Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ರುಪ್ಸಾ

ವಿದ್ಯಾಗಮ ಅಥವಾ ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಒತ್ತಾಯಿಸಿದ ರುಪ್ಸಾ ಸಂಘಟನೆ, ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ರುಪ್ಸಾ
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on: Jun 30, 2021 | 1:11 PM

ಬೆಂಗಳೂರು: ಕೊರೊನಾ ಕಾರಣ ಬಂದ್ ಆಗಿದ್ದ ಶಾಲೆಗಳನ್ನು ಪುನಾರಂಭಿಸುವಂತೆ ಸರ್ಕಾರಕ್ಕೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಒತ್ತಾಯಿಸಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಹಾಲನೂರು ಎಸ್.ಲೇಪಾಕ್ಷಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದ ಶೇ.80 ಬಜೆಟ್ ಶಾಲೆಗಳು, 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಾಳೆಯಿಂದ ಆನ್​ಲೈನ್ ಮೂಲಕ ತರಗತಿಗಳು ಶುರುವಾಗುತ್ತಿದೆ. ಇದು ಒಳ್ಳೆಯ ವಿಚಾರ. ಆದರೆ ಶಾಲೆ ಆರಂಭದ ಬಗ್ಗೆ ಸರ್ಕಾರ ಮನಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾಗಮ ಅಥವಾ ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಒತ್ತಾಯಿಸಿದ ರುಪ್ಸಾ ಸಂಘಟನೆ, ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ರುಪ್ಸಾ ಸಂಘಟನೆ ಬೇಡಿಕೆಗಳೇನು? * 2021-22 ಸಾಲಿನ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉನ್ನತೀಕರಣ ವಿಷಯವು ತುಂಬಾ ನಿಧಾನಗತಿಯಲ್ಲಿ ಅನುಸರಿಸುತ್ತಿದೆ. ಇದರಿಂದ ಆರ್ಟಿಇ ಮಕ್ಕಳ ಮುಂದಿನ ತರಗತಿಗೆ ಅನ್ಯಾಯವಾಗುತ್ತಿದೆ. ಆರ್ಟಿಇ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರುಪ್ಸಾ ಒತ್ತಾಯಿದೆ.

* 2019-20 ಮತ್ತು 2020-21ನೇ ಸಾಲಿನ ಆರ್ಟಿಇ ಹಣ ಇನ್ನು ಬಿಡುಗಡೆ ಆಗಿಲ್ಲ. ಆದ್ದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ತುಂಬಾ ನೋವನ್ನು ಅನುಭವಿಸುತ್ತಿವೆ. ಹೀಗಾಗಿ ಕೂಡಲೇ ಆರ್ಟಿಇ ಹಣ ಬಿಡುಗಡೆ ಮಾಡಬೇಕು. ಖಾಸಗಿ ಶಾಲೆಗಳ ಶಿಕ್ಷಕರಿಗೂ ಘೋಷಿಸಿರುವ ಪ್ಯಾಕೇಜ್​ನ ತಕ್ಷಣ ಶಿಕ್ಷಕರಿಗೆ ಮುಟ್ಟಿಸಬೇಕೆಂದು ಒತ್ತಾಯಿಸಿದೆ.

ಈಗಾಗಲೇ ಸಂಘದ ಟೈಟಲ್ ವಿಚಾರವಾಗಿ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ನಕಲಿ ದಾಖಲೆ ಸೃಷ್ಟಿಸಿ ಹಾಲನೂರು ಲೇಪಾಕ್ಷಿ ರುಪ್ಸಾ ಸಂಘಟನೆ ಮಾಡಿದ್ದಾರೆ. ನಾನೇ ಅಧ್ಯಕ್ಷ ಅಂತ ಹೇಳಿಕೊಂಡಿದ್ದಾರೆ. ಸಂಘಟನೆಯ ಕಾರ್ಯಕಾರಿ ಸಮಿತಿಯಲ್ಲಿ 17 ಜನ ಇದ್ದಾರೆ. 17 ಜನರ ಅಭಿಪ್ರಾಯ ಪಡೆಯದೆ ಲೋಕೇಶ್ ತಾಳಿಕಟ್ಟೆ ಉಚ್ಛಾಟನೆ ಮಾಡಿದ್ದಾರೆ. ಲೇಪಾಕ್ಷಿ ಸ್ವಯಂ ಘೋಷಿತವಾಗಿ ಅಧ್ಯಕ್ಷ ಅಂತ ಹೇಳಿಕೊಂಡಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ ರುಪ್ಸಾ ಕರ್ನಾಟಕ ಸಂಘಟನೆಯ ಜಂಟಿ ಕಾರ್ಯದರ್ಶಿ ಕೊಟ್ರೇಶ್, ಅವರಲ್ಲಿ ಮೂರನೇ ಒಂದು ಭಾಗದಷ್ಟು ಬಹುಮತ ಇಲ್ಲ. ಲೇಪಾಕ್ಷಿ ಸಂಘದ ಸದಸ್ಯತ್ವವನ್ನೇ ಪಡೆದಿಲ್ಲ. ಹೀಗಾಗಿ ಸಂಘದ ಹೆಸರು ಬಳಕೆಯ ವಿಚಾರ ನ್ಯಾಯಾಲಯದಲ್ಲಿದೆ ಎಂದು ಅಭಿಪ್ರಾಯಟಪಟ್ಟರು.

ಇದನ್ನೂ ಓದಿ

School Reopening: ಶಿಕ್ಷಣದ ಜತೆ ಮಕ್ಕಳ ಜೀವವೂ ಮುಖ್ಯ, ಶಾಲೆ ಆರಂಭಕ್ಕೆ ಆತುರ ಬೇಡ – ಆರೋಗ್ಯ ಸಚಿವ ಡಾ.ಸುಧಾಕರ್

ಟಿವಿ9 ಕಾರ್ಯಾಚರಣೆಯಲ್ಲಿ ಕರ್ಮಕಾಂಡ ಬಯಲು; ಆರೋಗ್ಯ ಸಚಿವರೇ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆ ಕಡೆ ಕಣ್ಣಿಟ್ಟು ನೋಡಿ

(RUPSA organization has urged the government to start school)

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ