Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ

ಇಂದು (ಜೂನ್ 6) ಬೆಳ್ಳಂಬೆಳಗ್ಗೆ ಭೇಟಿ ನೀಡಿದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗೆ ಕೋರಿದ್ದಾರೆ. ಇಡೀ ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿಎಂಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ ರೋಹಿಣಿ, ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದ್ದರು.

ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ
ರೋಹಿಣಿ ಸಿಂಧೂರಿ
Follow us
TV9 Web
| Updated By: sandhya thejappa

Updated on:Jun 06, 2021 | 12:09 PM

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪನಾಗ್​ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ಹೊರ ಬಿದ್ದ ಬಿನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಆಗಮಿಸಿದ್ದಾರೆ.

ಸಿಎಂ ನಿವಾಸ ಕಾವೇರಿಗೆ ಇಂದು (ಜೂನ್ 6) ಬೆಳ್ಳಂಬೆಳಗ್ಗೆ ಭೇಟಿ ನೀಡಿದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗೆ ಕೋರಿದ್ದಾರೆ. ಇಡೀ ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿಎಂಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ ರೋಹಿಣಿ, ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದ್ದರು. ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೋಹಿಣಿ ಮನವಿಯನ್ನು ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ವರ್ಗಾವಣೆ ತಡೆ ಅಸಾಧ್ಯ ಎಂದು ಸಿಎಂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಮನವಿಯನ್ನು ಒಪ್ಪದ ಕಾರಣ ನಿರಾಸೆಯಿಂದ ರೋಹಿಣಿ ಸಿಂಧೂರಿ ವಾಪಸಾಗಿದ್ದಾರೆ. ಸಿಎಂ ಭೇಟಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ್ದ ಮೈಸೂರು ಜಿಲ್ಲಾಧಿಕಾರಿ ಸಿಂಧೂರಿ ಸುಮಾರು ಅರ್ಧ ಗಂಟೆ ಸಿಎಂ ನಿವಾಸದಲ್ಲಿ ಇದ್ದರು. ಐಎಎಸ್ ಅಧಿಕಾರಿಗಳ ಕಿತ್ತಾಟ ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆಗೆ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯನ್ನು ರದ್ದು ಮಾಡುವಂತೆ ರೋಹಿಣಿ ಕೇಳಿದರು. ಒಮ್ಮೆ ವರ್ಗಾವಣೆಯಾದ ಬಳಿಕ ಅದು ಸಾಧ್ಯವಾಗುವುದಿಲ್ಲ. ಹೀಗಾಗಿ ರಿಪೋರ್ಟ್ ಮಾಡಿಕೊಳ್ಳುವಂತೆ ರೋಹಿಣಿ ಸಿಂಧೂರಿಯವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ

Mysuru: ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ಇಬ್ಬರೂ ಮೈಸೂರಿನಿಂದ ವರ್ಗಾವಣೆ, ಹೊಸ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರ ನೇಮಕ

ರೋಹಿಣಿ ಸಿಂಧೂರಿ ದಕ್ಷ ಅಧಿಕಾರಿ; ಅವರ ವರ್ಗಾವಣೆಗೆ ಪಿತೂರಿ ನಡೀತಿದೆ: ವಾಟಾಳ್ ನಾಗರಾಜ್ ಆಕ್ರೋಶ

(Rohini Sindhuri has visited the chief minister house and requested the transfer be withheld)

Published On - 10:32 am, Sun, 6 June 21

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್