ATMಗಳಲ್ಲಿ ನಿಮಗೆ ಪಿಂಕ್ ನೋಟು ಸಿಗ್ತಿದೆಯಾ?

ಬೆಂಗಳೂರು: ಸಿಲಿಕಾನ್ ಸಿಟಿ ಎಟಿಎಂಗಳಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಆದ್ರೆ ಕೆಲ ದಿನಗಳಿಂದ ಎರಡು ಸಾವಿರ ರೂಪಾಯಿಯ ಪಿಂಕ್ ನೋಟು ಬ್ಯಾನ್ ಆಗುತ್ತೆ ಎಂಬ ವದಂತಿ ಧಾರಾಳವಾಗಿ ಹರಿದಾಡಿತ್ತು. ಇದು ನಿಜಾನಾ!? ವಾಸ್ತವ ಏನೂ ಅಂದ್ರೆ 2 ಸಾವಿರ ರೂಪಾಯಿ ನೋಟುಗಳ ಮುದ್ರಣವೇ ಸ್ಥಗಿತವಾಗುತ್ತೆ ಎಂದು ಆರ್ಬಿಐ ಈ ಹಿಂದೆಯೇ ಮಾಹಿತಿ ನೀಡಿತ್ತು. ಅದರಂತೆ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತವಾಗಿದ್ದು, 200 ರೂಪಾಯಿ ನೋಟುಗಳ ಮುದ್ರಣಕ್ಕೆ ಹೆಚ್ಚಿನ ಆದ್ಯತೆ […]

ATMಗಳಲ್ಲಿ ನಿಮಗೆ ಪಿಂಕ್ ನೋಟು ಸಿಗ್ತಿದೆಯಾ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​

Updated on: Feb 26, 2020 | 5:36 PM

ಬೆಂಗಳೂರು: ಸಿಲಿಕಾನ್ ಸಿಟಿ ಎಟಿಎಂಗಳಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಆದ್ರೆ ಕೆಲ ದಿನಗಳಿಂದ ಎರಡು ಸಾವಿರ ರೂಪಾಯಿಯ ಪಿಂಕ್ ನೋಟು ಬ್ಯಾನ್ ಆಗುತ್ತೆ ಎಂಬ ವದಂತಿ ಧಾರಾಳವಾಗಿ ಹರಿದಾಡಿತ್ತು. ಇದು ನಿಜಾನಾ!?

ವಾಸ್ತವ ಏನೂ ಅಂದ್ರೆ 2 ಸಾವಿರ ರೂಪಾಯಿ ನೋಟುಗಳ ಮುದ್ರಣವೇ ಸ್ಥಗಿತವಾಗುತ್ತೆ ಎಂದು ಆರ್ಬಿಐ ಈ ಹಿಂದೆಯೇ ಮಾಹಿತಿ ನೀಡಿತ್ತು. ಅದರಂತೆ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತವಾಗಿದ್ದು, 200 ರೂಪಾಯಿ ನೋಟುಗಳ ಮುದ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಮಾರ್ಚ್ 1ರಿಂದ ಈ ಅದೇಶ ಜಾರಿಯಾಗುತ್ತೆ ಎಂದು ಹೇಳಲಾಗುತ್ತಿತ್ತು. ಆದರೆ ಫೆಬ್ರವರಿ ಕೊನೇ ವಾರದಿಂದಲೇ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ ಎಟಿಎಂಗಳಲ್ಲಿ 2 ಸಾವಿರ ನೋಟು ಸಿಗ್ತಿಲ್ಲ.

ಕೆಲ ಬ್ಯಾಂಕ್​ಗಳ ಎಟಿಎಂ ನಿಂದ 2 ಸಾವಿರ ರೂ. ನೋಟು ಜೋಡಿಸುವ ಕ್ಯಾಸೆಟ್​ಗಳನ್ನೇ ತೆಗೆದು ಹಾಕಲಾಗಿದೆ. ಇದರ ಬದಲಿಗೆ 200 ರೂ. ನೋಟುಗಳ ಕ್ಯಾಸೆಟ್​ಗಳ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ ಎಂದು ಟಿವಿ9 ಗೆ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ ಸಿಕ್ಕಿದೆ.

ಅಲ್ಲದೆ ಈ ಬಗ್ಗೆ ರಿಯಾಲಿಟಿ ಚೆಕ್ ಕೂಡ ನಡೆಸಿದ್ದು, ಎಸ್.ಬಿಐ, ಕೆನರಾ, ಆಕ್ಸಿಸ್, ಹೆಚ್.ಡಿ.ಎಫ್.ಸಿ ಬ್ಯಾಂಕ್ ಎಟಿಎಂಗಳಲ್ಲಿ 2 ಸಾವಿರ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಹಾಗಾಗಿ ಇನ್ಮುಂದೆ ಜನ ಪಿಂಕ್ ನೋಟುಗಳನ್ನು ನೋಡುವುದು ಕಡಿಮೆ ಆಗಲಿದೆ.

Published On - 5:06 pm, Wed, 26 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us