AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ನಿಂದ ಹಿಂದಿರುಗುವಾಗ ಅಡ್ಡಗಟ್ಟಿ ಮಾಲೂರು ರೌಡಿಯ ಕೊಲೆ

ಕೋಲಾರದ ಮಾಲೂರು ಮುಖ್ಯರಸ್ತೆ ಗಂಗಾಪುರ ಗೇಟ್​ ಬಳಿ ಬರ್ಬರ ಹತ್ಯೆ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಅರಳೇರಿ ಗ್ರಾಮದ ಗಿರೀಶ್​ (30) ಕೊಲೆಯಾದ ವ್ಯಕ್ತಿ.

ಕೋರ್ಟ್​ನಿಂದ ಹಿಂದಿರುಗುವಾಗ ಅಡ್ಡಗಟ್ಟಿ ಮಾಲೂರು ರೌಡಿಯ ಕೊಲೆ
ಕೊಲೆಯಾದ ರೌಡಿಶೀಟರ್ ಗಿರೀಶ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 18, 2021 | 11:02 PM

Share

ಕೋಲಾರ: ಹಳೇ ದ್ವೇಷದ ಹಿನ್ನೆಲೆ ಹಾಡಹಗಲೇ ಯುವಕನನ್ನು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ಮಾಲೂರು ಮುಖ್ಯರಸ್ತೆ ಗಂಗಾಪುರ ಗೇಟ್​ ಬಳಿ ಬರ್ಬರ ಹತ್ಯೆ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಅರಳೇರಿ ಗ್ರಾಮದ ಗಿರೀಶ್​ (30) ಕೊಲೆಯಾದ ವ್ಯಕ್ತಿ.

ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್​ ಆಗಿದ್ದ ಗಿರೀಶ್​ ಗುರುವಾರ (ಮಾರ್ಚ್ 18) ಸಹ ಕೋಲಾರದ ನ್ಯಾಯಾಲಯಕ್ಕೆ ಹಾಜರಾಗಿ ಮಾಲೂರಿಗೆ ವಾಪಸ್ಸಾಗುವ ವೇಳೆ ಕಾರ್​ನಲ್ಲಿ ಬಂದು ಅಡ್ಡಗಟ್ಟಿದ ಯುವಕರ ತಂಡ ಕಣ್ಣಿಗೆ ಕಾರದ ಪುಡಿ ಎರಚಿ, ಮಚ್ಚು ಹಾಗೂ ಲಾಂಗ್​ಗಳಿಂದ ಹಲ್ಲೆಮಾಡಿದೆ. ಮುಖ ಗುರುತೇ ಸಿಗದ ಹಾಗೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ತಂಡ ಗಿರೀಶ್​ ನೆಲಕ್ಕೆ ಬೀಳುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಮಾಲೂರು ಪೊಲೀಸರು ಅರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇನ್ನು ಹಾಡಹಗಲೇ ನೆತ್ತರು ಹರಿದಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್​ ರೆಡ್ಡಿ, ಹೆಚ್ಚುವರಿ ಎಸ್ಪಿ ಜಾಹ್ನವಿ ಸೇರಿದಂತೆ ಬರಳಚ್ಚು ತಜ್ನರು, ಶ್ವಾನದಳ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಹಳೇ ದ್ವೇಷದ ಹಿನ್ನೆಲೆ ಈ ಘಟನೆ ನಡೆದಿರಬಹುದೆಂಬ ಅನುಮಾನದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ 8 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ

Published On - 11:00 pm, Thu, 18 March 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?