AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮಂದಿರಿಗೆ ಹೆಣ್ಣುಮಕ್ಕಳು ಸೀರೆ ಖರೀದಿಸಿ ಕೊಡಬೇಕು.. ಬಳ್ಳಾರಿಯಲ್ಲಿ ಹರಡಿದೆ ಸಖತ್​ ವದಂತಿ

ಗಣಿ ನಾಡು ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ ಮಹಿಳೆಯರು ಸೀರೆ ಖರೀದಿಗೆ ಮುಗಿ ಬಿದ್ದಿರುವುದೇ ಕಾಣುತ್ತಿದೆ. ತಾಯಿಗೆ ಸೀರೆ ಕೊಡಿಸದಿದ್ದರೆ ಕೆಟ್ಟದಾಗುತ್ತದೆ ಎನ್ನುವ ವದಂತಿ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದೆ. ಜೊತೆಗೆ ಇಂತಹ ವದಂತಿ ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬಿದ್ದೆ ತಡ ಮಹಿಳೆಯರು ತಮ್ಮ ತಾಯಿಗೆ ಸೀರೆ ಕೊಡಿಸಲು ಮುಂದಾಗಿದ್ದಾರೆ.

ಅಮ್ಮಂದಿರಿಗೆ ಹೆಣ್ಣುಮಕ್ಕಳು ಸೀರೆ ಖರೀದಿಸಿ ಕೊಡಬೇಕು.. ಬಳ್ಳಾರಿಯಲ್ಲಿ ಹರಡಿದೆ ಸಖತ್​ ವದಂತಿ
ತಾಯಿಗೆ ಆರತಿ ಬೆಳಗಿ ಸೀರೆ ಕೊಡುತ್ತಿರುವ ಮಗಳು
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Mar 03, 2021 | 1:34 PM

Share

ಬಳ್ಳಾರಿ: ಜನ ಮರಳೋ ಜಾತ್ರೆ ಮರಳೋ ಗೊತ್ತಿಲ್ಲ. ನಾವೆಲ್ಲಾ ಎಷ್ಟೇ ಆಧುನಿಕವಾಗಿ ಮುಂದುವರೆದಿದ್ದರೂ ನಮ್ಮ ಜನರು ಮಾತ್ರ ವದಂತಿಗಳಿಗೆ ಬೇಗ ಮಾರು ಹೋಗುತ್ತಾರೆ. ಈಗ ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಈಗ ಗಣಿ ನಾಡಿನಲ್ಲಿ ಹಬ್ಬಿದೆ. ಸೀರೆ ಕೊಡದಿದ್ದರೆ ಕೇಡಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಮಹಿಳೆಯರು ತಾಯಿಗೆ ಸೀರೆ ಕೊಡಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

ಗಣಿ ನಾಡು ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ ಮಹಿಳೆಯರು ಸೀರೆ ಖರೀದಿಗೆ ಮುಗಿ ಬಿದ್ದಿರುವುದೇ ಕಾಣುತ್ತಿದೆ. ತಾಯಿಗೆ ಸೀರೆ ಕೊಡಿಸದಿದ್ದರೆ ಕೆಟ್ಟದಾಗುತ್ತದೆ ಎನ್ನುವ ವದಂತಿ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದೆ. ಜೊತೆಗೆ ಇಂತಹ ವದಂತಿ ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬಿದ್ದೇ ತಡ.. ಮಹಿಳೆಯರು ತಮ್ಮ ತಾಯಿಗೆ ಸೀರೆ ಕೊಡಿಸಲು ಮುಂದಾಗಿದ್ದಾರೆ. ಕೆಲವರು ಸೀರೆ ಕೊಡಿಸದಿದ್ದರೆ ಏನಾದರೂ ಕೇಡಾಗಬಹುದು ಎನ್ನುವ ಭಯದಿಂದಲೂ ಸೀರೆ ಕೊಡಿಸಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

ಬೆಳ್ಳಿ ಕಡಗ ವದಂತಿ ಈ ಹಿಂದೆಯೂ ಜನರು ಒಬ್ಬನೇ ಮಗನಿದ್ದರೆ ಅವರಿಗೆ ಬೆಳ್ಳಿ ಕಡಗ ಕೊಡಬೇಕು ಎನ್ನುವ ವದಂತಿ ಹಬ್ಬಿದಾಗ ಕೂಡ ಬೆಳ್ಳಿ ಕಡಗ ನೀಡಿದ್ದರು. ಈಗ ಮಗಳು ತಾಯಿಗೆ ಸೀರೆ ಕೊಡಬೇಕು ಎನ್ನುವ ವದಂತಿ ಹಬ್ಬಿದೆ. ಹೀಗಾಗಿ ಗಂಡನ ಮನೆಯಲ್ಲಿದ್ದರೂ ತವರು ಮನೆಗೆ ಹೋಗಿ ಮಹಿಳೆಯರು ತಾಯಿಗೆ ಸೀರೆ ಕೊಟ್ಟು ಬರುತ್ತಿದ್ದಾರೆ..

ಸೀರೆಯನ್ನು ಖರೀದಿಸುತ್ತಿರುವ ಮಹಿಳೆಯರು

ಸೀರೆಯನ್ನು ನೋಡುತ್ತಿರುವ ಮಹಿಳೆಯರು

ತಾಯಿ ಹಣೆಗೆ ಕುಂಕುಮ ಇಡುತ್ತಿರುವ ಮಗಳು

ದೂರದ ಊರು, ಬೇರೆ ಜಿಲ್ಲೆಯಲ್ಲಿ ತಾಯಿ ಇದ್ದರೂ ಅಲ್ಲಿಗೆ ಹೋಗಿ ಸೀರೆ ಕೊಟ್ಟು ಬರುತ್ತಿದ್ದಾರೆ. ಈ ಕಾರಣಕ್ಕಾಗಿ ನಗರದ ಬಟ್ಟೆ ಅಂಗಡಿಗಳಲ್ಲಿ ಕಳೆದ ಒಂದು ವಾರದಿಂದಲೂ ಸೀರೆ ಖರೀದಿ ವ್ಯಾಪಾರ ಜೋರಾಗಿ ನಡೆಯುತ್ತಿದೆ.

ಕೊರೊನಾ ಹಾಗೂ ಲಾಕ್ಡೌನ್ ನಂತರ ಬಟ್ಟೆ ಅಂಗಡಿಗಳು ವ್ಯಾಪಾರ ಇಲ್ಲದೇ ಸಂಕಷ್ಟದ ಸ್ಥಿತಿಯಲ್ಲಿದ್ದವು. ಆದರೆ ಈಗ ಗ್ರಾಮೀಣ ಪ್ರದೇಶದಲ್ಲಿ ಹಬ್ಬಿರುವ ಸೀರೆ ಕೊಡುವ ವದಂತಿಯಿಂದಾಗಿ ಭರ್ಜರಿಯಾಗಿ ಸೀರೆ ವ್ಯಾಪಾರ ನಡೆಯುತ್ತಿದೆ.

ವಿವಿಧ ಬಗೆಯ ಸೀರೆಗಳು

ಇದನ್ನೂ ಓದಿ

ನೋಟ್ ಬ್ಯಾನ್ ವದಂತಿಗೆ RBI ಸ್ಪಷ್ಟನೆೆ.. ದೇಶದಲ್ಲಿ ಸದ್ಯಕ್ಕೆ ಯಾವುದೇ ನೋಟ್​ ಬ್ಯಾನ್​ ಖಂಡಿತ ಆಗಲ್ಲ!

ಆಸ್ತಿ ವಿವಾದ, ಸಾಲಬಾಧೆ: ಬೆಂಗಳೂರಿನ ತಾಯಿ-ಮಗಳು ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!