Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮಂದಿರಿಗೆ ಹೆಣ್ಣುಮಕ್ಕಳು ಸೀರೆ ಖರೀದಿಸಿ ಕೊಡಬೇಕು.. ಬಳ್ಳಾರಿಯಲ್ಲಿ ಹರಡಿದೆ ಸಖತ್​ ವದಂತಿ

ಗಣಿ ನಾಡು ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ ಮಹಿಳೆಯರು ಸೀರೆ ಖರೀದಿಗೆ ಮುಗಿ ಬಿದ್ದಿರುವುದೇ ಕಾಣುತ್ತಿದೆ. ತಾಯಿಗೆ ಸೀರೆ ಕೊಡಿಸದಿದ್ದರೆ ಕೆಟ್ಟದಾಗುತ್ತದೆ ಎನ್ನುವ ವದಂತಿ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದೆ. ಜೊತೆಗೆ ಇಂತಹ ವದಂತಿ ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬಿದ್ದೆ ತಡ ಮಹಿಳೆಯರು ತಮ್ಮ ತಾಯಿಗೆ ಸೀರೆ ಕೊಡಿಸಲು ಮುಂದಾಗಿದ್ದಾರೆ.

ಅಮ್ಮಂದಿರಿಗೆ ಹೆಣ್ಣುಮಕ್ಕಳು ಸೀರೆ ಖರೀದಿಸಿ ಕೊಡಬೇಕು.. ಬಳ್ಳಾರಿಯಲ್ಲಿ ಹರಡಿದೆ ಸಖತ್​ ವದಂತಿ
ತಾಯಿಗೆ ಆರತಿ ಬೆಳಗಿ ಸೀರೆ ಕೊಡುತ್ತಿರುವ ಮಗಳು
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Mar 03, 2021 | 1:34 PM

ಬಳ್ಳಾರಿ: ಜನ ಮರಳೋ ಜಾತ್ರೆ ಮರಳೋ ಗೊತ್ತಿಲ್ಲ. ನಾವೆಲ್ಲಾ ಎಷ್ಟೇ ಆಧುನಿಕವಾಗಿ ಮುಂದುವರೆದಿದ್ದರೂ ನಮ್ಮ ಜನರು ಮಾತ್ರ ವದಂತಿಗಳಿಗೆ ಬೇಗ ಮಾರು ಹೋಗುತ್ತಾರೆ. ಈಗ ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಈಗ ಗಣಿ ನಾಡಿನಲ್ಲಿ ಹಬ್ಬಿದೆ. ಸೀರೆ ಕೊಡದಿದ್ದರೆ ಕೇಡಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಮಹಿಳೆಯರು ತಾಯಿಗೆ ಸೀರೆ ಕೊಡಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

ಗಣಿ ನಾಡು ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ ಮಹಿಳೆಯರು ಸೀರೆ ಖರೀದಿಗೆ ಮುಗಿ ಬಿದ್ದಿರುವುದೇ ಕಾಣುತ್ತಿದೆ. ತಾಯಿಗೆ ಸೀರೆ ಕೊಡಿಸದಿದ್ದರೆ ಕೆಟ್ಟದಾಗುತ್ತದೆ ಎನ್ನುವ ವದಂತಿ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದೆ. ಜೊತೆಗೆ ಇಂತಹ ವದಂತಿ ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬಿದ್ದೇ ತಡ.. ಮಹಿಳೆಯರು ತಮ್ಮ ತಾಯಿಗೆ ಸೀರೆ ಕೊಡಿಸಲು ಮುಂದಾಗಿದ್ದಾರೆ. ಕೆಲವರು ಸೀರೆ ಕೊಡಿಸದಿದ್ದರೆ ಏನಾದರೂ ಕೇಡಾಗಬಹುದು ಎನ್ನುವ ಭಯದಿಂದಲೂ ಸೀರೆ ಕೊಡಿಸಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

ಬೆಳ್ಳಿ ಕಡಗ ವದಂತಿ ಈ ಹಿಂದೆಯೂ ಜನರು ಒಬ್ಬನೇ ಮಗನಿದ್ದರೆ ಅವರಿಗೆ ಬೆಳ್ಳಿ ಕಡಗ ಕೊಡಬೇಕು ಎನ್ನುವ ವದಂತಿ ಹಬ್ಬಿದಾಗ ಕೂಡ ಬೆಳ್ಳಿ ಕಡಗ ನೀಡಿದ್ದರು. ಈಗ ಮಗಳು ತಾಯಿಗೆ ಸೀರೆ ಕೊಡಬೇಕು ಎನ್ನುವ ವದಂತಿ ಹಬ್ಬಿದೆ. ಹೀಗಾಗಿ ಗಂಡನ ಮನೆಯಲ್ಲಿದ್ದರೂ ತವರು ಮನೆಗೆ ಹೋಗಿ ಮಹಿಳೆಯರು ತಾಯಿಗೆ ಸೀರೆ ಕೊಟ್ಟು ಬರುತ್ತಿದ್ದಾರೆ..

ಸೀರೆಯನ್ನು ಖರೀದಿಸುತ್ತಿರುವ ಮಹಿಳೆಯರು

ಸೀರೆಯನ್ನು ನೋಡುತ್ತಿರುವ ಮಹಿಳೆಯರು

ತಾಯಿ ಹಣೆಗೆ ಕುಂಕುಮ ಇಡುತ್ತಿರುವ ಮಗಳು

ದೂರದ ಊರು, ಬೇರೆ ಜಿಲ್ಲೆಯಲ್ಲಿ ತಾಯಿ ಇದ್ದರೂ ಅಲ್ಲಿಗೆ ಹೋಗಿ ಸೀರೆ ಕೊಟ್ಟು ಬರುತ್ತಿದ್ದಾರೆ. ಈ ಕಾರಣಕ್ಕಾಗಿ ನಗರದ ಬಟ್ಟೆ ಅಂಗಡಿಗಳಲ್ಲಿ ಕಳೆದ ಒಂದು ವಾರದಿಂದಲೂ ಸೀರೆ ಖರೀದಿ ವ್ಯಾಪಾರ ಜೋರಾಗಿ ನಡೆಯುತ್ತಿದೆ.

ಕೊರೊನಾ ಹಾಗೂ ಲಾಕ್ಡೌನ್ ನಂತರ ಬಟ್ಟೆ ಅಂಗಡಿಗಳು ವ್ಯಾಪಾರ ಇಲ್ಲದೇ ಸಂಕಷ್ಟದ ಸ್ಥಿತಿಯಲ್ಲಿದ್ದವು. ಆದರೆ ಈಗ ಗ್ರಾಮೀಣ ಪ್ರದೇಶದಲ್ಲಿ ಹಬ್ಬಿರುವ ಸೀರೆ ಕೊಡುವ ವದಂತಿಯಿಂದಾಗಿ ಭರ್ಜರಿಯಾಗಿ ಸೀರೆ ವ್ಯಾಪಾರ ನಡೆಯುತ್ತಿದೆ.

ವಿವಿಧ ಬಗೆಯ ಸೀರೆಗಳು

ಇದನ್ನೂ ಓದಿ

ನೋಟ್ ಬ್ಯಾನ್ ವದಂತಿಗೆ RBI ಸ್ಪಷ್ಟನೆೆ.. ದೇಶದಲ್ಲಿ ಸದ್ಯಕ್ಕೆ ಯಾವುದೇ ನೋಟ್​ ಬ್ಯಾನ್​ ಖಂಡಿತ ಆಗಲ್ಲ!

ಆಸ್ತಿ ವಿವಾದ, ಸಾಲಬಾಧೆ: ಬೆಂಗಳೂರಿನ ತಾಯಿ-ಮಗಳು ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್