Karnataka Assembly session: ಆರ್ಟಿಐ ಕಾರ್ಯಕರ್ತರು ಐಷಾರಾಮಿ ಬದುಕು ನಡೆಸುತ್ತಿರುವ ಬ್ಲ್ಯಾಕ್ಮೇಲರ್ಗಳು: ಯತ್ನಾಳ್
Karnataka Assembly session: ಯತ್ನಾಳ್ ಅವರೊಂದಿಗೆ ಧ್ವನಿಗೂಡಿಸಿದ ಹಿರಿಯ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಮಾಹಿತಿ ಹಕ್ಕು ಕಾಯ್ದೆ ಒಂದು ಶಕ್ತಿಶಾಲಿ ಆಯುಧ, ಆರ್ಟಿಐ ಕಾರ್ಯಕರ್ತರೆಂದು ಹೇಳಿಕೊಳ್ಳುವವರು ಸರ್ಕಾರೀ ಕಾಮಗಾರಿ, ಸರ್ಕಾರೀ ಕಟ್ಟಡಗಳ ಬಗ್ಗೆ ಮಾಹಿತಿ ಕೇಳಲಿ, ಆದರೆ ವ್ಯಕ್ತಿಯೊಬ್ಬ ಮನೆ ಕಟ್ಟುತ್ತಿದ್ದರೆ ಅದರ ಮಾಹಿತಿಯನ್ನು ಕೇಳುವುದು ಕಾಯ್ದೆಯ ವ್ಯಾಪ್ತಿಯಡಿ ಬರೋದಿಲ್ಲ ಎಂದು ಹೇಳಿದರು.
ಬೆಂಗಳೂರು, ಆಗಸ್ಟ್ 12: ವಿಧಾನಸಭಾ ಅಧಿವೇಶನದಲ್ಲಿ (Karnataka Assembly Session) ಇಂದು ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗ ಮಾಡಿಕೊಡು ಐಷಾರಾಮಿ ಬದುಕು ನಡೆಸುತ್ತಿರುವ ಆರ್ಟಿಐ ಕಾರ್ಯಕರ್ತರ ಬಗ್ಗೆ ಚರ್ಚೆ ನಡೆಯಿತು. ಸದನದಲ್ಲಿ ಮಾತಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಅರ್ಟಿಐ ಕಾರ್ಯಕರ್ತರು ಭವ್ಯ ಬಂಗಲೆಗಳನ್ನು ಕಟ್ಟಿಕೊಂಡು ಮನೆಮುಂದೆ ಕಾರುಗಳನ್ನು ನಿಲ್ಲಿಸಿಕೊಂಡು ವೈಭೋಗದ ಬಾಳ್ವೆ ನಡೆಸುತ್ತಿದ್ದಾರೆ. ಇವರಿಗೆ ಹಣ ಎಲ್ಲಿಂದ ಬರುತ್ತದೆ? ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ಬ್ಲ್ಯಾಕ್ಮೇಲ್ ಮಾಡುವುದೇ ಇವರ ಕಸುಬಾಗಿದೆ, ಭ್ರಷ್ಟಾಚಾರವನ್ನು ತಡೆಯಲು ಕಾಯ್ದೆಯನ್ನು ರೂಪಿಸಲಾಗಿದೆ, ಅದರೆ ಆರ್ಟಿಐ ಕಾರ್ಯಕರ್ತರು ಭ್ರಷ್ಟಾಚಾರಿಗಳನ್ನು ಶೋಷಿಸಿ ಅವರಿಗಿಂತ ದೊಡ್ಡ ಭ್ರಷ್ಟಾಚಾರವೆಸಗುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕಬೇಕು ಎನ್ನುತ್ತಾರೆ.
ಇದನ್ನೂ ಓದಿ: Karnataka Assembly session: ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿರುವುದಕ್ಕೆ ವಿವರಣೆ ಕೇಳಿದ ವಿಪಕ್ಷ ನಾಯಕರು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
