AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾಂ ಬಿರುಕು ವಿವಾದ; ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ?

ಕಳೆದ ಮೇ ತಿಂಗಳ 7 ರಂದು ಮಂಡ್ಯದ ಜಿ.ಪಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಸುಮಲತಾ ನಾವು ಎಷ್ಟೆ ಹುಡುಕಾಡಿದ್ರು ಆಕ್ಸಿಜನ್ ಸಿಲಿಂಡರ್ ಸಿಗಲ್ಲ ನಿಮಗೆ ಎಲ್ಲಿಂದ ಸಿಕ್ತಿದೆ ಎಂದು ಬಹಿರಂಗವಾಗಿಯೇ ಮಾತನಾಡಿದ್ರು.

ಡ್ಯಾಂ ಬಿರುಕು ವಿವಾದ; ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ?
ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ
TV9 Web
| Edited By: |

Updated on: Jul 07, 2021 | 7:34 AM

Share

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿನ ಟಿಎಂ ಹೊಸೂರು ಅರಣ್ಯ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದ ಗಣಿಗಾರಿಗೆ ನಡೀತಿದ್ರು ಸಂಸದೆ ಸುಮಲತಾ ಅಂಬರೀಶ್ ಚೆನ್ನನ‌ಹಳ್ಳಿ, ಹಂಗರ ಹಳ್ಳಿಗೆ ಭೇಟಿ ನೀಡ್ತಿರೋದು ಯಾಕೆ? ಸಂಸದೆ ಸುಮಲತ ಅಂಬರೀಶ್ ನಡೆ ಏನು? ಎಂಬ ಪ್ರಶ್ನೆ ಈಗ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಶ್ನೆಗೆ ಉತ್ತರ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ? ಎಂಬುವುದು.

ಚೆನ್ನನ‌ಹಳ್ಳಿ, ಹಂಗರ ಹಳ್ಳಿಯ ಎರಡೂ ಕಡೆಗಳಲ್ಲಿ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗೇ ಹೆಚ್ಚಿನ ಸಂಖ್ಯೆಯಲ್ಲಿ ಗಣಿಗಾರಿಕೆ ಮಾಡ್ತಿದ್ದಾರೆ. ಸುಮಲತಾ ಅಂಬರೀಶ್ ಕೊವಿಡ್ ಟೈಂನಲ್ಲಿ ಜಿಲ್ಲೆಗೆ ಆಕ್ಸಿಜನ್ ಸಿಲಿಂಡರ್ ನೀಡೊ ವಿಚಾರದಲ್ಲಿ, ಡ್ಯಾಂ ಬಿರುಕು ಬಿಟ್ಟಿದೆ ಎಂದಾಗ ಮೊದಲು ಪ್ರಶ್ನಿಸಿದ್ದೇ ಶಾಸಕ ರವೀಂದ್ರ ಶ್ರೀಕಂಠಯ್ಯ. ಜಿಲ್ಲಾಡಳಿತಕ್ಕೆ ಸರ್ಕಾರದಿಂದ ನಿಗಧಿಯಾಗಿದ್ದ ಸಿಲಿಂಡರ್ ತಂದು ನಾನೇ ವೈಯಕ್ತಿಕವಾಗಿ ನೀಡ್ತಿದ್ದೀನಿ ಎಂದು ಸುಮಲತಾ ಹೇಳ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ರು.

ಕಳೆದ ಮೇ ತಿಂಗಳ 7 ರಂದು ಮಂಡ್ಯದ ಜಿ.ಪಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಸುಮಲತಾ ನಾವು ಎಷ್ಟೆ ಹುಡುಕಾಡಿದ್ರು ಆಕ್ಸಿಜನ್ ಸಿಲಿಂಡರ್ ಸಿಗಲ್ಲ ನಿಮಗೆ ಎಲ್ಲಿಂದ ಸಿಕ್ತಿದೆ ಎಂದು ಬಹಿರಂಗವಾಗಿಯೇ ಮಾತನಾಡಿದ್ರು. ಎಲ್ಲಾ ವಿಚಾರದಲ್ಲೂ ರಾಜಕೀಯ ಮಾಡಲಾಗ್ತಿದೆ ಎಂದು ಹೇಳಿ ಸಭೆಯಿಂದ ಅರ್ಧದಲ್ಲೇ ಸಂಸದೆ ಸುಮಲತಾ ಹೊರ ನಡೆದಿದ್ದರು. ಇದಾದ ನಂತರ ಡ್ಯಾಂ ಬಿರುಕು ಬಿಟ್ಟಿದೆ ಎಂದು ಸುಮಲತಾ ಹೇಳಿಕೆಗೆ ನೀಡಿದ್ದರು. ಈ ಹೇಳಿಕೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಮೇ 30 ರಂದು ಆಕ್ಷೇಪ ವ್ಯಕ್ತಪಡಿಸಿದ್ದ. ಸಂಸದರು ತಮ್ಮ ತಪ್ಪನ್ನ ಮುಚ್ಚಿಕೊಳ್ಳಲು ಪಾಲಿಶ್ ಹೇಳಿಕೆಗಳನ್ನ ನೀಡ್ತಿದ್ದಾರೆ ಎಂದು ಆಕ್ಷೇಪಿಸಿದ್ದರು. ಡ್ಯಾಂ ಬಿರುಕು ಬಿಟ್ಟಿದೆ ಎಂದಿದ್ದವರು ಡ್ಯಾಂ ನೋಡಲು ಹೋಗದೆ ಗಣಿಗಾರಿಕೆ ನಡೆಸ್ತಿರೊ ಸ್ಥಳಕ್ಕೆ ಯಾಕೆ ಭೇಟಿ ನೀಡ್ತಿದ್ದಾರೆ ಎಂದು ನಿನ್ನೆಯೂ ಸಂಸದೆ ಸುಮಲತಾರ ನಡೆಯನ್ನ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದ್ದ.

ಇದನ್ನೂ ಓದಿ: ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ – ಗಣಿ ಸಚಿವ ಮುರುಗೇಶ್​ ನಿರಾಣಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​