AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ಟೈಮ್ಸ್​ ಪತ್ರಿಕೆಯ ಅಂತಿಮ ಆವೃತ್ತಿ ಪ್ರಕಟ.. ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ

ಹಳೆಯ ಪತ್ರಿಕೆಗಳನ್ನು ಹೋಲುವ ಕೆಜಿಎಫ್​ ಟೈಮ್ಸ್​ ಜನವರಿ 8ರಂದು ಬಿಡುಗಡೆಯಾಗಲಿರುವ ಟೀಸರ್​ಗೆ ಭರ್ಜರಿ ಪ್ರಚಾರ ನೀಡಿದೆ. ಈ ಅಂತಿಮ ಆವೃತ್ತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕೆಜಿಎಫ್​ ಟೈಮ್ಸ್​ ಪತ್ರಿಕೆಯ ಅಂತಿಮ ಆವೃತ್ತಿ ಪ್ರಕಟ.. ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ
ಕೆಜಿಎಫ್​ ಟೈಮ್ಸ್​
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 04, 2021 | 6:25 PM

ಪ್ರಶಾಂತ್​ ನೀಲ್​ ನಿರ್ದೇಶನದ, ಯಶ್​ ನಾಯಕತ್ವದ ಬಹುನಿರೀಕ್ಷಿತ ಕೆಜಿಎಫ್​ 2 ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಮೊದಲ ಭಾಗವನ್ನು ಕಂಡು ಮನಸೋತಿರುವ ಪ್ರೇಕ್ಷಕ ಮಹಾಪ್ರಭುಗಳು ಎರಡನೇ ಭಾಗಕ್ಕಾಗಿ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಪ್ರಶಾಂತ್​ ನೀಲ್​ ‘ಕೆಜಿಎಫ್​ ಟೈಮ್ಸ್​’ ಪತ್ರಿಕೆಯನ್ನೇ ಬಿಡುಗಡೆಗೊಳಿಸಿದ್ದಾರೆ.

ಪ್ರೇಕ್ಷಕರ ನಿರೀಕ್ಷೆ, ಕುತೂಹಲಗಳಿಗೆ ತಕ್ಕನಾಗಿ ಪ್ರಚಾರತಂತ್ರ ರೂಪಿಸುತ್ತಿರುವ ಕೆಜಿಎಫ್​ 2 ಸಿನಿ ತಂಡ ಇಂದು ಕೆಜಿಎಫ್​ ಟೈಮ್ಸ್​ ಹೆಸರಿನ ಪತ್ರಿಕೆಯ ಮುಖಪುಟ ತಯಾರಿಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳ ಜೊತೆಗೆ ಇಂಗ್ಲಿಷ್​ ಭಾಷೆಯಲ್ಲೂ ಮುಖಪುಟ ತಯಾರಾಗಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ ಎಬ್ಬಿಸಿದೆ.

ಹಳೆಯ ಕಾಲದ ಪತ್ರಿಕೆಗಳನ್ನು ಹೋಲುವ ಮುಖಪುಟದಲ್ಲಿ ನಾಯಕನಾ ಅಥವಾ ಖಳನಾಯಕನಾ? ಎಂಬ ತಲೆಬರಹ ಎದ್ದು ಕಾಣುತ್ತಿದೆ. ಸುದ್ದಿ ಶೀರ್ಷಿಕೆಗಳಲ್ಲಿ ನಾಯಕ ರಾಕಿಗೆ ಸಂಬಂಧಿಸಿದ ಘಟನೆಗಳನ್ನು ನೆನಪಿಸುವ ಸಂಗತಿಗಳನ್ನು ನೀಡಲಾಗಿದ್ದು, ಮೇಲ್ಭಾಗದ ಬಲ ತುದಿಯಲ್ಲಿ ಅಂತಿಮ ಆವೃತ್ತಿ ಎನ್ನುವುದೂ ಅಚ್ಚಾಗಿದೆ.

ಜನವರಿ 8ರಂದು ಕೆಜಿಎಫ್​ 2 ಚಿತ್ರದ ಟೀಸರ್​ ಬಿಡುಗಡೆ ಆಗಲಿದ್ದು, ಅದರ ಪ್ರಯುಕ್ತವೇ ಪತ್ರಿಕೆಯ ಮುಖಪುಟ ರಚಿಸಲಾಗಿದೆ. ಫೇಸ್​ಬುಕ್​, ಟ್ವಿಟರ್​, ಇನ್​ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಕೆಜಿಎಫ್​ ಟೈಮ್ಸ್​ ಅಭಿಮಾನಿಗಳ ನಿರೀಕ್ಷೆಯನ್ನು ಉತ್ತುಂಗಕ್ಕೆ ಕೊಂಡೊಯ್ದಿದೆ.

ಪ್ರಭಾಸ್​ ಬೆನ್ನಲ್ಲೇ ಮತ್ತೋರ್ವ ತೆಲುಗು ಸ್ಟಾರ್​ ನಟನಿಗೆ ಪ್ರಶಾಂತ್​ ನೀಲ್​ ಡೈರೆಕ್ಷನ್​?

ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು