ಆಸ್ಟ್ರೇಲಿಯಾಗೆ KIALನಿಂದ ಮದುವೆ ಪತ್ರಿಕೆಯಲ್ಲಿ ಮಾದಕವಸ್ತು ಪಾರ್ಸೆಲ್!

ಬೆಂಗಳೂರು: ನಗರದ ಕೆಐಎಎಲ್​ನಲ್ಲಿ ಭಾರಿ ಪ್ರಮಾಣದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಮೂಲದ ವ್ಯಕ್ತಿಯ ಬ್ಯಾಗ್​ನಿಂದ  ಕಸ್ಟಮ್ಸ್ ಅಧಿಕಾರಿಗಳು 5.5 ಕೋಟಿ ರೂಪಾಯಿ ಮೌಲ್ಯದ 5.049 ಕೆಜಿ ಎಫಿಡ್ರಿನ್ ಮಾದಕವಸ್ತು ಜಪ್ತಿ ಮಾಡಿದ್ದಾರೆ. ಚೆನ್ನೈ ಮೂಲದ ವ್ಯಕ್ತಿ ಮಧುರೈನಿಂದ ಆಸ್ಟ್ರೇಲಿಯಾಗೆ ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಮಾದಕವಸ್ತು ಪಾರ್ಸೆಲ್ ಮಾಡಿ ಸಾಗಣೆ ಮಾಡಲು ಯತ್ನಿಸಿದ್ದಾನೆ. ಕೆಐಎಎಲ್‌ನ ಕೊರಿಯರ್ ಟರ್ಮಿನಲ್‌ನಲ್ಲಿ ತಪಾಸಣೆ ವೇಳೆ 43 ಮದುವೆ ಆಮಂತ್ರಣ ಪತ್ರಿಕೆ ಲಭ್ಯವಾಗಿದೆ. ನಂತರ ಅನುಮಾನ […]

ಆಸ್ಟ್ರೇಲಿಯಾಗೆ KIALನಿಂದ ಮದುವೆ ಪತ್ರಿಕೆಯಲ್ಲಿ ಮಾದಕವಸ್ತು ಪಾರ್ಸೆಲ್!
ಸಾಧು ಶ್ರೀನಾಥ್​

Updated on: Feb 22, 2020 | 12:21 PM

ಬೆಂಗಳೂರು: ನಗರದ ಕೆಐಎಎಲ್​ನಲ್ಲಿ ಭಾರಿ ಪ್ರಮಾಣದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಮೂಲದ ವ್ಯಕ್ತಿಯ ಬ್ಯಾಗ್​ನಿಂದ  ಕಸ್ಟಮ್ಸ್ ಅಧಿಕಾರಿಗಳು 5.5 ಕೋಟಿ ರೂಪಾಯಿ ಮೌಲ್ಯದ 5.049 ಕೆಜಿ ಎಫಿಡ್ರಿನ್ ಮಾದಕವಸ್ತು ಜಪ್ತಿ ಮಾಡಿದ್ದಾರೆ.

ಚೆನ್ನೈ ಮೂಲದ ವ್ಯಕ್ತಿ ಮಧುರೈನಿಂದ ಆಸ್ಟ್ರೇಲಿಯಾಗೆ ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಮಾದಕವಸ್ತು ಪಾರ್ಸೆಲ್ ಮಾಡಿ ಸಾಗಣೆ ಮಾಡಲು ಯತ್ನಿಸಿದ್ದಾನೆ. ಕೆಐಎಎಲ್‌ನ ಕೊರಿಯರ್ ಟರ್ಮಿನಲ್‌ನಲ್ಲಿ ತಪಾಸಣೆ ವೇಳೆ 43 ಮದುವೆ ಆಮಂತ್ರಣ ಪತ್ರಿಕೆ ಲಭ್ಯವಾಗಿದೆ.

ನಂತರ ಅನುಮಾನ ಬಂದು ಪರಿಶೀಲಿಸಿದಾಗ ಬಿಳಿ ಪೌಡರ್ ಪತ್ತೆಯಾಗಿದೆ. ನಂತರ ಅಧಿಕಾರಿಗಳು ಬಿಳಿ ಪೌಡರ್ ಪರೀಕ್ಷಿಸಿದಾಗ ಅದು ಮಾದಕವಸ್ತು ಎಂಬುದು ದೃಢಪಟ್ಟಿದೆ ಎಂದು ಕಸ್ಟಮ್ಸ್ ಜಂಟಿ ಆಯುಕ್ತ ಎಂ.ಜೆ.ಚೇತನ್‌ ಮಾಹಿತಿ ನೀಡಿದ್ದಾರೆ.

Published On - 12:05 pm, Sat, 22 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us