AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: FIR ದಾಖಲು, ಎನ್​​ಐಎ ಎಂಟ್ರಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲು ಪ್ರಕರಣಗಳು ದಾಖಲಾಗಿವೆ. ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಎನ್​​ಐಎ ಕೂಡ ಮಧ್ಯೆ ಪ್ರವೇಶಿಸಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: FIR ದಾಖಲು, ಎನ್​​ಐಎ ಎಂಟ್ರಿ
ಪರಪ್ಪನ ಅಗ್ರಹಾರ ಜೈಲು
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 10, 2025 | 5:11 PM

Share

ಬೆಂಗಳೂರು, ನವೆಂಬರ್​ 10: ಪರಪ್ಪನ ಅಗ್ರಹಾರ ಜೈಲಿನ (parappana agrahara jail) ಕರ್ಮಕಾಂಡಗಳು ಒಂದೊಂದಾಗಿ ಹೊರಬರುತ್ತಿವೆ. ಐಷಾರಾಮಿ ಬದುಕಿನ ಒಂದೊಂದೇ ಕರಾಳತೆ ಬಯಲಾಗುತ್ತಿದೆ. ಈ ಬೆನ್ನಲ್ಲೇ ಗೃಹ ಇಲಾಖೆ ಅಲರ್ಟ್ ಆಗಿದೆ. ಇಬ್ಬರು ಜೈಲಧಿಕಾರಿಗಳ ತಲೆದಂಡವಾಗಿದೆ. ಇದೀಗ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಎನ್​​ಸಿಆರ್​​ ಮತ್ತು ಒಂದು ಎಫ್​​ಐಆರ್​​​ ದಾಖಲಾಗಿದೆ. ಜೊತೆಗೆ ಎನ್​​ಐಎ ಎಂಟ್ರಿ ಆಗಿದೆ.

ವಿಕೃತ ಕಾಮಿ, ನಟೋರಿಯಸ್ ರೌಡಿಶೀಟರ್​ಗಳು, ಅಷ್ಟೇ ಯಾಕೆ ಮೋಸ್ಟ್ ವಾಂಟೆಡ್ ಉಗ್ರಗಾಮಿಗಳು ಪರಪ್ಪನ ಅಗ್ರಹಾರ ಜೈಲಿಗೆ ಯಾವುದೋ ರೆಸಾರ್ಟ್​​ಗೆ ಬಂದಂತಿದ್ದಾರೆ. ಹೈಪ್ರೊಫೈಲ್ ಕೇಸ್​ಗಳ ಆರೋಪಿಗಳು, ಅಪರಾಧಿಗಳು ಶಿಕ್ಷೆ ಸನುಭವಿಸುತ್ತಿರುವ ಈ ಜೈಲು ಕ್ರಿಮಿನಲ್​ಗಳ ಪಾಲಿಗೆ ಸ್ವರ್ಗ. ಅದಕ್ಕೆ ಸಾಕ್ಷಿಯಾಗಿ ಕೈದಿಗಳು ಮೋಜು ಮಸ್ತಿ ಮಾಡುತ್ತಿದ್ದ ಸಾಲು ಸಾಲು ವಿಡಿಯೋಗಳು ರಾಜ್ಯದ ಜನರನ್ನು ಬೆಚ್ಚಿಬೀಳಿಸಿವೆ.

ಒಟ್ಟು ನಾಲ್ಕು ಪ್ರಕರಣಗಳ ದಾಖಲು

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಈವರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಒಟ್ಟು ನಾಲ್ಕು ದೂರು ದಾಖಲಾಗಿವೆ. ಈ ಪೈಕಿ ಮೂರು ಎನ್​​ಸಿ ಆರ್​​ ದಾಖಲಾದರೆ, ಒಂದು ಎಫ್ಐಆರ್​​ ದಾಖಲಾಗಿದೆ.

ಇದನ್ನೂ ಓದಿ: ವಿಧಾನಸೌಧದಲ್ಲೇ ಭಯೋತ್ಪಾದಕರನ್ನಿಟ್ಟುಕೊಂಡು ಪರಪ್ಪನ ಅಗ್ರಹಾರ ಜೈಲಿನ ಬಗ್ಗೆ ಮಾತನಾಡ್ತಾರೆ: ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಇಂದು ಸಸ್ಪೆಂಡ್ ಆಗಿರುವ ಜೈಲಿನ ಅಧೀಕ್ಷಕ ಮ್ಯಾಗೇರಿ ಅವರಿಂದಲೇ ದೂರು ನೀಡಲಾಗಿದೆ. ಅವರ ದೂರಿನ ಮೇರೆಗೆ ಜೈಲಿನಲ್ಲಿ ತಟ್ಟೆ, ಡ್ರಮ್ ಬಾರಿಸಿ ಡ್ಯಾನ್ಸ್ ಮಾಡಿದ್ದ ಸಜಾ ಬಂಧಿ ಪ್ಯಾಟ್ರಿಕ್ ಟೀಮ್​​​ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಎನ್​​ಸಿಆರ್​​ ಪ್ರಕರಣಗಳನ್ನ ಪೊಲೀಸರು ಎಫ್ಐಆರ್ ಮಾಡಿಕೊಳ್ಳಲಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಎನ್​ಐಎ ಅಧಿಕಾರಿಗಳ ಎಂಟ್ರಿ

ಇನ್ನು ಪರಪ್ಪನ ಅಗ್ರಹಾರದಲ್ಲಿ ಉಗ್ರರ ಕೈಗೆ ಮೊಬೈಲ್ ಸಿಗುತ್ತಿದ್ದಂತೆ ಎನ್​ಐಎ ಅಧಿಕಾರಿಗಳ ಎಂಟ್ರಿಯಾಗಿದೆ.  ಸಿಸಿಬಿ ಕಚೇರಿಗೆ ಬಂದ ಅಧಿಕಾರಿಗಳ ತಂಡ, ಜೈಲಿನಲ್ಲಿ ಯಾವಾಗ ವಿಡಿಯೋ ರೆಕಾರ್ಡ್ ಮಾಡಲಾಗಿದೆ? ಜೈಲಿನಲ್ಲಿ ಉಗ್ರರು ಬಳಸುತ್ತಿದ್ದ ಮೊಬೈಲ್ ಫೋನ್ ಸಿಕ್ಕಿದೆಯಾ ಎಂಬೆಲ್ಲಾ ಮಾಹಿತಿ ಪಡೆದಿದ್ದಾರೆ. ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿಲ್ಲ. ಈ ಬಗ್ಗೆ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ: ಅಶೋಕ್

ಇಂದು ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸಭೆ ಮಾಡಿದರು. ಸುಮಾರು ಎರಡು ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪರಮೇಶ್ವರ್, ತರಾಟೆಗೆ ತೆಗೆದುಕೊಂಡರು. ಸಭೆಯ ಬಳಿಕ ಮಾತನಾಡಿದ ಪರಮೇಶ್ವರ್, ಜೈಲು ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ, ಹಾಗೂ ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್​ರನ್ನು ಬೇರೆ ಕಡೆಗೆ ಎತ್ತಂಗಡಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:58 pm, Mon, 10 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ