AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಏನೇ ಹೇಳಿದ್ರೂ RSSನವರು ವಿವಾದ ಮಾಡುತ್ತಾರೆ: ಸಿದ್ದರಾಮಯ್ಯ ಬೇಸರ

ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಏನು ಮಾತನಾಡಿದರೂ ಅದು ವಿವಾದ ಆಗುತ್ತಿದೆ. ಈ ವಿವಾದಕ್ಕೆ ಆರ್​ಎಸ್​ಎಸ್​ನವರೇ ನೇರ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಾನು ಏನೇ ಹೇಳಿದ್ರೂ RSSನವರು ವಿವಾದ ಮಾಡುತ್ತಾರೆ: ಸಿದ್ದರಾಮಯ್ಯ ಬೇಸರ
ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Jan 17, 2021 | 4:03 PM

Share

ಮೈಸೂರು: ಏನೇ ಇದ್ದರೂ ನೇರವಾಗಿ ಮಾತನಾಡುವ ವ್ಯಕ್ತಿ ನಾನು. ಆದರೆ, ನನ್ನ ಮಾತಿಗೆ ಆರ್​ಎಸ್​ಎಸ್​ನವರು ರಂಗುರಂಗಿನ ಬಣ್ಣ ಕಟ್ಟುತ್ತಾರೆ. ಹೀಗಾಗಿ, ನಾನು ಮಾತನಾಡಿದ್ದೆಲ್ಲವೂ ವಿವಾದವಾಗುತ್ತಿದೆ. ಇತ್ತೀಚೆಗೆ ಹೆಚ್ಚು ವಿವಾದಕ್ಕೆ ಒಳಗಾದ ರಾಜಕಾರಣಿ ನಾನೇ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ.

ಮೈಸೂರಿನಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಹಳ್ಳಿ ಭಾಷೆಯಲ್ಲಿ ಮಾತನಾಡುತ್ತೇನೆ. ನನ್ನದೇನಿದ್ದರೂ ನೇರ ಮಾತು. ನಾನು ಸಾಧ್ಯವಾದಷ್ಟು ಸತ್ಯ ಹೇಳುವುದಕ್ಕೆ ಪ್ರಯತ್ನ ಮಾಡುತ್ತೇನೆ. ಆದರೆ ನನ್ನ ಹೇಳಿಕೆಯನ್ನು ಆರ್​ಎಸ್​ಎಸ್​ನವರು ತಿರುಚುತ್ತಾರೆ. ಹೀಗಾಗಿ, ನನ್ನ ಮಾತು ವಿವಾದಕ್ಕೆ ಸಿಲುಕುತ್ತದೆ ಎಂದರು.

ಹನುಮ ಜಯಂತಿ ದಿನ ಸಿದ್ದರಾಮಯ್ಯ ಮಾಂಸಾಹಾರ ಸೇವನೆ ಮಾಡುತ್ತಾ ‘ಹನುಮ ಹುಟ್ಟಿದ್ದು ಯಾವಾಗ ಗೊತ್ತೇನೋ’ ಎಂದು ಕೇಳಿದ್ದ ವಿಚಾರ ಭಾರೀ ವಿವಾದ ಸೃಷ್ಟಿಸಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಹನುಮ ಹುಟ್ಟಿದ್ದು ಯಾವಾಗ ಎಂದು ನನಗೆ ಗೊತ್ತಿಲ್ಲ. ಹೀಗಾಗಿ ನಿಮಗ್ಯಾರಿಗಾದರೂ ಗೊತ್ತಿದ್ರೆ ಹೇಳಿ ಎಂದು ಕೇಳಿದ್ದೆ. ಆರ್​ಎಸ್​ಎಸ್​ನವರು ಅದಕ್ಕೇ ವಿವಾದ ಮಾಡಿಬಿಟ್ಟರು ಎಂದು ಬೇಸರ ಹೊರ ಹಾಕಿದರು.

ಇನ್ನು, ಗೋಮಾಂಸ ತಿನ್ನುವ ವಿಚಾರ ಕೂಡ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆಯೂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಗೋಮಾಂಸ ಸೇವನೆ ಅವರ ಆಹಾರದ ಹಕ್ಕು, ಸಮಾಜ ಒಡೆಯುವ ಕೆಲಸ ಮಾಡಬೇಡಿ ಎಂದು ಹೇಳಿದ್ದೆ. ಆರ್​ಎಸ್​ಎಸ್​ನವರು ಆ ಹೇಳಿಕೆಯನ್ನು ವಿವಾದ ಮಾಡಿದರು. 1 ಹಸು, ಎಮ್ಮೆ, ಎತ್ತು ಸಾಕಲು ದಿನಕ್ಕೆ 7 ಕೆಜಿ ಮೇವು ಬೇಕು. ತಿಂಗಳಿಗೆ 3 ಸಾವಿರ ರೂ. ಬೇಕಾಗುತ್ತದೆ ಎಂದು ಆಲೋಚಿಸಿ ಹೇಳಿದರೆ ಅದನ್ನೂ ವಿವಾದ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಒಂದು ನಡವಳಿಕೆಯೇ ಗುಲಾಮಗಿರಿಯ ಸಂಕೇತ ಇವ ನಮ್ಮವ ಇವ ನಮ್ಮವ ಎಂದು ಹೇಳುತ್ತಾರೆ. ನಂತರ ಯಾವ ಜಾತಿ ಎಂದು ಕೇಳ್ತಾರೆ. ನಾವು ಪುರೋಹಿತರನ್ನು ಕಂಡರೆ ತಲೆ ಬಗ್ಗಿಸಿ ನಮಸ್ಕರಿಸುತ್ತೇವೆ. ಅದೇ ದಲಿತರನ್ನ ಕಂಡರೆ ಏನ್ಲಾ? ಎಂದು ಕರೆಯುತ್ತೇವೆ. ಈ ಒಂದು ನಡವಳಿಕೆಯೇ ಗುಲಾಮಗಿರಿಯ ಸಂಕೇತವಾಗಿದೆ. ಬೇರೆಯವರಿಗೆ ಕೆಡಕು ಬಯಸದಿದ್ದರೆ ಅದೇ ಧರ್ಮ. ಧರ್ಮದ ಬಗ್ಗೆ ಪುಸ್ತಕ ಓದಿದರೆ ತಲೆ ಕೆಟ್ಟು ಹೋಗುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಏಪ್ರಿಲ್ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಪದಚ್ಯುತಿ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?