AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಕರಡಿ ಸಂಗಣ್ಣ ಹಾಲುಮತ ಸಮಾಜದ ಕ್ಷಮೆ ಕೇಳಬೇಕು -ರುದ್ರಣ್ಣ ಗುಳಗುಳಿ ಆಕ್ರೋಶ

ಸಂಸದ ಕರಡಿ ಸಂಗಣ್ಣ ಕನಕ ಭಕ್ತರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾಳೆಯಿಂದ ತಾಲೂಕು ಕೇಂದ್ರಗಳಲ್ಲಿ ಸಂಗಣ್ಣ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಂಸದ ಕರಡಿ ಸಂಗಣ್ಣ ಹಾಲುಮತ ಸಮಾಜದ ಕ್ಷಮೆ ಕೇಳಬೇಕು -ರುದ್ರಣ್ಣ ಗುಳಗುಳಿ ಆಕ್ರೋಶ
ವೃತ್ತ ನಿರ್ಮಾಣಕ್ಕೆ ನಗರಸಭೆಗೆ ಸೇರಿದ 20 ವಾಣಿಜ್ಯ ಮಳಿಗೆ ತೆರವು
Follow us
TV9 Web
| Updated By: ಆಯೇಷಾ ಬಾನು

Updated on: Jul 11, 2021 | 9:57 AM

ಕೊಪ್ಪಳ: ಕನಕದಾಸ ಮೂರ್ತಿ ಪ್ರತಿಷ್ಠಾಪನೆಗೆ ಜಾಗ ಒತ್ತುವರಿ ಆರೋಪಿಸಿ ಕೊಪ್ಪಳ ಸಂಸದ ಕರಡಿ ಸಂಗಣ್ಣ ಡಿಸಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸಂಸದ  ಕರಡಿ ಸಂಗಣ್ಣಹಾಲುಮತ ಸಮಾಜದ ಕ್ಷಮೆ ಕೇಳಬೇಕು ಎಂದು ಹಾಲುಮತ ಮಹಾಸಭಾ ಅಧ್ಯಕ್ಷ ರುದ್ರಣ್ಣ ಗುಳಗುಳಿ ಒತ್ತಾಯಿಸಿದ್ದಾರೆ.

ಸಂಸದ ಕರಡಿ ಸಂಗಣ್ಣ ಕನಕ ಭಕ್ತರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾಳೆಯಿಂದ ತಾಲೂಕು ಕೇಂದ್ರಗಳಲ್ಲಿ ಸಂಗಣ್ಣ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಪತ್ರ ಬರೆದ ವಿಚಾರ ತಿಳಿದು ನಾನು ಸಂಗಣ್ಣ ಅವರಿಗೆ ಕರೆ ಮಾಡಿದ್ದೆ‌. ಆದ್ರೆ ಸಂಸದ ಕರಡಿ ಸಂಗಣ್ಣ ಕರೆಯನ್ನು ಅರ್ದಕ್ಕೆ ಕಟ್ ಮಾಡಿದ್ರು. ಸಂಗಣ್ಣ ಅವರೇ ನನಗೆ ಬರಲು ಹೇಳಿದ್ರು. ಆದ್ರೆ ಅವರು ನಮಗೆ ಭೇಟಿಯಾಗಲಿಲ್ಲ. ಮುಂದಿನ ದಿನದಲ್ಲಿ ಸಂಗಣ್ಣ ಪತ್ರ ವಾಪಸ್ ತೆಗೆದುಕೊಳ್ಳಬೇಕು. ಸಂಗಣ್ಣ ಕರಡಿ ಕನಕ ಭಕ್ತರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಸೋಮವಾರದಿಂದ ಪ್ರತಿ ತಾಲೂಕ ಕೇಂದ್ರಗಳಲ್ಲಿ ಸಂಗಣ್ಣ ಕರಡಿ ವಿರುದ್ದ ಪ್ರತಿಭಟನೆ ಮಾಡಲಾಗವುದು. ಪ್ರತಿಭಟನೆ ಮಾಡಿ ಪ್ರಧಾನಿಗೆ ಮನವಿ ಕೊಡುತ್ತೇವೆ. ಒಂದು ಸಮಾಜದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೆ. ಆದ್ರೆ ಅವರು ನನಗೆ ಅವಮಾನ ಮಾಡಿದ್ದಾರೆ. ಅವರ ಅಪ್ರಭುದ್ದ ವರ್ತನೆ ಇಂದ ಇಡೀ ಸಮಾಜಕ್ಕೆ ಅಪಮಾನ ಮಾಡಿದ್ದಾರೆಂದ ರುದ್ರಣ್ಣ ಹೇಳಿದ್ರು.

ಕೊಪ್ಪಳ ಬಸ್ ನಿಲ್ದಾಣದ ಮುಂದಿರುವ ಕನಕದಾಸ ವೃತ್ತದ ಸ್ಥಳದಲ್ಲಿದ್ದ ಕಾಂಪ್ಲೆಕ್ಸ್, ಕಟ್ಟೆಯನ್ನು ಕೆಡವಿ ಅಲ್ಲಿ ಕನಕದಾಸ ಮೂರ್ತಿ ಸ್ಥಾಪನೆಗೆ ಸಿದ್ಧತೆ ನಡೆದಿದೆ. ಹೀಗಾಗಿ ಇದರ ನಿರ್ಮಾಣಕ್ಕೆ ಹೆಚ್ಚುವರಿ ಜಾಗ ಬಳಕೆಗೆ ಸಂಸದ ಕರಡಿ ಸಂಗಣ್ಣ ವಿರೋಧ ವ್ಯಕ್ತಪಡಿಸಿದ್ದರು. ಹಾಗೂ ಈ ಬಗ್ಗೆ ಕೊಪ್ಪಳ ಡಿಸಿಗೆ ಪತ್ರ ಬರೆದಿದ್ದರು.

1988ರಲ್ಲಿ ಆಗಿನ ಸಾರಿಗೆ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸ ವೃತ್ತಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಆದ್ರೆ ಇತ್ತೀಚೆಗೆ ಬಹುಕೋಟಿ ವೆಚ್ಚದಲ್ಲಿ ಕನಕದಾಸ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅದೇ ಸ್ಥಳದಲ್ಲಿ ಉದ್ಯಾನವನ ನಿರ್ಮಾಣ ಮಾಡುವ ಯೋಜನೆ ಮಾಡಿಕೊಳ್ಳಲಾಗಿತ್ತು. ಅದರಂತೆಯೇ ವೃತ್ತ ನಿರ್ಮಾಣಕ್ಕೆ ನಗರಸಭೆಗೆ ಸೇರಿದ 20 ವಾಣಿಜ್ಯ ಮಳಿಗೆ ತೆರವು ಮಾಡಲಾಯಿತು. ವಾಣಿಜ್ಯಮಳಿಗೆ ಜಾಗ ಹೆಚ್ಚುವರಿಯಾಗಿ ಬಳಸಿ ಕನಕದಾಸ ಮೂರ್ತಿ ಪ್ರತಿಷ್ಠಾಪಿಸಿ ವೃತ್ತ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಜಾಗ ಬಳಕೆಗೆ ಸಂಸದ ಕರಡಿ ಸಂಗಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರ ಸಭೆಯ ವಾಣಿಜ್ಯ ಮಳಿಗೆಯ ಜಾಗವನ್ನು ಅತಿಕ್ರಮಿಸಿಕೊಂಡು ಕನಕದಾಸ ವೃತ್ತ ನಿರ್ಮಾಣ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಡಿಸಿಗೆ ಕರಡಿ ಸಂಗಣ್ಣ ಪತ್ರ ಬರೆದಿದ್ದಾರೆ. ಕರಡಿ ಸಂಗಣ್ಣ ಪತ್ರ ಹಿನ್ನೆಲೆಯಲ್ಲಿ ಕುರುಬ ಸಮುದಾಯ ವಿರೋಧಿಸಿದೆ. ಸಂಗಣ್ಣ ಕುರುಬ ಸಮುದಾಯದ ಕ್ಷಮೆ ಕೇಳುವಂತೆ ಆಗ್ರಹಿಸಲಾಗಿದೆ.

ಇದನ್ನೂ ಓದಿ: ಕನಕದಾಸ ವೃತ್ತ ನಿರ್ಮಾಣ ವಿರೋಧಿಸಿ ಸಂಸದ ಕರಡಿ ಸಂಗಣ್ಣ ಪತ್ರ; ಸಂಗಣ್ಣ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಕುರುಬ ಸಮುದಾಯ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ