AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ: 6 ಆರೋಪಿಗಳ ಬಂಧನ

ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ: 6 ಆರೋಪಿಗಳ ಬಂಧನ
ಹತ್ಯೆಗೀಡಾದ ಆರ್​ಟಿಐ ಕಾರ್ಯಕರ್ತ ಶ್ರೀಧರ್
TV9 Web
| Edited By: |

Updated on:Jul 18, 2021 | 10:32 PM

Share

ಬಳ್ಳಾರಿ: ಮಾಹಿತಿ ಹಕ್ಕು ಕಾಯ್ದೆ (Right To Information – RTI) ಕಾರ್ಯಕರ್ತ ಟಿ.ಶ್ರೀಧರ್ ಕೊಲೆ ಪ್ರಕರಣ ಸಂಬಂಧ ಈವರೆಗೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಧಿತರನ್ನು ವಾಗೀಶ್, ಯಲ್ಲಪ್ಪ, ಹನುಮಂತ, ಮ್ಯಾಕಿ ಹನುಮಂತ, ರಾಯದುರ್ಗದ ಹನುಮಂತ, ಹೆಚ್.ಕೆ.ಹಾಲೇಶ್ ಎಂದು ಗುರುತಿಸಲಾಗಿದೆ. ಹೆಚ್.ಕೆ.ಹಾಲೇಶ್ ಈ ಕೊಲೆಯ ರೂವಾರಿ ಎಂದು ಹೇಳಲಾಗಿದೆ. ಆದರೆ ಮಾಧ್ಯಮ ಪ್ರಕಟಣೆಯಲ್ಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಪುತ್ರ ಭರತ್ ಹೆಸರನ್ನು ಉಲ್ಲೇಖಿಸಿಲ್ಲ.

ಹಾಲೇಶ​ನ ಬಂಧನದ ನಂತರ ಭರತ್ ತಲೆಮರೆಸಿಕೊಂಡಿದ್ದಾನೆ. ಎಚ್​.ಕೆ.ಹಾಲೇಶ್ ಭೂಕಬಳಿಕೆ ಹಾಗೂ ಅಕ್ರಮ ನಡೆಸಿರುವ ಬಗ್ಗೆ ಆರ್​​ಟಿಐ ಕಾರ್ಯಕರ್ತ ಟಿ.ಶ್ರೀಧರ್ ದೂರು ದಾಖಲಿಸಿದ್ದರು. ಇದೇ ದ್ವೇಷದ ಹಿನ್ನೆಲೆಯಲ್ಲಿ ಆರ್​ಟಿಐ ಕಾರ್ಯಕರ್ತನ ಕೊಲೆ ನಡೆದಿತ್ತು ಎಂಬ ಸಂಗತಿ ಪ್ರಾಥಮಿಕ ತನಿಖೆಯಿಂದ ಬಯಲಾಗಿತ್ತು.

ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಜುಲೈ 15ರಂದು ಆರ್​ಟಿಐ ಕಾರ್ಯಕರ್ತ ಶ್ರೀಧರ್ ಹತ್ಯೆಯಾಗಿತ್ತು. ಕೊಲೆಗೆ ಸಂಬಂಧಪಟ್ಟಂತೆ ಅವರ ಪತ್ನಿ ಶಿಲ್ಪಾ ಹಾಲೇಶ್, ಪಿ.ಟಿ.ಭರತ್ ನಾಯ್ಕ್​ ವಿರುದ್ಧ ದೂರು ನೀಡಿದ್ದರು. ತನಗೂ ಜೀವ ಬೆದರಿಕೆ ಇದೆ ದೂರಿನಲ್ಲಿ ತಿಳಿಸಿದ್ದರು.

(RTI Volunteer Sridhar Murder Case 6 Accused arrested)

ಇದನ್ನೂ ಓದಿ: ಆರ್​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ: ಮಾಜಿ ಸಚಿವ ಪಿಟಿ ಪರಮೇಶ್ವರ್ ನಾಯ್ಕ್ ಆಪ್ತನ ಬಂಧನ, ತಲೆಮರೆಸಿಕೊಂಡ ಪರಮೇಶ್ವರ್ ನಾಯ್ಕ್ ಮಗ

ಇದನ್ನೂ ಓದಿ: ಆರ್​ಟಿಐ ಕಾರ್ಯಕರ್ತ ಶ್ರೀಧರ್ ಹತ್ಯೆ ಹಿಂದೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್​: ಶ್ರೀಧರ್​ ಪತ್ನಿ ಹಾಗೂ ತಾಯಿ ಆರೋಪ

Published On - 10:30 pm, Sun, 18 July 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು