AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರಿಗೆ RPF ಮಾರ್ಗಸೂಚಿ.. ರೂಲ್ಸ್ ಬ್ರೇಕ್ ಮಾಡುದ್ರೆ ಜೈಲು ಗ್ಯಾರಂಟಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗ್ತಾನೇ ಇದೆ. ಅದೆಷ್ಟೇ ಮುಂಜಾಗ್ರತಾ ಕ್ರಮ ಕೈಗೊಕೊಂಡ್ರು ಜನ್ರು ಮಾತ್ರ ರೂಲ್ಸ್ ಫಾಲೋ ಮಾಡ್ತಿಲ್ಲ. ಮಾಸ್ಕ್ ಹಾಕ್ತಿಲ್ಲ ಸೋಶಿಯಲ್ ಡಿಸ್ಟೇನ್ಸ್ ಕಾಪಾಡುತ್ತಿಲ್ಲ. ಈ ಕಾರಣಕ್ಕೆ RPF ಪೋಲಿಸ್ರು ರೂಲ್ಸ್ ಬ್ರೇಕ್ ಮಾಡೋರ ಮೇಲೆ ಕೇಸ್ ದಾಖಲಿಸಿ ಜೈಲಿಗಟ್ಟಲು ಮುಂದಾಗಿದ್ದಾರೆ. ಶ್ರಾವಣ ಮುಗಿತಾ ಇದ್ದಂತೆ ಮುಂದೆ ದೊಡ್ಡ ದೊಡ್ಡ ಹಬ್ಬಗಳು ಬಂದು ಬಿಡ್ತವೆ. ಈ ಹೊತ್ತಲ್ಲಿ ದೇಶಾದ್ಯಂತ ಜನ ಸಂಚಾರ ಹೆಚ್ಚಾದಂತೆ, ರಾಜ್ಯದಲ್ಲೂ ಊರಿಂದ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗೆ […]

ರೈಲು ಪ್ರಯಾಣಿಕರಿಗೆ RPF ಮಾರ್ಗಸೂಚಿ.. ರೂಲ್ಸ್ ಬ್ರೇಕ್ ಮಾಡುದ್ರೆ ಜೈಲು ಗ್ಯಾರಂಟಿ
ಆಯೇಷಾ ಬಾನು
|

Updated on: Oct 15, 2020 | 6:46 AM

Share

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗ್ತಾನೇ ಇದೆ. ಅದೆಷ್ಟೇ ಮುಂಜಾಗ್ರತಾ ಕ್ರಮ ಕೈಗೊಕೊಂಡ್ರು ಜನ್ರು ಮಾತ್ರ ರೂಲ್ಸ್ ಫಾಲೋ ಮಾಡ್ತಿಲ್ಲ. ಮಾಸ್ಕ್ ಹಾಕ್ತಿಲ್ಲ ಸೋಶಿಯಲ್ ಡಿಸ್ಟೇನ್ಸ್ ಕಾಪಾಡುತ್ತಿಲ್ಲ. ಈ ಕಾರಣಕ್ಕೆ RPF ಪೋಲಿಸ್ರು ರೂಲ್ಸ್ ಬ್ರೇಕ್ ಮಾಡೋರ ಮೇಲೆ ಕೇಸ್ ದಾಖಲಿಸಿ ಜೈಲಿಗಟ್ಟಲು ಮುಂದಾಗಿದ್ದಾರೆ.

ಶ್ರಾವಣ ಮುಗಿತಾ ಇದ್ದಂತೆ ಮುಂದೆ ದೊಡ್ಡ ದೊಡ್ಡ ಹಬ್ಬಗಳು ಬಂದು ಬಿಡ್ತವೆ. ಈ ಹೊತ್ತಲ್ಲಿ ದೇಶಾದ್ಯಂತ ಜನ ಸಂಚಾರ ಹೆಚ್ಚಾದಂತೆ, ರಾಜ್ಯದಲ್ಲೂ ಊರಿಂದ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗೆ ಇರುತ್ತದೆ. ಆದರೆ ಈ ಬಾರಿ ಕೊರೊನಾ ಕಂಟಕ ಎದುರಾಗಿದ್ದು, ರೈಲು ಪ್ರಯಾಣಿಕರಿಗೆ ಹೊಸ ರೂಲ್ಸ್ ರಿಲೀಸ್ ಆಗಿದೆ.

ಮಾಸ್ಕ್ ಧರಿಸದಿದ್ರೆ ಅಂತರ ಕಾಪಾಡದಿದ್ರೆ ದಂಡ! ದೇಶದಲ್ಲಿ ಹಬ್ಬ ಹರಿದಿನಗಳು ಹತ್ತಿರವಾಗ್ತಿರೋ ಸಮಯದಲ್ಲಿ ಆರ್​ಪಿಎಫ್ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ನಿಂದ ಪ್ರಯಾಣಿಕರಿಗೆ ಗೈಡ್ ಲೈನ್ಸ್ ರಿಲೀಸ್ ಆಗಿದೆ. ಹಬ್ಬದ ಸಮಯದಲ್ಲಿ ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆ ಊರುಗಳಿಗೆ ತೆರಳುವ ಪ್ರಯಾಣಿಕರು RPF ರೂಲ್ಸ್ ಫಾಲೋ ಮಾಡಲೇಬೇಕು. ಅಕಸ್ಮಾತ್ ಮಾಡಿಲ್ಲ ಅಂದರೆ ಜೈಲು ಗ್ಯಾರಂಟಿ. ಅಲ್ಲದೆ ಮಾರ್ಗಸೂಚಿ ಪಾಲನೆ ಮಾಡದಿದ್ರೆ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಇನ್ನು ರೈಲ್ವೆ ಪ್ರಯಾಣಿಕರಿಗೆ ವಿಧಿಸಿರುವ ಹೊಸ ರೂಲ್ಸ್​ಗಳನ್ನ ಡೀಟೇಲ್ ಆಗಿ ನೋಡೋದಾದ್ರೆ.

ರೈಲು ಪ್ರಯಾಣಕ್ಕೆ ಹತ್ತಾರು ರೂಲ್ಸ್! ಕೊರೊನಾ ಕಂಟಕದ ಹಿನ್ನೆಲೆಯಲ್ಲಿ ಮಾಸ್ಕ್ ಇಲ್ಲದಿದ್ರೆ ಸದ್ಯಕ್ಕೆ ರೈಲು ಪ್ರಯಾಣಿಕರಿಗೆ ಅವಕಾಶವಿಲ್ಲ. ಹಾಗೇ ರೈಲು ನಿಲ್ದಾಣ ಸೇರೆದಂತೆ ರೈಲಿನಲ್ಲಿ ಪ್ರಯಾಣ ಮಾಡುವಾಗಲೂ ಸಾಮಾಜಿಕ ಅಂತರ ಕಡ್ಡಾಯವಾಗಿರುತ್ತದೆ. ‘ಕೊರೊನಾ’ ಸೋಂಕಿತರು ಇನ್ಮುಂದೆ ರೈಲು ನಿಲ್ದಾಣಕ್ಕೆ ಬರುವಂತಿಲ್ಲ ಎಂದು ಖಡಕ್ ಸೂಚನೆ ಹೊರಡಿಸಲಾಗಿದ್ದು, ಸಂಪೂರ್ಣ ಗುಣಮುಖರಾಗದೆ ರೈಲು ನಿಲ್ದಾಣಕ್ಕೆ ಬಂದ್ರೆ ಜೈಲು ಗ್ಯಾರಂಟಿ ಎಂಬ ನಿಯಮ ಜಾರಿಮಾಡಲಾಗಿದೆ. ಈ ಎಲ್ಲಾ ನಿಯಮಗಳ ಜತೆ ಪ್ರಯಾಣಿಕರು ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕಾಗಿದ್ದು ನಿಯಮ ಮೀರಿದ್ರೆ ಕ್ರಮ ಪಕ್ಕಾ.

ಒಟ್ನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಖಡಕ್ ಕ್ರಮ ಕೈಗೊಂಡಿದೆ. ರೈಲ್ವೆ ಪೊಲೀಸರು ಪ್ರತಿಯೊಬ್ಬ ಪ್ರಯಾಣಿಕನ ಮೇಲೂ ಗಮನ ಇಡೋದಕ್ಕೆ ಖಡಕ್ ಕ್ರಮ ಕೈಗೊಂಡಿದ್ದಾರೆ. ಆದರೆ ಇದರಲ್ಲಿ ಅದೆಷ್ಟರಮಟ್ಟಿಗೆ ಸಕ್ಸಸ್ ಆಗ್ತಾರೆ ಅನ್ನೋದನ್ನ ಕಾದು ನೋಡ್ಬೇಕಿದೆ.

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು