AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ಟೈಮ್ಸ್​ ಪತ್ರಿಕೆಯ ಅಂತಿಮ ಆವೃತ್ತಿ ಪ್ರಕಟ.. ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ

ಹಳೆಯ ಪತ್ರಿಕೆಗಳನ್ನು ಹೋಲುವ ಕೆಜಿಎಫ್​ ಟೈಮ್ಸ್​ ಜನವರಿ 8ರಂದು ಬಿಡುಗಡೆಯಾಗಲಿರುವ ಟೀಸರ್​ಗೆ ಭರ್ಜರಿ ಪ್ರಚಾರ ನೀಡಿದೆ. ಈ ಅಂತಿಮ ಆವೃತ್ತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕೆಜಿಎಫ್​ ಟೈಮ್ಸ್​ ಪತ್ರಿಕೆಯ ಅಂತಿಮ ಆವೃತ್ತಿ ಪ್ರಕಟ.. ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ
ಕೆಜಿಎಫ್​ ಟೈಮ್ಸ್​
Skanda
| Edited By: |

Updated on: Jan 04, 2021 | 6:25 PM

Share

ಪ್ರಶಾಂತ್​ ನೀಲ್​ ನಿರ್ದೇಶನದ, ಯಶ್​ ನಾಯಕತ್ವದ ಬಹುನಿರೀಕ್ಷಿತ ಕೆಜಿಎಫ್​ 2 ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಮೊದಲ ಭಾಗವನ್ನು ಕಂಡು ಮನಸೋತಿರುವ ಪ್ರೇಕ್ಷಕ ಮಹಾಪ್ರಭುಗಳು ಎರಡನೇ ಭಾಗಕ್ಕಾಗಿ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಪ್ರಶಾಂತ್​ ನೀಲ್​ ‘ಕೆಜಿಎಫ್​ ಟೈಮ್ಸ್​’ ಪತ್ರಿಕೆಯನ್ನೇ ಬಿಡುಗಡೆಗೊಳಿಸಿದ್ದಾರೆ.

ಪ್ರೇಕ್ಷಕರ ನಿರೀಕ್ಷೆ, ಕುತೂಹಲಗಳಿಗೆ ತಕ್ಕನಾಗಿ ಪ್ರಚಾರತಂತ್ರ ರೂಪಿಸುತ್ತಿರುವ ಕೆಜಿಎಫ್​ 2 ಸಿನಿ ತಂಡ ಇಂದು ಕೆಜಿಎಫ್​ ಟೈಮ್ಸ್​ ಹೆಸರಿನ ಪತ್ರಿಕೆಯ ಮುಖಪುಟ ತಯಾರಿಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳ ಜೊತೆಗೆ ಇಂಗ್ಲಿಷ್​ ಭಾಷೆಯಲ್ಲೂ ಮುಖಪುಟ ತಯಾರಾಗಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಹವಾ ಎಬ್ಬಿಸಿದೆ.

ಹಳೆಯ ಕಾಲದ ಪತ್ರಿಕೆಗಳನ್ನು ಹೋಲುವ ಮುಖಪುಟದಲ್ಲಿ ನಾಯಕನಾ ಅಥವಾ ಖಳನಾಯಕನಾ? ಎಂಬ ತಲೆಬರಹ ಎದ್ದು ಕಾಣುತ್ತಿದೆ. ಸುದ್ದಿ ಶೀರ್ಷಿಕೆಗಳಲ್ಲಿ ನಾಯಕ ರಾಕಿಗೆ ಸಂಬಂಧಿಸಿದ ಘಟನೆಗಳನ್ನು ನೆನಪಿಸುವ ಸಂಗತಿಗಳನ್ನು ನೀಡಲಾಗಿದ್ದು, ಮೇಲ್ಭಾಗದ ಬಲ ತುದಿಯಲ್ಲಿ ಅಂತಿಮ ಆವೃತ್ತಿ ಎನ್ನುವುದೂ ಅಚ್ಚಾಗಿದೆ.

ಜನವರಿ 8ರಂದು ಕೆಜಿಎಫ್​ 2 ಚಿತ್ರದ ಟೀಸರ್​ ಬಿಡುಗಡೆ ಆಗಲಿದ್ದು, ಅದರ ಪ್ರಯುಕ್ತವೇ ಪತ್ರಿಕೆಯ ಮುಖಪುಟ ರಚಿಸಲಾಗಿದೆ. ಫೇಸ್​ಬುಕ್​, ಟ್ವಿಟರ್​, ಇನ್​ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಕೆಜಿಎಫ್​ ಟೈಮ್ಸ್​ ಅಭಿಮಾನಿಗಳ ನಿರೀಕ್ಷೆಯನ್ನು ಉತ್ತುಂಗಕ್ಕೆ ಕೊಂಡೊಯ್ದಿದೆ.

ಪ್ರಭಾಸ್​ ಬೆನ್ನಲ್ಲೇ ಮತ್ತೋರ್ವ ತೆಲುಗು ಸ್ಟಾರ್​ ನಟನಿಗೆ ಪ್ರಶಾಂತ್​ ನೀಲ್​ ಡೈರೆಕ್ಷನ್​?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್