Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ಟೈಮ್ಸ್​ ಪತ್ರಿಕೆಯ ಅಂತಿಮ ಆವೃತ್ತಿ ಪ್ರಕಟ.. ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ

ಹಳೆಯ ಪತ್ರಿಕೆಗಳನ್ನು ಹೋಲುವ ಕೆಜಿಎಫ್​ ಟೈಮ್ಸ್​ ಜನವರಿ 8ರಂದು ಬಿಡುಗಡೆಯಾಗಲಿರುವ ಟೀಸರ್​ಗೆ ಭರ್ಜರಿ ಪ್ರಚಾರ ನೀಡಿದೆ. ಈ ಅಂತಿಮ ಆವೃತ್ತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕೆಜಿಎಫ್​ ಟೈಮ್ಸ್​ ಪತ್ರಿಕೆಯ ಅಂತಿಮ ಆವೃತ್ತಿ ಪ್ರಕಟ.. ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ
ಕೆಜಿಎಫ್​ ಟೈಮ್ಸ್​
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 04, 2021 | 6:25 PM

ಪ್ರಶಾಂತ್​ ನೀಲ್​ ನಿರ್ದೇಶನದ, ಯಶ್​ ನಾಯಕತ್ವದ ಬಹುನಿರೀಕ್ಷಿತ ಕೆಜಿಎಫ್​ 2 ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಮೊದಲ ಭಾಗವನ್ನು ಕಂಡು ಮನಸೋತಿರುವ ಪ್ರೇಕ್ಷಕ ಮಹಾಪ್ರಭುಗಳು ಎರಡನೇ ಭಾಗಕ್ಕಾಗಿ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಪ್ರಶಾಂತ್​ ನೀಲ್​ ‘ಕೆಜಿಎಫ್​ ಟೈಮ್ಸ್​’ ಪತ್ರಿಕೆಯನ್ನೇ ಬಿಡುಗಡೆಗೊಳಿಸಿದ್ದಾರೆ.

ಪ್ರೇಕ್ಷಕರ ನಿರೀಕ್ಷೆ, ಕುತೂಹಲಗಳಿಗೆ ತಕ್ಕನಾಗಿ ಪ್ರಚಾರತಂತ್ರ ರೂಪಿಸುತ್ತಿರುವ ಕೆಜಿಎಫ್​ 2 ಸಿನಿ ತಂಡ ಇಂದು ಕೆಜಿಎಫ್​ ಟೈಮ್ಸ್​ ಹೆಸರಿನ ಪತ್ರಿಕೆಯ ಮುಖಪುಟ ತಯಾರಿಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳ ಜೊತೆಗೆ ಇಂಗ್ಲಿಷ್​ ಭಾಷೆಯಲ್ಲೂ ಮುಖಪುಟ ತಯಾರಾಗಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ ಎಬ್ಬಿಸಿದೆ.

ಹಳೆಯ ಕಾಲದ ಪತ್ರಿಕೆಗಳನ್ನು ಹೋಲುವ ಮುಖಪುಟದಲ್ಲಿ ನಾಯಕನಾ ಅಥವಾ ಖಳನಾಯಕನಾ? ಎಂಬ ತಲೆಬರಹ ಎದ್ದು ಕಾಣುತ್ತಿದೆ. ಸುದ್ದಿ ಶೀರ್ಷಿಕೆಗಳಲ್ಲಿ ನಾಯಕ ರಾಕಿಗೆ ಸಂಬಂಧಿಸಿದ ಘಟನೆಗಳನ್ನು ನೆನಪಿಸುವ ಸಂಗತಿಗಳನ್ನು ನೀಡಲಾಗಿದ್ದು, ಮೇಲ್ಭಾಗದ ಬಲ ತುದಿಯಲ್ಲಿ ಅಂತಿಮ ಆವೃತ್ತಿ ಎನ್ನುವುದೂ ಅಚ್ಚಾಗಿದೆ.

ಜನವರಿ 8ರಂದು ಕೆಜಿಎಫ್​ 2 ಚಿತ್ರದ ಟೀಸರ್​ ಬಿಡುಗಡೆ ಆಗಲಿದ್ದು, ಅದರ ಪ್ರಯುಕ್ತವೇ ಪತ್ರಿಕೆಯ ಮುಖಪುಟ ರಚಿಸಲಾಗಿದೆ. ಫೇಸ್​ಬುಕ್​, ಟ್ವಿಟರ್​, ಇನ್​ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಕೆಜಿಎಫ್​ ಟೈಮ್ಸ್​ ಅಭಿಮಾನಿಗಳ ನಿರೀಕ್ಷೆಯನ್ನು ಉತ್ತುಂಗಕ್ಕೆ ಕೊಂಡೊಯ್ದಿದೆ.

ಪ್ರಭಾಸ್​ ಬೆನ್ನಲ್ಲೇ ಮತ್ತೋರ್ವ ತೆಲುಗು ಸ್ಟಾರ್​ ನಟನಿಗೆ ಪ್ರಶಾಂತ್​ ನೀಲ್​ ಡೈರೆಕ್ಷನ್​?

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ