AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರ ಚಿತ್ತ ಚಿತ್ತಾಪುರದತ್ತ: RSS​ ಪಥಸಂಚಲನಕ್ಕೆ ಎದುರಾಯ್ತು ಮತ್ತೊಂದು ಕಂಟಕ

ಸರ್ಕಾರಿ ಜಾಗಗಳಲ್ಲಿನ ಚಟುವಟಿಕೆಗೆ ಅನುಮತಿ ಕಡ್ಡಾಯ ಮಾಡಿರುವ ಆದೇಶ ಇನ್ನೂ ಸದ್ದು ಮಾಡುತ್ತಿದೆ. ಈ ಚರ್ಚೆ ಅದೆಲ್ಲೆಲ್ಲಿಗೋ ಹೋಗಿ ಮುಟ್ಟುತ್ತಿದೆ. ನಾಯಕರ ನಡುವೆ ಕದನವೇ ಏರ್ಪಟ್ಟಿದ್ರೆ, ಕಲಬುರಗಿಯ ಚಿತ್ತಾಪುರ ಬೂದಿ ಮುಚ್ಚಿದ ಕೆಂಡದಂತೆ ಕಾಣುತ್ತಿದೆ. ಯಾಕಂದ್ರೆ ಚಿತ್ತಾಪುರದಲ್ಲಿ ದಲಿತ ಸಂಘಟನೆಗಳು ವರ್ಸಸ್ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಬೆಳವಣಿಗೆ ಸೃಷ್ಟಿಯಾಗಿದೆ.

ಎಲ್ಲರ ಚಿತ್ತ ಚಿತ್ತಾಪುರದತ್ತ: RSS​ ಪಥಸಂಚಲನಕ್ಕೆ ಎದುರಾಯ್ತು ಮತ್ತೊಂದು ಕಂಟಕ
ಪ್ರಾತಿನಿಧಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Oct 21, 2025 | 10:07 PM

Share

ಕಲಬುರಗಿರಿ, (ಅಕ್ಟೋಬರ್ 21): ಜಿಲ್ಲೆಯ ಚಿತ್ತಾಪುರ  (Chittapur)ಸಚಿವ ಪ್ರಿಯಾಂಕ್ ಖರ್ಗೆಯವರ (Priyank Kharge) ಸ್ವಕ್ಷೇತ್ರ. ಆರ್​ ಎಸ್​ಎಸ್​(RSS)ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಣೆದ ಬಲೆ, ಇದೇ ಚಿತ್ತಾಪುರದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅದೆಷ್ಟರ ಮಟ್ಟಿಗೆ ಅಂದ್ರೆ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಬೇಕಾ ಬೇಡ್ವಾ ಎನ್ನುವ ನಿರ್ಧಾರ ಹೈಕೋರ್ಟ್ ಅಂಗಳದಲ್ಲಿದೆ. ಈ ಮಧ್ಯೆ ಕೋರ್ಟ್ ಸೂಚನೆಯಂತೆ RSS ಅನುಮತಿಗಾಗಿ ಅರ್ಜಿ ಸಲ್ಲಿದೆ. ಮತ್ತೊಂದೆಡೆ ದಲಿತ ಪರ ಸಂಘಟನೆಗಳು ಸಹ ಅಂದೆ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ಕೋರಿವೆ. ಹೀಗಾಗಿ ಚಿತ್ತಾಪುರದಲ್ಲಿ ಪಥಸಂಚಲನ ಸಂಘರ್ಷ ಶುರುವಾಗಿದೆ.

ಕಲಬುರಗಿ ಹೈಕೋರ್ಟ್ ಪೀಠದ ಸೂಚನೆ ಮೇರೆಗೆ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದೆ. ಮೊನ್ನೆ ಡಿಸಿ ಸಿಗದ ಕಾರಣಕ್ಕೆ ಇಮೇಲ್ ಹಾಗೂ ವಾಟ್ಸಾಪ್ ಮೂಲಕ ಅರ್ಜಿ ಸಲ್ಲಿಕೆಯಾಗಿತ್ತು. ಇಂದು (ಅಕ್ಟೋಬರ್ 21) ಖುದ್ದು ಡಿಸಿ ಕಚೇರಿ ತೆರಳಿ, ನವೆಂಬರ್ 2ಕ್ಕೆ ಅನುಮತಿ ನೀಡಿ ಎಂದು ಮನವಿ ಮಾಡಿದ್ದು, ಸದ್ಯ ಜಿಲ್ಲಾಡಳಿತದ ಮುಂದಿನ ಆದೇಶಕ್ಕಾಗಿ RSS ಎದುರು ನೋಡುತ್ತಿದೆ. ಇನ್ನೊಂದೆಡೆ ಅಂದೇ ದಲಿತ ಸಂಘಟನೆಗಳು ಪಥಸಂಚಲನಕ್ಕೆ ಮನವಿ ಪತ್ರ ನೀಡಿದ್ದು, ತಮಗೆ ಅವಕಾಶ ಸಿಗುತ್ತೋ ಇಲ್ವೋ ಎನ್ನುವ ಆತಂಕದಲ್ಲಿ ಆರ್​​ಎಸ್​ಎಸ್​ ಮುಖಂಡರು ಇದ್ದಾರೆ.

ಇದನ್ನೂ ಓದಿ: ಚಿತ್ತಾಪುರದಲ್ಲಿ ಆರ್​​ಎಸ್​​ಎಸ್​​ ಪಥಸಂಚಲನ ಜಟಾಪಟಿ: ಮಹತ್ವದ ಸೂಚನೆ ನೀಡಿದ ಹೈಕೋರ್ಟ್

ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ RSS ಭಾನುವಾರ ಬೃಹತ್‌ ಪಥಸಂಚಲನ ಮೂಲಕ, ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿತ್ತು. ಆದ್ರೆ ತಹಶೀಲ್ದಾರ್ RSS ಪಥಸಂಚಲನಕ್ಕೆ ಬ್ರೇಕ್ ಹಾಕಿದ್ರು. ರಾತ್ರೋರಾತ್ರಿ ನಗರದಲ್ಲಿ ಹಾಕಿದ್ದ ಕೇಸರಿ ಧ್ವಜ, ಭಗವಾಧ್ವಜ, ಬ್ಯಾನರ್‌, ಬಂಟಿಂಗ್ಸ್​ಗಳನ್ನ ಪುರಸಭೆಯ ಸಿಬ್ಬಂದಿ ತೆರವು ಮಾಡಿದ್ರು. ಆ ಬಳಿಕ RSS ಹೈಕೋರ್ಟ್ ಮೆಟ್ಟಿಲೇರಿತ್ತು. ಮತ್ತೊಮ್ಮೆ ಪಥಸಂಚಲನಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿತ್ತು. ಇದೀಗ ಕೋರ್ಟ್ ಸೂಚನೆಯಂತೆ RSS 2ನೇ ಬಾರಿ ಮನವಿ ಪತ್ರ ನೀಡಿದೆ.

RSS ಪಂಥಸಂಚಲನಕ್ಕೆ ಭೀಮ್ ಆರ್ಮಿ ಕೌಂಟರ್

ಇನ್ನು ಇದಕ್ಕೆ ಕೌಂಟರ್ ಆಗಿ ಪಥಸಂಚಲನ ನಡೆಸುವುದಕ್ಕೆ ಭೀಮ್ ಆರ್ಮಿ ಸಂಘಟನೆ ಸಜ್ಜಾಗಿದೆ. ನವೆಂಬರ್​ 2 ರಂದೇ ಚಿತ್ತಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಭೀಮ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದೆ. ನಾವೂ ಲಾಠಿ ಹಿಡಿದು ಜಾಥಾ ಮಾಡುತ್ತೇವೆ. ನಮ್ಗೂ ಅವಕಾಶ ಕೊಡಿ ಎಂದು ಭೀಮ್ ಆರ್ಮಿ ಭಾರತ ಏಕ್ತಾ ಮಿಷನ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಟಾಕ್ ಫೈಟ್

RSS ಚಟುವಟಿಕೆಗಳಿಗೆ ಕಡಿವಾಣ ಹಾಕ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ನಿಗಿನಿಗಿ ಅಂತಿದ್ದಾರೆ. RSSಗೆ ಇಂತಹ ನೂರಾರು ಖರ್ಗೆಗಳನ್ನ ಎದುರಿಸುವ ಶಕ್ತಿ ಇದೆ ಅಂತಾ ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಲು ಯತ್ನಿಸ್ತಿದ್ದಾರೆ ಎಂದು ಜರಿದಿದ್ದಾರೆ. ಮತ್ತೊಂದೆಡೆ ಸಿಎಂ-ಡಿಸಿಎಂ ಹಗಲಲ್ಲೇ ನಾಟಕ ಮಾಡ್ತಾರೆ ಎಂದು ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ.

ಒಟ್ಟಿನಲ್ಲಿ ರಾಜಕೀಯ ಜಟಾಪಟಿಯ ನಡುವೆ ಎಲ್ಲರ ಕಣ್ಣು ಚಿತ್ತಾಪುರದತ್ತ ನೆಟ್ಟಿದೆ. ಸೆಪ್ಟೆಂಬರ್ 24ರಂದು ಹೈಕೋರ್ಟ್​ನಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದ್ದು, ಅಂತಿಮವಾಗಿ ಕೋರ್ಟ್ ಏನು ಹೇಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?