AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

ದುಡ್ಡು ಕೊಟ್ಟರೆ ಜೈಲಲ್ಲಿ ಏನು ಬೇಕಾದರೂ ಸಿಗುತ್ತೆ ಎಂಬ ಆರೋಪಗಳಿಗೆ ಈಗ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಗಳಿಗೆ ಫೈವ್​ ಸ್ಟಾರ್​ ಹೋಟೆಲ್​ ರೀತಿ ಸೌಲಭ್ಯ ನೀಡಿರುವ ಫೋಟೋಗಳು ವೈರಲ್​ ಆಗಿದ್ದು, ಜೈಲಿನಲ್ಲಿನ ಕೈದಿಗಳ ಬಿಂದಾಸ್​ ಜೀವನ ಹೇಗಿದೆ ಎಂಬುದು ಅನಾವರಣಗೊಂಡಿದೆ.

ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?
ಪರಪ್ಪನ ಅಗ್ರಹಾರ ಜೈಲು
ರಾಮು, ಆನೇಕಲ್​
| Edited By: |

Updated on:Oct 09, 2025 | 3:04 PM

Share

ಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ ಟೀಕೆಗೆ ಗ್ರಾಸವಾಗಿತ್ತು. ಕೈದಿಗಳಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದವು. ಈ ವಿಷಯ ಮಾಸುವ ಮುನ್ನವೇ ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ದುಡ್ಡು ಕೊಟ್ಟರೆ ಜೈಲಿನಲ್ಲಿ ಏನು ಬೇಕಾದರೂ ಸಿಗುತ್ತೆ ಎಂಬ ವಿಚಾರಕ್ಕೆ ಮತ್ತಷ್ಟು ಸಾಕ್ಷಿಗಳು ಸಿಕ್ಕಿದ್ದು, ಫೈವ್​ ಸ್ಟಾರ್ ಹೋಟೆಲ್ ರೀತಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯದ ನೀಡಿರುವ ಫೋಟೋಗಳು ವೈರಲ್​ ಆಗಿವೆ.

ಗುಬ್ಬಚ್ಚಿ ಸೀನಾ ಮತ್ತು ಆತನ ಸಹಚರರಿಗೆ ಜೈಲಲ್ಲಿ ಹೈಫೈ ವ್ಯವಸ್ಥೆ ನೀಡಲಾಗಿದೆ. ವಿಚಾರಣಾಧೀನ ಕೈದಿಗಳಿಗೆ LED ಟಿವಿ ಸೌಲಭ್ಯದ ಜೊತೆಗೆ ಅಡುಗೆ ಮಾಡಿಕೊಳ್ಳಲು ಒಲೆ, ಪಾತ್ರೆ, ಅಡುಗೆ ಪದಾರ್ಥಗಳೂ ಸಿಗುತ್ತಿವೆ. ಮೊಟ್ಟೆ , ಚಿಕನ್ ಐಟಂಗಳು, ಮೊಬೈಲ್, ಚಾರ್ಜರ್, ಪಾರ್ಟಿ ಮಾಡಲು ಸೌಂಡ್​ ಬಾಕ್ಸ್​ ಸೇರಿ ಐಶಾರಾಮಿ ವ್ಯವಸ್ಥೆ ಇದೆ. ಹಣದಾಸೆಗೆ ಕೈದಿಗಳ ಜೊತೆ ಜೈಲಾಧಿಕಾರಿಗಳು ಮತ್ತು ಸಿಬ್ಬಂದಿಗಳು ಶಾಮೀಲಾಗಿದ್ದು, ಜೈಲಲ್ಲಿ ಕೈದಿಗಳು ಬಿಂದಾಸ್​ ಆಗಿ ದಿನ ಕಳೆಯುತ್ತಿದ್ದಾರೆ. ಏಸು ಕ್ರಿಸ್ತನ ಚಿತ್ರದ ಮುಂದೆ ನಿಂತು ಗುಬ್ಬಚ್ಚಿ ಸೀನಾ ಮತ್ತು ಗ್ಯಾಂಗ್ ಗ್ರೂಪ್ ಫೋಟೋಶೂಟ್​ ನಡೆಸಿದ್ದು, ಪಾರಿವಾಳ ಹಿಡಿದು ಕ್ಯಾಮರಾಗೆ ವಿಚಾರಣಾಧೀನ ಕೈದಿಗಳು ಪೋಸ್​ ಕೊಟ್ಟಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಗುಬ್ಬಚ್ಚಿ ಸೀನಾನ ಸಹಚರ, ಕೊಲೆ ಆರೋಪಿ ಅರವಿಂದ್ ಹಂಚಿಕೊಂಡಿದ್ದ ಈ ಫೋಟೋಗಳು ನೋಡುಗರಿಗೆ ಶಾಕ್​ ಉಂಟುಮಾಡಿದೆ. ಜೈಲಲ್ಲಿ ಕೈದಿಗಳು ಹೀಗೆಲ್ಲ ಇರಬಹುದಾ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಜೈಲಲ್ಲಿ ಏನೆಲ್ಲಾ ಸೌಲಭ್ಯ?

ಜೈಲಲ್ಲಿ ರೌಡಿಶೀಟರ್ ಗುಬ್ಬಚ್ಚಿ ಸೀನಾ​​ ಬರ್ತಡೇ ಸೆಲೆಬ್ರೇಷನ್ ಪ್ರಕರಣ ಸಂಬಂಧ ಇಬ್ಬರು ಜೈಲು ಅಧಿಕಾರಿಗಳ ಅಮಾನತು ಮಾಡಿ ಕಾರಾಗೃಹ ಎಡಿಜಿಪಿ ಬಿ.ದಯಾನಂದ್​ ನಿನ್ನೆಯಷ್ಟೇ ಆದೇಶಿಸಿದ್ದರು. ಜೈಲಿನಲ್ಲಿರುವ ಕೊಲೆ ಆರೋಪಿ ತನ್ನ ಸಹಚರರ ಜೊತೆ ಸೆ.9ರಂದು ಬರ್ತ್​ ಡೇ ಆಚರಿಸಿಕೊಂಡಿದ್ದ ಫೋಟೋ, ವಿಡಿಯೋಗಳು ವೈರಲ್​ ಆಗಿತ್ತು. ಮೇಲ್ನೋಟಕ್ಕೆ ಅಧಿಕಾರಿಗಳ ತಪ್ಪು ಕಂಡುಬಂದ ಹಿನ್ನೆಲೆ ಶಿಸ್ತುಕ್ರಮ ಕೈಗೊಳ್ಳಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Thu, 9 October 25

Follow Us
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!