Karnataka Assembly session: ಆರ್​ಟಿಐ ಕಾರ್ಯಕರ್ತರು ಐಷಾರಾಮಿ ಬದುಕು ನಡೆಸುತ್ತಿರುವ ಬ್ಲ್ಯಾಕ್​ಮೇಲರ್​ಗಳು: ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 12, 2025 | 1:08 PM

Karnataka Assembly session: ಯತ್ನಾಳ್ ಅವರೊಂದಿಗೆ ಧ್ವನಿಗೂಡಿಸಿದ ಹಿರಿಯ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಮಾಹಿತಿ ಹಕ್ಕು ಕಾಯ್ದೆ ಒಂದು ಶಕ್ತಿಶಾಲಿ ಆಯುಧ, ಆರ್​ಟಿಐ ಕಾರ್ಯಕರ್ತರೆಂದು ಹೇಳಿಕೊಳ್ಳುವವರು ಸರ್ಕಾರೀ ಕಾಮಗಾರಿ, ಸರ್ಕಾರೀ ಕಟ್ಟಡಗಳ ಬಗ್ಗೆ ಮಾಹಿತಿ ಕೇಳಲಿ, ಆದರೆ ವ್ಯಕ್ತಿಯೊಬ್ಬ ಮನೆ ಕಟ್ಟುತ್ತಿದ್ದರೆ ಅದರ ಮಾಹಿತಿಯನ್ನು ಕೇಳುವುದು ಕಾಯ್ದೆಯ ವ್ಯಾಪ್ತಿಯಡಿ ಬರೋದಿಲ್ಲ ಎಂದು ಹೇಳಿದರು.

ಬೆಂಗಳೂರು, ಆಗಸ್ಟ್ 12: ವಿಧಾನಸಭಾ ಅಧಿವೇಶನದಲ್ಲಿ (Karnataka Assembly Session) ಇಂದು ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗ ಮಾಡಿಕೊಡು ಐಷಾರಾಮಿ ಬದುಕು ನಡೆಸುತ್ತಿರುವ ಆರ್​ಟಿಐ ಕಾರ್ಯಕರ್ತರ ಬಗ್ಗೆ ಚರ್ಚೆ ನಡೆಯಿತು. ಸದನದಲ್ಲಿ ಮಾತಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಅರ್​ಟಿಐ ಕಾರ್ಯಕರ್ತರು ಭವ್ಯ ಬಂಗಲೆಗಳನ್ನು ಕಟ್ಟಿಕೊಂಡು ಮನೆಮುಂದೆ ಕಾರುಗಳನ್ನು ನಿಲ್ಲಿಸಿಕೊಂಡು ವೈಭೋಗದ ಬಾಳ್ವೆ ನಡೆಸುತ್ತಿದ್ದಾರೆ. ಇವರಿಗೆ ಹಣ ಎಲ್ಲಿಂದ ಬರುತ್ತದೆ? ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ಬ್ಲ್ಯಾಕ್​ಮೇಲ್ ಮಾಡುವುದೇ ಇವರ ಕಸುಬಾಗಿದೆ, ಭ್ರಷ್ಟಾಚಾರವನ್ನು ತಡೆಯಲು ಕಾಯ್ದೆಯನ್ನು ರೂಪಿಸಲಾಗಿದೆ, ಅದರೆ ಆರ್​ಟಿಐ ಕಾರ್ಯಕರ್ತರು ಭ್ರಷ್ಟಾಚಾರಿಗಳನ್ನು ಶೋಷಿಸಿ ಅವರಿಗಿಂತ ದೊಡ್ಡ ಭ್ರಷ್ಟಾಚಾರವೆಸಗುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕಬೇಕು ಎನ್ನುತ್ತಾರೆ.

ಇದನ್ನೂ ಓದಿ:   Karnataka Assembly session: ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿರುವುದಕ್ಕೆ ವಿವರಣೆ ಕೇಳಿದ ವಿಪಕ್ಷ ನಾಯಕರು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.