ಲಾಕ್​ಡೌನ್​ನಿಂದ ರಾಜ್ಯ ಸಾರಿಗೆ ನಿಗಮಕ್ಕೆ ಎಷ್ಟು ಕೋಟಿ ಲಾಸ್ ಗೊತ್ತಾ?

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಾಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದು ಸೋಂಕು ಹರಡದಂತೆ ದೇಶಾದ್ಯಂತ ಲಾಕ್​ಡೌನ್ ಕೂಡ ವಿಸ್ತರಿಸಲಾಗಿದೆ. ಆದರೆ ಲಾಕ್​ಡೌನ್ ಪರಿಣಾಮ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಲಾಕ್​ಡೌನ್ ಆದ ದಿನದಿಂದ ಏಪ್ರಿಲ್ 20ರವರೆಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 81,623 ಕೋಟಿ ರೂಪಾಯಿ ನಷ್ಟವಾಗಿದೆ. ಅದರಲ್ಲಿ BMTC ಸಂಸ್ಥೆಗೆ 149 ಕೋಟಿ ಲಾಸ್ ಆಗಿದ್ದರೆ, KSRTC ಸಂಸ್ಥೆಗೆ 31,489 ಕೋಟಿ ರೂಪಾಯಿ ದಿವಾಳಿಯಾಗಿದೆ. […]

ಲಾಕ್​ಡೌನ್​ನಿಂದ ರಾಜ್ಯ ಸಾರಿಗೆ ನಿಗಮಕ್ಕೆ ಎಷ್ಟು ಕೋಟಿ ಲಾಸ್ ಗೊತ್ತಾ?
ಕೆಎಸ್​ಆರ್​ಟಿಸಿ ಬಸ್​
ಸಾಧು ಶ್ರೀನಾಥ್​

Updated on: Apr 22, 2020 | 2:07 PM

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಾಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದು ಸೋಂಕು ಹರಡದಂತೆ ದೇಶಾದ್ಯಂತ ಲಾಕ್​ಡೌನ್ ಕೂಡ ವಿಸ್ತರಿಸಲಾಗಿದೆ. ಆದರೆ ಲಾಕ್​ಡೌನ್ ಪರಿಣಾಮ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ ಆಗಿದೆ.

ಲಾಕ್​ಡೌನ್ ಆದ ದಿನದಿಂದ ಏಪ್ರಿಲ್ 20ರವರೆಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 81,623 ಕೋಟಿ ರೂಪಾಯಿ ನಷ್ಟವಾಗಿದೆ. ಅದರಲ್ಲಿ BMTC ಸಂಸ್ಥೆಗೆ 149 ಕೋಟಿ ಲಾಸ್ ಆಗಿದ್ದರೆ, KSRTC ಸಂಸ್ಥೆಗೆ 31,489 ಕೋಟಿ ರೂಪಾಯಿ ದಿವಾಳಿಯಾಗಿದೆ.

NWKSRTC ಸಂಸ್ಥೆಗೆ 172 ಕೋಟಿ ರೂ, NEKSRTC ಸಂಸ್ಥೆಗೆ 180 ಕೋಟಿ ರೂಪಾಯಿ ನಷ್ಟವಾಗಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಬಸ್ ಸಂಚಾರ ಸ್ಥಗಿತದಿಂದ 81,623 ಕೋಟಿ ರೂ. ನಷ್ಟವಾಗಿದೆ. ಈ ಬಗ್ಗೆ ಸಾರಿಗೆ ನಿಗಮಗಳು ಅಧಿಕೃತ ಮಾಹಿತಿ ನೀಡಿವೆ.

Published On - 1:38 pm, Wed, 22 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us