AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಯಜಮಾನಿಗೆ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಮುಹೂರ್ತ ಫಿಕ್ಸ್, ಯಾವೆಲ್ಲ ದಾಖಲೆಗಳು ಬೇಕು?

ಮನೆ ಯಜಮಾನಿಗೆ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ(Gruha Lakshmi Scheme) ಬಾಗಿಲು ತೆರೆಯಲು ಮುಹೂರ್ತ ಫಿಕ್ಸ್ ಆಗಿದೆ.

ಮನೆ ಯಜಮಾನಿಗೆ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಮುಹೂರ್ತ ಫಿಕ್ಸ್, ಯಾವೆಲ್ಲ ದಾಖಲೆಗಳು ಬೇಕು?
ಗೃಹ ಲಕ್ಷ್ಮಿ ಯೋಜನೆ
TV9 Web
| Edited By: |

Updated on: Jul 06, 2023 | 7:03 AM

Share

ಬೆಂಗಳೂರು: ಅಂತು ಇಂತು ಮನೆ ಯಜಮಾನಿಗೆ 2000 ರೂ. ನೀಡುವ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆ (Gruha Lakshmi Scheme) ಜಾರಿಗೆ ಮುಹೂರ್ತ ಕೂಡಿಬಂದಿದೆ. ಇದೇ ಜುಲೈ 14 ರಿಂದ ಗೃಹ ಲಕ್ಷ್ಮಿ ಜಾರಿಗೆ ರಾಜ್ಯ ಸರ್ಕಾರದ ಪ್ಲ್ಯಾನ್ ಮಾಡಿಕೊಂಡಿದ್ದು, ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಗೃಹಲಕ್ಷ್ಮಿ ಯೋಜನೆ ಲಾಂಚ್ ಕಾರ್ಯಕ್ರಮ ನಡೆಸಲು ಚಿಂತನೆಗಳು ನಡೆದಿವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಮ್ಮುಖದಲ್ಲಿ 10 ರಿಂದ 15 ಮನೆ ಯಜಮಾನಿಯನ್ನು ಗುರುತಿಸಿ ಸಾಂಕೇತಿಕವಾಗಿ ಹಣ ವರ್ಗಾವಣೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಅರ್ಜಿ ಸಲ್ಲಿಕೆಗೆ ಅನುಸಾರವಾಗಿ ಫಲಾನುಭವಿಗಳಿಗೆ ನಿರಂತರ ಹಣ ವರ್ಗಾವಣೆ ಮಾಡುವ ಬಗ್ಗೆಯೂ ಯೊಜನೆ ಹಾಕಿದ್ದು, ಇದಕ್ಕಾಗಿ ವಿಶೇಷ ಅಪ್ ಹಾಗೂ ಇನ್ನಿತರ ಡಿಜಿಟಲ್ ಪೋರ್ಟಲ್ ಗಳನ್ನು ಸಿದ್ದಪಡಿಸಲಾಗಿದೆ.

ಇದನ್ನೂ ಓದಿ: Gruha Lakshmi Scheme: ಎಚ್ಚರ ಎಚ್ಚರ…ಗೃಹಲಕ್ಷ್ಮಿ ಯೋಜನೆ ಹೆಸರಿಲ್ಲಿ ಬಂದಿವೆ ಮೂರು ನಕಲಿ ಆ್ಯಪ್​

‘ಗೃಹಲಕ್ಷ್ಮೀ’ಗಾಗಿ ಪ್ರತ್ಯೇಕ ಆ್ಯಪ್​​​ ಸಿದ್ಧಪಡಿಸಿದ ಸರ್ಕಾರ

ಗೃಹ ಲಕ್ಷ್ಮೀ ಯೋಜನೆಗೆ ಸರ್ಕಾರದಿಂದ ಪ್ರತ್ಯೇಕ ಆ್ಯಪ್ ಬಿಡುಗಡೆ ಮಾಡಲಾಗುತ್ತೆ ಎಂದು ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ. ಅದರಂತೆ ಸರ್ವರ್ ಸಮಸ್ಯೆಗೆ ಕಡಿವಾಣ ಹಾಕಲು ಇದೀಗ ಸರ್ಕಾರವೇ ಪ್ರತ್ಯೇಕ ಆ್ಯಪ್ ಸಿದ್ಧಪಡಿಸಿದ್ದು, ಅಧಿಕೃತವಾಗಿ ಬಿಡುಗಡೆ ಮಾಡುವುದೊಂದೇ ಬಾಕಿ ಇದೆ. ಗೂಗಲ್ ಪ್ಲೇ ಸ್ಟೋರ್, ಆ್ಯಪಲ್ ಸ್ಟೋರ್​​​ನಲ್ಲಿ ಆ್ಯಪ್ ಲಭ್ಯವಾಗಲಿದೆ. ಇನ್ನೂ ಸೇವಾಸಿಂಧು ವೆಬ್​​​ಸೈಟ್​​ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ.

‘ಗೃಹಲಕ್ಷ್ಮೀ’ಯ 2,000ಕ್ಕೆ ಏನು ಮಾಡಬೇಕು?

BPL, APL, ಅಂತ್ಯೋದಯ ಕಾರ್ಡ್​ನಲ್ಲಿ ಮನೆಯೊಡತಿಯ ಹೆಸರಿರಬೇಕು. ಒಂದು ಮನೆಯಲ್ಲಿ ಒಬ್ಬರಿಗೆ ಮಾತ್ರ ಯೋಜನೆ ಅನ್ವಯವಾಗಲಿದೆ. ಯಜಮಾನಿಯ ಮೊಬೈಲ್ ನಂಬರ್ ಕಡ್ಡಾಯವಾಗಿ ಬೇಕಾಗುತ್ತದೆ. ಬೆಂಗಳೂರು ಒನ್ ಅಥವಾ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಖಾತೆಯೊಂದಿಗೆ ಮೊಬೈಲ್ ನಂ. ಲಿಂಕ್ ಆಗಿರಬೇಕು. ಯಜಮಾನಿ ಅಥವಾ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಮನೆ ಒಡತಿಯ ಯಜಮಾನ ಜಿಎಸ್​ಟಿ ರಿರ್ಟನ್ಸ್ ಮಾಡಿರಬಾರದು ಎಂಬ ಮಾನದಂಡಗಳನ್ನು ಅನುಸರಿಸಲಾಗಿದೆ.

ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗ್ತಿದೆ. ರಾಜ್ಯಾದ್ಯಂತ ಜನ ಏಕಕಾಲಕ್ಕೆ ಅರ್ಜಿ ಸಲ್ಲಿಸಲು ಮುಗಿಬಿದ್ದ ಪರಿಣಾಮ 3-4 ದಿನ ಸರ್ವಸ್ ಸಮಸ್ಯೆಯಿಂದ ಜನ ಪರದಾಡುವಂತಾಯ್ತು. ಇದನ್ನ ಮನಗಂಡ ಸರ್ಕಾರ, ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆಯಾಗಬಾರದು ಎಂದು ಪ್ಲ್ಯಾನ್ ಮಾಡಿದೆ. ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಲು ಪ್ರತ್ಯೇಕವಾಗಿ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಇದೇ ಕಾರಣಕ್ಕೆ ಗೃಹಲಕ್ಷ್ಮೀ ಯೋಜನೆ ವಿಳಂಬವಾಗ್ತಿರೋದಾಗಿ ಈ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​