AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ವಶಕ್ಕೆ; ಇತರೆ ಕ್ರೈಂ ಸುದ್ದಿಗಳು

ಸರಕು ಸಾಗಣೆ ರೂಪದಲ್ಲಿ ಪ್ಯಾಕ್ ಮಾಡಿ, 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು ಪ್ಯಾಕ್ಡ್​​ ಪಾರ್ಸಲ್ ಅನ್ನು ತಡೆಹಿಡಿದು, ಪರಿಶೀಲಿಸಿದಾಗ ಅಕ್ರಮ ಸಾಗಣೆ ಪತ್ತೆಯಾಗಿದೆ.

ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ವಶಕ್ಕೆ; ಇತರೆ ಕ್ರೈಂ ಸುದ್ದಿಗಳು
ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ವಶಕ್ಕೆ
TV9 Web
| Edited By: |

Updated on:Jul 30, 2021 | 9:14 AM

Share

ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಪ್ಯಾಕ್​ ಆಗಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನವನ್ನು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ (ಕೆಐಎಬಿ) ಕಾರ್ಗೋ ಟರ್ಮಿನಲ್‌ನಲ್ಲಿ ರಕ್ತ ಚಂದನ ಜಪ್ತಿ ಮಾಡಲಾಗಿದೆ.

ಸರಕು ಸಾಗಣೆ ರೂಪದಲ್ಲಿ ಪ್ಯಾಕ್ ಮಾಡಿ, 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು ಪ್ಯಾಕ್ಡ್​​ ಪಾರ್ಸಲ್ ಅನ್ನು ತಡೆಹಿಡಿದು, ಪರಿಶೀಲಿಸಿದಾಗ ಅಕ್ರಮ ಸಾಗಣೆ ಪತ್ತೆಯಾಗಿದೆ. ತಕ್ಷಣ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಅಷ್ಟೂ ರಕ್ತ ಚಂದನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಜಿಮ್ ಮಣಿ ಹತ್ಯೆ ಪ್ರಕರಣ; ಇನ್ನಿಬ್ಬರು ಆರೋಪಿಗಳ ಬಂಧನ ಜಿಮ್ ಮಣಿ ಹತ್ಯೆ ಪ್ರಕರಣದಲ್ಲಿ ವಿಲ್ಸನ್ ಗಾರ್ಡನ್ ನಾಗ ಮತ್ತು ಡಬಲ್ ಮೀಟರ್ ಮೋಹನ್‌ನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. 2020ರ ಜೂನ್‌ನಲ್ಲಿ ಜಿಮ್ ಮಣಿ ಹತ್ಯೆಯಾಗಿತ್ತು. ಪ್ರಕರಣ ಸಂಬಂಧ ಪೊಲೀಸರು 14 ಜನರನ್ನು ಬಂಧಿಸಿದ್ದರು.

FIRನಲ್ಲಿ ನಾಗ ಮತ್ತು ಮೋಹನ್ ಹೆಸರು ಇದ್ದರೂ ಬಂಧಿಸಿರಲಿಲ್ಲ. ಅಂದಿನ ತನಿಖಾಧಿಕಾರಿ ಇಬ್ಬರನ್ನೂ ಅರೆಸ್ಟ್ ಮಾಡದೆ ಬಿಟ್ಟಿದ್ದರು. ಮಾಹಿತಿ ಅನ್ವಯ ಕೇಸ್ ರೀ ಓಪನ್ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ತನಿಖೆಗೆ ಆದೇಶಿಸಿದ್ದರು. ಅನ್ನಪೂರ್ಣೇಶ್ವರಿ ನಗರ ಇನ್ಸ್‌ಪೆಕ್ಟರ್‌ ಲೋಹಿತ್‌ ತನಿಖೆಗೆ ಆದೇಶ ನೀಡಲಾಗಿತ್ತು. ತನಿಖೆ ವೇಳೆ ನಾಗ, ಮೋಹನ್ ಕೈವಾಡ ಇರುವುದು ಪತ್ತೆಯಾಗಿತ್ತು. ಹೀಗಾಗಿ ಇಬ್ಬರನ್ನೂ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿ ಠಾಣೆಯ ಬಳಿ ಹರೀಶ್ ಕೊಲೆ ಪ್ರಕರಣ: ಬಾಣಸವಾಡಿ ಠಾಣೆಯ ಬಳಿ ಹರೀಶ್ ಕೊಲೆ ಪ್ರಕರಣದಲ್ಲಿ ಐವರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಕ್ಷಿತ್, ಅವಿನಾಶ್, ಸುಭಾಷ್, ಇಂದ್ರಜಿತ್, ನೆಲ್ಸನ್ ಬೆಂಗಳೂರಿನ ಬಾಣಸವಾಡಿ ಪೊಲೀಸರಿಗೆ ಸೆರೆ ಸಿಕ್ಕವರು.

ಹತ್ಯೆಗೀಡಾದ ಹರೀಶ್ ರಕ್ಷಿತ್‌ಗೆ ಕೊಲೆ ಬೆದರಿಕೆ ಹಾಕಿದ್ದ. ಇದೇ ಕೋಪದಲ್ಲಿ ಗ್ಯಾಂಗ್ ಕಟ್ಟಿಕೊಂಡು ಹರೀಶ್ ಹತ್ಯೆ ನಡೆದಿದೆ ಎನ್ನಲಾಗಿದೆ. ಪೊಲೀಸ್ ಠಾಣೆಯಿಂದ ಮನೆಗೆ ಹೋಗುವಾಗ ಹರೀಶ್ ಹತ್ಯೆಗೈದಿದ್ದರು.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

(rupees 6 crore worth red sandalwood confiscated at kempegowda international airport bangalore)

Published On - 9:02 am, Fri, 30 July 21

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?