AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ರುಪ್ಸಾ

ವಿದ್ಯಾಗಮ ಅಥವಾ ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಒತ್ತಾಯಿಸಿದ ರುಪ್ಸಾ ಸಂಘಟನೆ, ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ರುಪ್ಸಾ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 30, 2021 | 1:11 PM

Share

ಬೆಂಗಳೂರು: ಕೊರೊನಾ ಕಾರಣ ಬಂದ್ ಆಗಿದ್ದ ಶಾಲೆಗಳನ್ನು ಪುನಾರಂಭಿಸುವಂತೆ ಸರ್ಕಾರಕ್ಕೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಒತ್ತಾಯಿಸಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಹಾಲನೂರು ಎಸ್.ಲೇಪಾಕ್ಷಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದ ಶೇ.80 ಬಜೆಟ್ ಶಾಲೆಗಳು, 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಾಳೆಯಿಂದ ಆನ್​ಲೈನ್ ಮೂಲಕ ತರಗತಿಗಳು ಶುರುವಾಗುತ್ತಿದೆ. ಇದು ಒಳ್ಳೆಯ ವಿಚಾರ. ಆದರೆ ಶಾಲೆ ಆರಂಭದ ಬಗ್ಗೆ ಸರ್ಕಾರ ಮನಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾಗಮ ಅಥವಾ ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಒತ್ತಾಯಿಸಿದ ರುಪ್ಸಾ ಸಂಘಟನೆ, ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ರುಪ್ಸಾ ಸಂಘಟನೆ ಬೇಡಿಕೆಗಳೇನು? * 2021-22 ಸಾಲಿನ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉನ್ನತೀಕರಣ ವಿಷಯವು ತುಂಬಾ ನಿಧಾನಗತಿಯಲ್ಲಿ ಅನುಸರಿಸುತ್ತಿದೆ. ಇದರಿಂದ ಆರ್ಟಿಇ ಮಕ್ಕಳ ಮುಂದಿನ ತರಗತಿಗೆ ಅನ್ಯಾಯವಾಗುತ್ತಿದೆ. ಆರ್ಟಿಇ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರುಪ್ಸಾ ಒತ್ತಾಯಿದೆ.

* 2019-20 ಮತ್ತು 2020-21ನೇ ಸಾಲಿನ ಆರ್ಟಿಇ ಹಣ ಇನ್ನು ಬಿಡುಗಡೆ ಆಗಿಲ್ಲ. ಆದ್ದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ತುಂಬಾ ನೋವನ್ನು ಅನುಭವಿಸುತ್ತಿವೆ. ಹೀಗಾಗಿ ಕೂಡಲೇ ಆರ್ಟಿಇ ಹಣ ಬಿಡುಗಡೆ ಮಾಡಬೇಕು. ಖಾಸಗಿ ಶಾಲೆಗಳ ಶಿಕ್ಷಕರಿಗೂ ಘೋಷಿಸಿರುವ ಪ್ಯಾಕೇಜ್​ನ ತಕ್ಷಣ ಶಿಕ್ಷಕರಿಗೆ ಮುಟ್ಟಿಸಬೇಕೆಂದು ಒತ್ತಾಯಿಸಿದೆ.

ಈಗಾಗಲೇ ಸಂಘದ ಟೈಟಲ್ ವಿಚಾರವಾಗಿ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ನಕಲಿ ದಾಖಲೆ ಸೃಷ್ಟಿಸಿ ಹಾಲನೂರು ಲೇಪಾಕ್ಷಿ ರುಪ್ಸಾ ಸಂಘಟನೆ ಮಾಡಿದ್ದಾರೆ. ನಾನೇ ಅಧ್ಯಕ್ಷ ಅಂತ ಹೇಳಿಕೊಂಡಿದ್ದಾರೆ. ಸಂಘಟನೆಯ ಕಾರ್ಯಕಾರಿ ಸಮಿತಿಯಲ್ಲಿ 17 ಜನ ಇದ್ದಾರೆ. 17 ಜನರ ಅಭಿಪ್ರಾಯ ಪಡೆಯದೆ ಲೋಕೇಶ್ ತಾಳಿಕಟ್ಟೆ ಉಚ್ಛಾಟನೆ ಮಾಡಿದ್ದಾರೆ. ಲೇಪಾಕ್ಷಿ ಸ್ವಯಂ ಘೋಷಿತವಾಗಿ ಅಧ್ಯಕ್ಷ ಅಂತ ಹೇಳಿಕೊಂಡಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ ರುಪ್ಸಾ ಕರ್ನಾಟಕ ಸಂಘಟನೆಯ ಜಂಟಿ ಕಾರ್ಯದರ್ಶಿ ಕೊಟ್ರೇಶ್, ಅವರಲ್ಲಿ ಮೂರನೇ ಒಂದು ಭಾಗದಷ್ಟು ಬಹುಮತ ಇಲ್ಲ. ಲೇಪಾಕ್ಷಿ ಸಂಘದ ಸದಸ್ಯತ್ವವನ್ನೇ ಪಡೆದಿಲ್ಲ. ಹೀಗಾಗಿ ಸಂಘದ ಹೆಸರು ಬಳಕೆಯ ವಿಚಾರ ನ್ಯಾಯಾಲಯದಲ್ಲಿದೆ ಎಂದು ಅಭಿಪ್ರಾಯಟಪಟ್ಟರು.

ಇದನ್ನೂ ಓದಿ

School Reopening: ಶಿಕ್ಷಣದ ಜತೆ ಮಕ್ಕಳ ಜೀವವೂ ಮುಖ್ಯ, ಶಾಲೆ ಆರಂಭಕ್ಕೆ ಆತುರ ಬೇಡ – ಆರೋಗ್ಯ ಸಚಿವ ಡಾ.ಸುಧಾಕರ್

ಟಿವಿ9 ಕಾರ್ಯಾಚರಣೆಯಲ್ಲಿ ಕರ್ಮಕಾಂಡ ಬಯಲು; ಆರೋಗ್ಯ ಸಚಿವರೇ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆ ಕಡೆ ಕಣ್ಣಿಟ್ಟು ನೋಡಿ

(RUPSA organization has urged the government to start school)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್