AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ: ಇನ್​​ಸ್ಪೆಕ್ಟರ್​ಗೆ ರೌಡಿಶೀಟರ್, ಸಹಚರರ ಆವಾಜ್

ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ರೌಡಿಶೀಟರ್​ಗಳು ಅನುಚಿತವಾಗಿ ವರ್ತಿಸಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ.ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಜೊತೆ ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಮತ್ತು ವಿನೋದ್​ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ: ಇನ್​​ಸ್ಪೆಕ್ಟರ್​ಗೆ ರೌಡಿಶೀಟರ್, ಸಹಚರರ ಆವಾಜ್
KUSHAL V
| Edited By: |

Updated on:Nov 27, 2020 | 12:36 PM

Share

ಹುಬ್ಬಳ್ಳಿ: ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ರೌಡಿಶೀಟರ್​ ಅನುಚಿತವಾಗಿ ವರ್ತಿಸಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ. ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಜೊತೆ ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಮತ್ತು ವಿನೋದ್​ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಏನಿದು ಪ್ರಕರಣ? ಅಂದ ಹಾಗೆ, ನವನಗರದಲ್ಲಿ ರೌಡಿಶೀಟರ್ ಪ್ರವೀಣ್ ಪೂಜಾರಿ ಮತ್ತು ಮಲ್ಲಯ್ಯನ ನಡುವೆ ಜಗಳ ಶುರುವಾದ ಹಿನ್ನೆಲೆಯಲ್ಲಿ ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಗಲಾಟೆ ಬಿಡಿಸಲು ಹೋಗಿದ್ದರು. ಈ ವೇಳೆ ಪ್ರವೀಣ್ ಪೂಜಾರಿ ಮತ್ತು ಮಲ್ಲಯ್ಯ ಪ್ರಭು ಸೂರಿನ ಮೇಲೆ ಆವಾಜ್ ಹಾಕಿದ್ದಾರೆ. ಜೊತೆಗೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೆ, ಪ್ರವೀಣ್ ಜೊತೆಗಿದ್ದ ವಿನೋದ್‌ ಪಾಟೀಲ್ ಎಂಬಾತ ಸಹ ಪೊಲೀಸರಿಗೆ ಆವಾಜ್​ ಹಾಕಿದ್ದಾನಂತೆ. ಠಾಣೆಗೆ ಬಂದು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಇನ್​​ಸ್ಪೆಕ್ಟರ್​ ಹೇಳಿದರೆ ನಾವು ಬರೋಕಾಗಲ್ಲ ಎಂದು ಹೇಳಿ ವಿನೋದ್ ಅಲ್ಲಿಂದ ತೆರಳಿದ್ದಾನೆ. ಜೊತೆಗೆ, ವಕೀಲ  ವೃತ್ತಿಯಲ್ಲಿರೋ ವಿನೋದ್ ಪಾಟೀಲ್ ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ ಎಂದು ಸಹ ಹೇಳಿದ್ದಾನಂತೆ.

ಸದ್ಯ, ಕರ್ತವ್ಯನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದಡಿ ನವನಗರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ಠಾಣಾಧಿಕಾರಿ ಪ್ರಭು ಸೂರಿನ ಖುದ್ದು ದೂರು ನೀಡಿದ್ದಾರೆ.

Published On - 11:28 am, Fri, 27 November 20

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ