Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಏನೇ ಹೇಳಿದ್ರೂ RSSನವರು ವಿವಾದ ಮಾಡುತ್ತಾರೆ: ಸಿದ್ದರಾಮಯ್ಯ ಬೇಸರ

ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಏನು ಮಾತನಾಡಿದರೂ ಅದು ವಿವಾದ ಆಗುತ್ತಿದೆ. ಈ ವಿವಾದಕ್ಕೆ ಆರ್​ಎಸ್​ಎಸ್​ನವರೇ ನೇರ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಾನು ಏನೇ ಹೇಳಿದ್ರೂ RSSನವರು ವಿವಾದ ಮಾಡುತ್ತಾರೆ: ಸಿದ್ದರಾಮಯ್ಯ ಬೇಸರ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 17, 2021 | 4:03 PM

ಮೈಸೂರು: ಏನೇ ಇದ್ದರೂ ನೇರವಾಗಿ ಮಾತನಾಡುವ ವ್ಯಕ್ತಿ ನಾನು. ಆದರೆ, ನನ್ನ ಮಾತಿಗೆ ಆರ್​ಎಸ್​ಎಸ್​ನವರು ರಂಗುರಂಗಿನ ಬಣ್ಣ ಕಟ್ಟುತ್ತಾರೆ. ಹೀಗಾಗಿ, ನಾನು ಮಾತನಾಡಿದ್ದೆಲ್ಲವೂ ವಿವಾದವಾಗುತ್ತಿದೆ. ಇತ್ತೀಚೆಗೆ ಹೆಚ್ಚು ವಿವಾದಕ್ಕೆ ಒಳಗಾದ ರಾಜಕಾರಣಿ ನಾನೇ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ.

ಮೈಸೂರಿನಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಹಳ್ಳಿ ಭಾಷೆಯಲ್ಲಿ ಮಾತನಾಡುತ್ತೇನೆ. ನನ್ನದೇನಿದ್ದರೂ ನೇರ ಮಾತು. ನಾನು ಸಾಧ್ಯವಾದಷ್ಟು ಸತ್ಯ ಹೇಳುವುದಕ್ಕೆ ಪ್ರಯತ್ನ ಮಾಡುತ್ತೇನೆ. ಆದರೆ ನನ್ನ ಹೇಳಿಕೆಯನ್ನು ಆರ್​ಎಸ್​ಎಸ್​ನವರು ತಿರುಚುತ್ತಾರೆ. ಹೀಗಾಗಿ, ನನ್ನ ಮಾತು ವಿವಾದಕ್ಕೆ ಸಿಲುಕುತ್ತದೆ ಎಂದರು.

ಹನುಮ ಜಯಂತಿ ದಿನ ಸಿದ್ದರಾಮಯ್ಯ ಮಾಂಸಾಹಾರ ಸೇವನೆ ಮಾಡುತ್ತಾ ‘ಹನುಮ ಹುಟ್ಟಿದ್ದು ಯಾವಾಗ ಗೊತ್ತೇನೋ’ ಎಂದು ಕೇಳಿದ್ದ ವಿಚಾರ ಭಾರೀ ವಿವಾದ ಸೃಷ್ಟಿಸಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಹನುಮ ಹುಟ್ಟಿದ್ದು ಯಾವಾಗ ಎಂದು ನನಗೆ ಗೊತ್ತಿಲ್ಲ. ಹೀಗಾಗಿ ನಿಮಗ್ಯಾರಿಗಾದರೂ ಗೊತ್ತಿದ್ರೆ ಹೇಳಿ ಎಂದು ಕೇಳಿದ್ದೆ. ಆರ್​ಎಸ್​ಎಸ್​ನವರು ಅದಕ್ಕೇ ವಿವಾದ ಮಾಡಿಬಿಟ್ಟರು ಎಂದು ಬೇಸರ ಹೊರ ಹಾಕಿದರು.

ಇನ್ನು, ಗೋಮಾಂಸ ತಿನ್ನುವ ವಿಚಾರ ಕೂಡ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆಯೂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಗೋಮಾಂಸ ಸೇವನೆ ಅವರ ಆಹಾರದ ಹಕ್ಕು, ಸಮಾಜ ಒಡೆಯುವ ಕೆಲಸ ಮಾಡಬೇಡಿ ಎಂದು ಹೇಳಿದ್ದೆ. ಆರ್​ಎಸ್​ಎಸ್​ನವರು ಆ ಹೇಳಿಕೆಯನ್ನು ವಿವಾದ ಮಾಡಿದರು. 1 ಹಸು, ಎಮ್ಮೆ, ಎತ್ತು ಸಾಕಲು ದಿನಕ್ಕೆ 7 ಕೆಜಿ ಮೇವು ಬೇಕು. ತಿಂಗಳಿಗೆ 3 ಸಾವಿರ ರೂ. ಬೇಕಾಗುತ್ತದೆ ಎಂದು ಆಲೋಚಿಸಿ ಹೇಳಿದರೆ ಅದನ್ನೂ ವಿವಾದ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಒಂದು ನಡವಳಿಕೆಯೇ ಗುಲಾಮಗಿರಿಯ ಸಂಕೇತ ಇವ ನಮ್ಮವ ಇವ ನಮ್ಮವ ಎಂದು ಹೇಳುತ್ತಾರೆ. ನಂತರ ಯಾವ ಜಾತಿ ಎಂದು ಕೇಳ್ತಾರೆ. ನಾವು ಪುರೋಹಿತರನ್ನು ಕಂಡರೆ ತಲೆ ಬಗ್ಗಿಸಿ ನಮಸ್ಕರಿಸುತ್ತೇವೆ. ಅದೇ ದಲಿತರನ್ನ ಕಂಡರೆ ಏನ್ಲಾ? ಎಂದು ಕರೆಯುತ್ತೇವೆ. ಈ ಒಂದು ನಡವಳಿಕೆಯೇ ಗುಲಾಮಗಿರಿಯ ಸಂಕೇತವಾಗಿದೆ. ಬೇರೆಯವರಿಗೆ ಕೆಡಕು ಬಯಸದಿದ್ದರೆ ಅದೇ ಧರ್ಮ. ಧರ್ಮದ ಬಗ್ಗೆ ಪುಸ್ತಕ ಓದಿದರೆ ತಲೆ ಕೆಟ್ಟು ಹೋಗುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಏಪ್ರಿಲ್ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಪದಚ್ಯುತಿ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ