Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ಹಣ ಸುಲಿಗೆ ಆರೋಪ; ಮೆಜೆಸ್ಟಿಕ್​ಗೆ ಆರ್​ಟಿಒ ಅಧಿಕಾರಿಗಳು ಭೇಟಿ

ಮಫ್ತಿಯಲ್ಲಿ ಬಂದು ಖಾಸಗಿ ಬಸ್​ಗಳಲ್ಲಿ ಅಪರ ಸಾರಿಗೆ ಆಯುಕ್ತ ನರೇಂದ್ರ ಹೋಳ್ಕರ್ ತಪಾಸಣೆ ನಡೆಸಿದರು. ಪರಿಶೀಲನೆಯಲ್ಲಿ ಪ್ರಯಾಣಿಕರಿಂದಲೂ ದರದ ಬಗ್ಗೆ ಮಾಹಿತಿ ಪಡೆದರು. ದರ ಪಟ್ಟಿ ಹಿಡಿದು ಜನರ ಬಳಿ ದರದ ಬಗ್ಗೆ ವಿಚಾರಣೆ ನಡೆಸಿದರು. ನಂತರ ಹೆಚ್ಚು ದರ ಪಡೆಯದಂತೆ ಖಾಸಗಿ ಬಸ್​ನವರಿಗೂ ತಾಕೀತು ಮಾಡಿದರು.

ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ಹಣ ಸುಲಿಗೆ ಆರೋಪ; ಮೆಜೆಸ್ಟಿಕ್​ಗೆ ಆರ್​ಟಿಒ ಅಧಿಕಾರಿಗಳು ಭೇಟಿ
ದರದ ಬಗ್ಗೆ ಪ್ರಯಾಣಿಕರ ಬಳಿ ವಿಚಾರಣೆ ನಡೆಸುತ್ತಿರುವ ಆರ್​ಟಿಒ ಅಧಿಕಾರಿಗಳು
Follow us
sandhya thejappa
|

Updated on: Apr 10, 2021 | 2:50 PM

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಬಂದು ತಲುಪಿದೆ. ಬಸ್​ಗಳಿಲ್ಲದೇ ಜನರು ತೀರಾ ಪರದಾಟ ಪಡುತ್ತಿದ್ದಾರೆ. ಅನಿವಾರ್ಯವಾಗಿ ಖಾಸಗಿ ಬಸ್​ಗಳಲ್ಲಿ, ಖಾಸಗಿ ವಾಹನಗಳಲ್ಲಿ ಪ್ರಾಯಾಣಿಕರು ಪ್ರಯಾಣ ಬೆಳೆಸುತ್ತಿದ್ದಾರೆ. ಆದರೆ ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ಹಣವನ್ನು ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆರೋಪ ಕೇಳಿಬಂದ ಹಿನ್ನೆಲೆ ಮೆಜೆಸ್ಟಿಕ್ ಕೆಎಸ್ಆರ್​ಟಿಸಿ ನಿಲ್ದಾಣಕ್ಕೆ ಆರ್​ಟಿಒ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಫ್ತಿಯಲ್ಲಿ ಬಂದು ಖಾಸಗಿ ಬಸ್​ಗಳಲ್ಲಿ ಅಪರ ಸಾರಿಗೆ ಆಯುಕ್ತ ನರೇಂದ್ರ ಹೋಳ್ಕರ್ ತಪಾಸಣೆ ನಡೆಸಿದರು. ಪರಿಶೀಲನೆಯಲ್ಲಿ ಪ್ರಯಾಣಿಕರಿಂದಲೂ ದರದ ಬಗ್ಗೆ ಮಾಹಿತಿ ಪಡೆದರು. ದರ ಪಟ್ಟಿ ಹಿಡಿದು ಜನರ ಬಳಿ ದರದ ಬಗ್ಗೆ ವಿಚಾರಣೆ ನಡೆಸಿದರು. ನಂತರ ಹೆಚ್ಚು ದರ ಪಡೆಯದಂತೆ ಖಾಸಗಿ ಬಸ್​ನವರಿಗೂ ತಾಕೀತು ಮಾಡಿದರು.

ಹಾಲಸ್ವಾಮಿ ಎದುರು ಹೆಚ್ಚು ದರ ವಸೂಲಿ ಮಾಡಿದ ಖಾಸಗಿ ಬಸ್ ಕಂಡಕ್ಟರ್ ಖಾಸಗಿ ಬಸ್​ಗಳಿಂದ ಹೆಚ್ಚಿನ ದರ ವಸೂಲಿ ಆರೋಪ ವಿಚಾರಕ್ಕೆ ಸಂಬಂಧಿಸಿ ಮೆಜೆಸ್ಟಿಕ್​ನ ಕೆಎಸ್ಆರ್​ಟಿಸಿ ಬಸ್ ನಿಲ್ದಾಣಕ್ಕೆ ಜಂಟಿ ಸಾರಿಗೆ ಆಯುಕ್ತ ಹಾಲಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಬಸ್ ಕಂಡಕ್ಟರ್ ಹಾಲಸ್ವಾಮಿ ಎದುರೇ ಪ್ರಯಾಣಿಕರಿಂದ ಹೆಚ್ಚು ದರ ವಸೂಲಿ ಮಾಡುತ್ತಿದ್ದರು.

ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ 370 ರೂ. ಬದಲು 400 ರೂ. ಕೇಳಿದ್ದ ಕಾರಣ ಪ್ರಯಾಣಿಕರು ರೊಚ್ಚಿಗೆದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಜಂಟಿ ಆಯುಕ್ತ ಹಾಲಸ್ವಾಮಿ ಹೆಚ್ಚುವರಿ ದರವನ್ನು ಜನರಿಗೆ ವಾಪಸ್ ಕೊಡಿಸಿದರು. ನಂತರ ಖಾಸಗಿ ಬಸ್​ಗಳಲ್ಲಿ ದರ ಪಟ್ಟಿ ಅಂಟಿಸಿದರು.

ಇದನ್ನೂ ಓದಿ

ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಕರಡಿ ಸೆರೆ; ಪರಾರಿಯಾಗಿದ್ದ ಕರಡಿಯೇ ಬೋನಿಗೆ ಬಿತ್ತಾ ಎನ್ನುವುದು ಮಾತ್ರ ನಿಗೂಢ

ದೇಹ ಸೇರುತ್ತಿದೆ ವಿಷ; ಬಾಗಲಕೋಟೆಯಲ್ಲಿ ಚರಂಡಿ ನೀರಲ್ಲಿ ತರಕಾರಿ ಬೆಳೆಯುತ್ತಿರುವ ಬೆಳೆಗಾರರ ವಿರುದ್ಧ ಸ್ಥಳೀಯರ ಆಕ್ರೋಶ

(RTO officials visited Majestic and reviewed bus fares)

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ