AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ: ಇನ್​​ಸ್ಪೆಕ್ಟರ್​ಗೆ ರೌಡಿಶೀಟರ್, ಸಹಚರರ ಆವಾಜ್

ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ರೌಡಿಶೀಟರ್​ಗಳು ಅನುಚಿತವಾಗಿ ವರ್ತಿಸಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ.ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಜೊತೆ ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಮತ್ತು ವಿನೋದ್​ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ: ಇನ್​​ಸ್ಪೆಕ್ಟರ್​ಗೆ ರೌಡಿಶೀಟರ್, ಸಹಚರರ ಆವಾಜ್
KUSHAL V
| Edited By: ಸಾಧು ಶ್ರೀನಾಥ್​|

Updated on:Nov 27, 2020 | 12:36 PM

Share

ಹುಬ್ಬಳ್ಳಿ: ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ರೌಡಿಶೀಟರ್​ ಅನುಚಿತವಾಗಿ ವರ್ತಿಸಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ. ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಜೊತೆ ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಮತ್ತು ವಿನೋದ್​ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಏನಿದು ಪ್ರಕರಣ? ಅಂದ ಹಾಗೆ, ನವನಗರದಲ್ಲಿ ರೌಡಿಶೀಟರ್ ಪ್ರವೀಣ್ ಪೂಜಾರಿ ಮತ್ತು ಮಲ್ಲಯ್ಯನ ನಡುವೆ ಜಗಳ ಶುರುವಾದ ಹಿನ್ನೆಲೆಯಲ್ಲಿ ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಗಲಾಟೆ ಬಿಡಿಸಲು ಹೋಗಿದ್ದರು. ಈ ವೇಳೆ ಪ್ರವೀಣ್ ಪೂಜಾರಿ ಮತ್ತು ಮಲ್ಲಯ್ಯ ಪ್ರಭು ಸೂರಿನ ಮೇಲೆ ಆವಾಜ್ ಹಾಕಿದ್ದಾರೆ. ಜೊತೆಗೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೆ, ಪ್ರವೀಣ್ ಜೊತೆಗಿದ್ದ ವಿನೋದ್‌ ಪಾಟೀಲ್ ಎಂಬಾತ ಸಹ ಪೊಲೀಸರಿಗೆ ಆವಾಜ್​ ಹಾಕಿದ್ದಾನಂತೆ. ಠಾಣೆಗೆ ಬಂದು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಇನ್​​ಸ್ಪೆಕ್ಟರ್​ ಹೇಳಿದರೆ ನಾವು ಬರೋಕಾಗಲ್ಲ ಎಂದು ಹೇಳಿ ವಿನೋದ್ ಅಲ್ಲಿಂದ ತೆರಳಿದ್ದಾನೆ. ಜೊತೆಗೆ, ವಕೀಲ  ವೃತ್ತಿಯಲ್ಲಿರೋ ವಿನೋದ್ ಪಾಟೀಲ್ ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ ಎಂದು ಸಹ ಹೇಳಿದ್ದಾನಂತೆ.

ಸದ್ಯ, ಕರ್ತವ್ಯನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದಡಿ ನವನಗರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ಠಾಣಾಧಿಕಾರಿ ಪ್ರಭು ಸೂರಿನ ಖುದ್ದು ದೂರು ನೀಡಿದ್ದಾರೆ.

Published On - 11:28 am, Fri, 27 November 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್