AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ನಿಗದಿ ಮಾಡಿಲ್ಲ. ಜೊತೆಗೆ 2021-22ನೇ ಸಾಲಿನ ಅರ್ಧವಾರ್ಷಿಕ ಪರೀಕ್ಷೆ ಕೂಡ ಇನ್ನೂ ನಡೆಸಿಲ್ಲ.

SSLC ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
TV9 Web
| Edited By: sandhya thejappa|

Updated on: Jan 02, 2022 | 10:45 AM

Share

ಬೆಂಗಳೂರು: ಶಾಲೆ ಬಾಗಿಲು ತೆರೆದ ಬೆನ್ನಲ್ಲೆ ಕೊರೊನಾ (Coronavirus) ರೂಪಾಂತರಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದರೆ ಮತ್ತೆ ಲಾಕ್​ಡೌನ್​ ಕೂಡಾ ಮಾಡಬಹುದು. ಈ ನಡುವೆ ಎಸ್ಎಸ್ಎಲ್​ಸಿ (SSLC) ಪರೀಕ್ಷೆಗೆ ಒಮಿಕ್ರಾನ್ ಕಂಟಕವಾಗುತ್ತಾ ಎಂಬ ಆತಂಕ ಶುರುವಾಗಿದೆ. ಶಿಕ್ಷಣ ಇಲಾಖೆ ಕೂಡಾ ಎಸ್ಎಲ್ಎಲ್​ಸಿ ವೇಳಾಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಬೇಕೆಂದು ಆಗ್ರಹಿಸಿ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ನಿಗದಿ ಮಾಡಿಲ್ಲ. ಜೊತೆಗೆ 2021-22ನೇ ಸಾಲಿನ ಅರ್ಧವಾರ್ಷಿಕ ಪರೀಕ್ಷೆ ಕೂಡ ಇನ್ನೂ ನಡೆಸಿಲ್ಲ. ಕನಿಷ್ಟ 3 ತಿಂಗಳಿಗೂ ಮುನ್ನ ಪರೀಕ್ಷಾ ದಿನಾಂಕ ಪ್ರಕಟಿಸಬೇಕು. ಆದರೆ ಶಿಕ್ಷಣ ಇಲಾಖೆ ಇನ್ನೂ ಪರೀಕ್ಷೆ ದಿನಾಂಕ ನಿಗದಿಗೊಳಿಸಿಲ್ಲ ಅಂತ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದರು.

ಪ್ರಶ್ನೆ ಪತ್ರಿಕೆ ಪ್ಯಾಟರ್ನ್ ಬಗ್ಗೆ ತಿಳಿಸಬೇಕು. ಆದರೆ ಇದುವರೆಗೂ ಪರೀಕ್ಷಾ ದಿನಾಂಕ ಪ್ರಕಟಿಸಿಲ್ಲ. ಇಲಾಖೆಗೆ ಮಕ್ಕಳ ಭವಿಷ್ಯದ ಚಿಂತೆ ಇಲ್ಲ. ಅಧಿಕಾರಿಗಳಿಗೆ ಹಣ ಮಾಡಿಕೊಳ್ಳುವ ಚಿಂತೆ. ಶಾಲೆಗಳ ಮಾನ್ಯತೆ ನವೀಕರಣ ಮಾಡುವ ವಿಚಾರದಲ್ಲಿ ಅಧಿಕಾರಿಗಳು ತಲ್ಲೀನರಾಗಿದ್ದಾರೆ. ಹೀಗಾಗಿ ಇಲಾಖೆ ಇದುವರೆಗೂ ಪರೀಕ್ಷಾ ದಿನಾಂಕ ಪ್ರಕಟಿಸಿಲ್ಲ. ಕೂಡಲೇ ಶಿಕ್ಷಣ ಇಲಾಖೆ ಪರೀಕ್ಷೆ ಕುರಿತು ದಿನಾಂಕ ಪ್ರಕಟಮಾಡಬೇಕು. ಮಕ್ಕಳ ಭವಿಷ್ಯದ ಚಿಂತನೆ ಕಡೆ ಇಲಾಖೆ ಗಮನ ಕೊಡಲಿ ಅಂತ ಲೋಕೇಶ್ ತಾಳಿಕಟ್ಟೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ

Vicky kaushal: ಇಂದೋರ್​ನ ಗಲ್ಲಿಗಳಲ್ಲಿ ಸಾರಾ ಜತೆ ಸುತ್ತಾಡಿದ ವಿಕ್ಕಿ ಕೌಶಲ್​ಗೆ ಎದುರಾಯ್ತು ಸಂಕಷ್ಟ! ಏನಿದು ಪ್ರಕರಣ?

ಹಲವು ರಾಜ್ಯಗಳಲ್ಲಿ ಕೊರೊನಾ ನಿಯಂತ್ರಣ ಕಠಿಣ ನಿರ್ಬಂಧ; ಲಸಿಕೆ ಹಾಕಿಲ್ಲದಿದ್ದರೆ, ಪ್ರವೇಶವೂ ಇಲ್ಲ ಎನ್ನುತ್ತಿದ್ದಾರೆ ಅಧಿಕಾರಿಗಳು

Follow Us
Web contact
Web contact

TV9 Kannada

Read More
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ