Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ: 6 ಆರೋಪಿಗಳ ಬಂಧನ

ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ: 6 ಆರೋಪಿಗಳ ಬಂಧನ
ಹತ್ಯೆಗೀಡಾದ ಆರ್​ಟಿಐ ಕಾರ್ಯಕರ್ತ ಶ್ರೀಧರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 18, 2021 | 10:32 PM

ಬಳ್ಳಾರಿ: ಮಾಹಿತಿ ಹಕ್ಕು ಕಾಯ್ದೆ (Right To Information – RTI) ಕಾರ್ಯಕರ್ತ ಟಿ.ಶ್ರೀಧರ್ ಕೊಲೆ ಪ್ರಕರಣ ಸಂಬಂಧ ಈವರೆಗೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಧಿತರನ್ನು ವಾಗೀಶ್, ಯಲ್ಲಪ್ಪ, ಹನುಮಂತ, ಮ್ಯಾಕಿ ಹನುಮಂತ, ರಾಯದುರ್ಗದ ಹನುಮಂತ, ಹೆಚ್.ಕೆ.ಹಾಲೇಶ್ ಎಂದು ಗುರುತಿಸಲಾಗಿದೆ. ಹೆಚ್.ಕೆ.ಹಾಲೇಶ್ ಈ ಕೊಲೆಯ ರೂವಾರಿ ಎಂದು ಹೇಳಲಾಗಿದೆ. ಆದರೆ ಮಾಧ್ಯಮ ಪ್ರಕಟಣೆಯಲ್ಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಪುತ್ರ ಭರತ್ ಹೆಸರನ್ನು ಉಲ್ಲೇಖಿಸಿಲ್ಲ.

ಹಾಲೇಶ​ನ ಬಂಧನದ ನಂತರ ಭರತ್ ತಲೆಮರೆಸಿಕೊಂಡಿದ್ದಾನೆ. ಎಚ್​.ಕೆ.ಹಾಲೇಶ್ ಭೂಕಬಳಿಕೆ ಹಾಗೂ ಅಕ್ರಮ ನಡೆಸಿರುವ ಬಗ್ಗೆ ಆರ್​​ಟಿಐ ಕಾರ್ಯಕರ್ತ ಟಿ.ಶ್ರೀಧರ್ ದೂರು ದಾಖಲಿಸಿದ್ದರು. ಇದೇ ದ್ವೇಷದ ಹಿನ್ನೆಲೆಯಲ್ಲಿ ಆರ್​ಟಿಐ ಕಾರ್ಯಕರ್ತನ ಕೊಲೆ ನಡೆದಿತ್ತು ಎಂಬ ಸಂಗತಿ ಪ್ರಾಥಮಿಕ ತನಿಖೆಯಿಂದ ಬಯಲಾಗಿತ್ತು.

ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಜುಲೈ 15ರಂದು ಆರ್​ಟಿಐ ಕಾರ್ಯಕರ್ತ ಶ್ರೀಧರ್ ಹತ್ಯೆಯಾಗಿತ್ತು. ಕೊಲೆಗೆ ಸಂಬಂಧಪಟ್ಟಂತೆ ಅವರ ಪತ್ನಿ ಶಿಲ್ಪಾ ಹಾಲೇಶ್, ಪಿ.ಟಿ.ಭರತ್ ನಾಯ್ಕ್​ ವಿರುದ್ಧ ದೂರು ನೀಡಿದ್ದರು. ತನಗೂ ಜೀವ ಬೆದರಿಕೆ ಇದೆ ದೂರಿನಲ್ಲಿ ತಿಳಿಸಿದ್ದರು.

(RTI Volunteer Sridhar Murder Case 6 Accused arrested)

ಇದನ್ನೂ ಓದಿ: ಆರ್​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ: ಮಾಜಿ ಸಚಿವ ಪಿಟಿ ಪರಮೇಶ್ವರ್ ನಾಯ್ಕ್ ಆಪ್ತನ ಬಂಧನ, ತಲೆಮರೆಸಿಕೊಂಡ ಪರಮೇಶ್ವರ್ ನಾಯ್ಕ್ ಮಗ

ಇದನ್ನೂ ಓದಿ: ಆರ್​ಟಿಐ ಕಾರ್ಯಕರ್ತ ಶ್ರೀಧರ್ ಹತ್ಯೆ ಹಿಂದೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್​: ಶ್ರೀಧರ್​ ಪತ್ನಿ ಹಾಗೂ ತಾಯಿ ಆರೋಪ

Published On - 10:30 pm, Sun, 18 July 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ