AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನ ಬೌಂಡರಿ ಲೈನ್​ ಫಿಕ್ಸ್ ಮಾಡಲು 70 ಲಕ್ಷ ಲಂಚಕ್ಕೆ ಬೇಡಿಕೆ: ಎಸಿಬಿ ದಾಳಿ, ಹಿರಿಯ ರೆವೆನ್ಯೂ ಅಧಿಕಾರಿ ಅರೆಸ್ಟ್​

ದಾಳಿ ವೇಳೆ  ಎಸಿಬಿ ಅಧಿಕಾರಿಗಳು ಆನಂದ್ ಮನೆಯಲ್ಲಿ 25.30 ಲಕ್ಷ ನಗದು, 70 ಲಕ್ಷ ಮೊತ್ತದ ಮೂರು ಚೆಕ್ ಹಾಗೂ ಕೆಲ‌ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. DDLR ಕುಸುಮಾ ಲತಾ ಮನೆಯಲ್ಲಿ ಏನೂ ಸಿಕ್ಕಿಲ್ಲ. ಸರ್ವೆಯರ್ ಶ್ರೀನಿವಾಸ್ ಮನೆಯಲ್ಲಿ‌ ಕೆಲ ದಾಖಲೆಗಳನ್ನು ಸೀಜ್ ಮಾಡಿದ್ದಾರೆ. ಎಸಿಬಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಜಮೀನಿನ ಬೌಂಡರಿ ಲೈನ್​ ಫಿಕ್ಸ್ ಮಾಡಲು 70 ಲಕ್ಷ ಲಂಚಕ್ಕೆ ಬೇಡಿಕೆ: ಎಸಿಬಿ ದಾಳಿ, ಹಿರಿಯ ರೆವೆನ್ಯೂ ಅಧಿಕಾರಿ ಅರೆಸ್ಟ್​
ಜಮೀನಿನ ಬೌಂಡರಿ ಲೈನ್​ ಫಿಕ್ಸ್ ಮಾಡಲು 70 ಲಕ್ಷ ಲಂಚಕ್ಕೆ ಬೇಡಿಕೆ: ಎಸಿಬಿ ದಾಳಿ, ಹಿರಿಯ ಅಧಿಕಾರಿಯ ಬಂಧನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 26, 2021 | 10:26 AM

ಬೆಂಗಳೂರು: ಲಂಚದ ಹಾವಳಿಗೆ ಕೊನೆ ಮೊದಲಿಲ್ಲ. ಜಮೀನಿನ ಬೌಂಡರಿ ಲೈನ್​ ಫಿಕ್ಸ್ ಮಾಡಲು ಲಂಚಕ್ಕೆ ಬೇಡಿಕೆಯೊಡ್ಡಿದ್ದ ಉನ್ನತ ಅಧಿಕಾರಿ ಮತ್ತು ಆತನ ಸಹಾಯಕ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ವ್ಯವಸ್ಥಿತವಾಗಿ ದಾಳಿ ಮಾಡಿ, ಅರೆಸ್ಟ್​ ಮಾಡಿದ್ದಾರೆ. ಜಮೀನಿಗೆ ಗೆರೆ ಎಳೆಯಲು ಲಂಚಕ್ಕೆ ಕೈವೊಡ್ಡಿದ ಅಧಿಕಾರಿಯ ಹೆಸರು ಆನಂದ ಅಂತಾ, ಆತನ ಸಹಾಯಕ ಸಿಬ್ಬಂದಿಯ ಹೆಸರು ರಮೇಶ್. ಆನಂದ ರೆವೆನ್ಯೂ ಡಿಪಾರ್ಟ್​​ಮೆಂಟ್​​ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಫ್ ಲ್ಯಾಂಡ್ ರಿಕಾರ್ಡ್ (ADLR). ಈತ ಲಂಚಕ್ಕೆ ಬೇಡಿಕೆಯಿಟ್ಟಿದ್ದು ಬರೋಬ್ಬರಿ 70 ಲಕ್ಷ ರೂಪಾಯಿಗೆ.

ಈ ಸಂಬಂಧ ನಿನ್ನೆ ರಾತ್ರಿ ಬೆಂಗಳೂರಿನ ಮೂರು ಕಡೆ ಎಸಿಬಿ (ACB) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮೀನು ಸರ್ವೆ ನಂ. 145, 146 ಸಂಬಂಧ ಲಂಚದಾಹ ಕಂಡುಬಂದಿತ್ತು. ಅಂತಾರಾಷ್ಟ್ರೀಯ ಏರ್​ಪೋರ್ಟ್​​ಗೆ ಹತ್ತಿರವಿರುವ ಯಲಹಂಕ ತಾಲ್ಲೂಕಿನ ಕುದುರುಗೆರೆಯ ಜಮೀನು ಇದಾಗಿತ್ತು. ಇಲ್ಲಿನ ಜಮೀನಿನ ಬೌಂಡರಿ ಫಿಕ್ಸ್ ಮಾಡೋಕೆ‌ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದು ಆನಂದ ಮಹಾಶಯ.

ಕಂದಾಯ ಇಲಾಖೆಯ ಉನ್ನತಾಧಿಕಾರಿ ಆನಂದ ಪ್ರಕರಣದಲ್ಲಿ ಅಡ್ವಾನ್ಸ್ ಆಗಿ 20 ಲಕ್ಷ ರೂ ಹಣ ಮತ್ತೊಂದಿಷ್ಟು ಬ್ಯಾಂಕ್‌ ಚೆಕ್ ಪಡೆದಿದ್ದ. ಇದರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಎಸಿಬಿ ಅಧಿಕಾರಿಗಳು (Anti Corruption Bureau) ಕಾರ್ಯಾಚರಣೆಗೆ ಇಳಿದು ಎಸಿಬಿ ಆನಂದನ ಜಾಲಹಳ್ಳಿ ಮನೆ, DDLR ಕುಸುಮ ಲತಾ ಮನೆ ಮತ್ತು ಸರ್ವೆ ಅಧಿಕಾರಿ ಶ್ರೀನಿವಾಸ್​ಗೆ ಸೇರಿದ ತುಮಕೂರಿನ ಮನೆ ಸೇರಿ ಮೂರು ಕಡೆ ದಾಳಿ ನಡೆಸಿದ್ದರು.

ದಾಳಿ ವೇಳೆ  ಎಸಿಬಿ ಅಧಿಕಾರಿಗಳು ಆನಂದ್ ಮನೆಯಲ್ಲಿ 25.30 ಲಕ್ಷ ನಗದು, 70 ಲಕ್ಷ ಮೊತ್ತದ ಮೂರು ಚೆಕ್ ಹಾಗೂ ಕೆಲ‌ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. DDLR ಕುಸುಮಾ ಲತಾ ಮನೆಯಲ್ಲಿ ಏನೂ ಸಿಕ್ಕಿಲ್ಲ. ಸರ್ವೆಯರ್ ಶ್ರೀನಿವಾಸ್ ಮನೆಯಲ್ಲಿ‌ ಕೆಲ ದಾಖಲೆಗಳನ್ನು ಸೀಜ್ ಮಾಡಿದ್ದಾರೆ. ಎಸಿಬಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಇದನ್ನೂಓದಿ: ಲಕ್ಷ ರೂ ಲಂಚ ಕೇಳಿದ ಪೊಲೀಸರು, ಯುವಕ ಆತ್ಮಹತ್ಯೆ: ಪೊಲೀಸ್​ ಕಾನ್ಸ್​​ಟೇಬಲ್, ಎಸ್​ಐ ಸಸ್ಪೆಂಡ್​

ರೇಪ್ ಮಾಡಿ ವಿಡಿಯೋ ಮಾಡಿದ್ದ ಕಾಮುಕರು ದೂರು ಕೊಡದಂತೆ ಬೆದರಿಸಿದ್ದರು; ಸ್ನೇಹಿತನಿಗೆ ಕಲ್ಲಿನಿಂದ ಹೊಡೆದಿದ್ದರು (rs 70 lakh bribe ACB raids on revenue department assistant director anand)

Published On - 10:19 am, Thu, 26 August 21

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ