AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ: ಇನ್​​ಸ್ಪೆಕ್ಟರ್​ಗೆ ರೌಡಿಶೀಟರ್, ಸಹಚರರ ಆವಾಜ್

ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ರೌಡಿಶೀಟರ್​ಗಳು ಅನುಚಿತವಾಗಿ ವರ್ತಿಸಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ.ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಜೊತೆ ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಮತ್ತು ವಿನೋದ್​ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ: ಇನ್​​ಸ್ಪೆಕ್ಟರ್​ಗೆ ರೌಡಿಶೀಟರ್, ಸಹಚರರ ಆವಾಜ್
KUSHAL V
| Edited By: |

Updated on:Nov 27, 2020 | 12:36 PM

Share

ಹುಬ್ಬಳ್ಳಿ: ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ರೌಡಿಶೀಟರ್​ ಅನುಚಿತವಾಗಿ ವರ್ತಿಸಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ. ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಜೊತೆ ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಮತ್ತು ವಿನೋದ್​ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಏನಿದು ಪ್ರಕರಣ? ಅಂದ ಹಾಗೆ, ನವನಗರದಲ್ಲಿ ರೌಡಿಶೀಟರ್ ಪ್ರವೀಣ್ ಪೂಜಾರಿ ಮತ್ತು ಮಲ್ಲಯ್ಯನ ನಡುವೆ ಜಗಳ ಶುರುವಾದ ಹಿನ್ನೆಲೆಯಲ್ಲಿ ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಗಲಾಟೆ ಬಿಡಿಸಲು ಹೋಗಿದ್ದರು. ಈ ವೇಳೆ ಪ್ರವೀಣ್ ಪೂಜಾರಿ ಮತ್ತು ಮಲ್ಲಯ್ಯ ಪ್ರಭು ಸೂರಿನ ಮೇಲೆ ಆವಾಜ್ ಹಾಕಿದ್ದಾರೆ. ಜೊತೆಗೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೆ, ಪ್ರವೀಣ್ ಜೊತೆಗಿದ್ದ ವಿನೋದ್‌ ಪಾಟೀಲ್ ಎಂಬಾತ ಸಹ ಪೊಲೀಸರಿಗೆ ಆವಾಜ್​ ಹಾಕಿದ್ದಾನಂತೆ. ಠಾಣೆಗೆ ಬಂದು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಇನ್​​ಸ್ಪೆಕ್ಟರ್​ ಹೇಳಿದರೆ ನಾವು ಬರೋಕಾಗಲ್ಲ ಎಂದು ಹೇಳಿ ವಿನೋದ್ ಅಲ್ಲಿಂದ ತೆರಳಿದ್ದಾನೆ. ಜೊತೆಗೆ, ವಕೀಲ  ವೃತ್ತಿಯಲ್ಲಿರೋ ವಿನೋದ್ ಪಾಟೀಲ್ ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ ಎಂದು ಸಹ ಹೇಳಿದ್ದಾನಂತೆ.

ಸದ್ಯ, ಕರ್ತವ್ಯನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದಡಿ ನವನಗರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ಠಾಣಾಧಿಕಾರಿ ಪ್ರಭು ಸೂರಿನ ಖುದ್ದು ದೂರು ನೀಡಿದ್ದಾರೆ.

Published On - 11:28 am, Fri, 27 November 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ