ ಹಿನ್ನೆಲೆ ಇದೀಗ ನೀರು ನಿಂತು ಜನರು ಪರದಾಡುವಂತಾಗಿದೆ.

ಅಂಡರ್​ಪಾಸ್​ ನೀರಿನಲ್ಲಿ ನಿಂತ ಬಸ್ ಹಾವೇರಿ ಜಿಲ್ಲೆ ರಾಣೆಬೆನ್ನೂರು ಬಳಿಯಿರುವ ದೇವರಗುಡ್ಡ ರೈಲ್ವೆ ಅಂಡರ್​​ಪಾಸ್​​ನಲ್ಲಿ ನಿಂತಿದ್ದ ನೀರಿನಲ್ಲಿ ಬಸ್​ ಸಿಲುಕಿ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ಬಸ್​​ನಲ್ಲಿದ್ದವರನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಏಣಿ ಮೂಲಕ ಪ್ರಯಾಣಿಕರು, ಡ್ರೈವರ್, ಕಂಡಕ್ಟರ್​ರನ್ನು ರಕ್ಷಿಸಿದರು. ಈ ಬಸ್ ರಾಣೆಬೆನ್ನೂರಿನಿಂದ ಕನವಳ್ಳಿಗೆ ಹೊರಟಿತ್ತು. ರಾಣೆಬೆನ್ನೂರು ನಗರ​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ. ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿರುವುದರಿಂದ ಪ್ರತಿಬಾರಿ ಮಳೆ ಬಂದಾಗಲೂ ಅಂಡರ್​ಬ್ರಿಡ್ಜ್​ನಲ್ಲಿ ನೀರು ತುಂಬಿಕೊಂಡು ಜನರು ಸಂಕಷ್ಟ ಎದುರಿಸುತ್ತಾರೆ.

ಶಿಥಿಲ ಕಟ್ಟಡ ಬಳಸದಂತೆ ಸೂಚನೆ ಬೆಂಗಳೂರು: ರಾಜ್ಯಾದ್ಯಂತ ಸತತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಗೊಂಡ ಕಟ್ಟಡಗಳನ್ನು ಬಳಸಬಾರದು ಎಂದು ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಬಿಇಒಗಳಿಗೆ ಸುತ್ತೋಲೆ ಮೂಲಕ ಸೂಚಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣ ಅನುದಾನ ಅಥವಾ ಇತರ ಅನುದಾನಗಳಡಿ ಕಟ್ಟಡಗಳ ದುರಸ್ತಿ ಮಾಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಕಾರ್ತಿಕ ಮುಗಿಯುವವರೆಗೂ ಮಳೆ ನಿಲ್ಲೋದಿಲ್ಲ ಎಂದು ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಇದನ್ನೂ ಓದಿ: ಮಳೆಯಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ, ನಿರಾಶ್ರಿತರನ್ನು ಆರೈಕೆ ಮಾಡಿ: ಎಸ್​ಡಿಆರ್​ಎಫ್ ಸಭೆಯಲ್ಲಿ ಸೂಚನೆ

Published On - 11:25 pm, Fri, 19 November 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!