AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ನಿಗದಿ ಮಾಡಿಲ್ಲ. ಜೊತೆಗೆ 2021-22ನೇ ಸಾಲಿನ ಅರ್ಧವಾರ್ಷಿಕ ಪರೀಕ್ಷೆ ಕೂಡ ಇನ್ನೂ ನಡೆಸಿಲ್ಲ.

SSLC ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
TV9 Web
| Edited By: |

Updated on: Jan 02, 2022 | 10:45 AM

Share

ಬೆಂಗಳೂರು: ಶಾಲೆ ಬಾಗಿಲು ತೆರೆದ ಬೆನ್ನಲ್ಲೆ ಕೊರೊನಾ (Coronavirus) ರೂಪಾಂತರಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದರೆ ಮತ್ತೆ ಲಾಕ್​ಡೌನ್​ ಕೂಡಾ ಮಾಡಬಹುದು. ಈ ನಡುವೆ ಎಸ್ಎಸ್ಎಲ್​ಸಿ (SSLC) ಪರೀಕ್ಷೆಗೆ ಒಮಿಕ್ರಾನ್ ಕಂಟಕವಾಗುತ್ತಾ ಎಂಬ ಆತಂಕ ಶುರುವಾಗಿದೆ. ಶಿಕ್ಷಣ ಇಲಾಖೆ ಕೂಡಾ ಎಸ್ಎಲ್ಎಲ್​ಸಿ ವೇಳಾಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಬೇಕೆಂದು ಆಗ್ರಹಿಸಿ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ನಿಗದಿ ಮಾಡಿಲ್ಲ. ಜೊತೆಗೆ 2021-22ನೇ ಸಾಲಿನ ಅರ್ಧವಾರ್ಷಿಕ ಪರೀಕ್ಷೆ ಕೂಡ ಇನ್ನೂ ನಡೆಸಿಲ್ಲ. ಕನಿಷ್ಟ 3 ತಿಂಗಳಿಗೂ ಮುನ್ನ ಪರೀಕ್ಷಾ ದಿನಾಂಕ ಪ್ರಕಟಿಸಬೇಕು. ಆದರೆ ಶಿಕ್ಷಣ ಇಲಾಖೆ ಇನ್ನೂ ಪರೀಕ್ಷೆ ದಿನಾಂಕ ನಿಗದಿಗೊಳಿಸಿಲ್ಲ ಅಂತ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದರು.

ಪ್ರಶ್ನೆ ಪತ್ರಿಕೆ ಪ್ಯಾಟರ್ನ್ ಬಗ್ಗೆ ತಿಳಿಸಬೇಕು. ಆದರೆ ಇದುವರೆಗೂ ಪರೀಕ್ಷಾ ದಿನಾಂಕ ಪ್ರಕಟಿಸಿಲ್ಲ. ಇಲಾಖೆಗೆ ಮಕ್ಕಳ ಭವಿಷ್ಯದ ಚಿಂತೆ ಇಲ್ಲ. ಅಧಿಕಾರಿಗಳಿಗೆ ಹಣ ಮಾಡಿಕೊಳ್ಳುವ ಚಿಂತೆ. ಶಾಲೆಗಳ ಮಾನ್ಯತೆ ನವೀಕರಣ ಮಾಡುವ ವಿಚಾರದಲ್ಲಿ ಅಧಿಕಾರಿಗಳು ತಲ್ಲೀನರಾಗಿದ್ದಾರೆ. ಹೀಗಾಗಿ ಇಲಾಖೆ ಇದುವರೆಗೂ ಪರೀಕ್ಷಾ ದಿನಾಂಕ ಪ್ರಕಟಿಸಿಲ್ಲ. ಕೂಡಲೇ ಶಿಕ್ಷಣ ಇಲಾಖೆ ಪರೀಕ್ಷೆ ಕುರಿತು ದಿನಾಂಕ ಪ್ರಕಟಮಾಡಬೇಕು. ಮಕ್ಕಳ ಭವಿಷ್ಯದ ಚಿಂತನೆ ಕಡೆ ಇಲಾಖೆ ಗಮನ ಕೊಡಲಿ ಅಂತ ಲೋಕೇಶ್ ತಾಳಿಕಟ್ಟೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ

Vicky kaushal: ಇಂದೋರ್​ನ ಗಲ್ಲಿಗಳಲ್ಲಿ ಸಾರಾ ಜತೆ ಸುತ್ತಾಡಿದ ವಿಕ್ಕಿ ಕೌಶಲ್​ಗೆ ಎದುರಾಯ್ತು ಸಂಕಷ್ಟ! ಏನಿದು ಪ್ರಕರಣ?

ಹಲವು ರಾಜ್ಯಗಳಲ್ಲಿ ಕೊರೊನಾ ನಿಯಂತ್ರಣ ಕಠಿಣ ನಿರ್ಬಂಧ; ಲಸಿಕೆ ಹಾಕಿಲ್ಲದಿದ್ದರೆ, ಪ್ರವೇಶವೂ ಇಲ್ಲ ಎನ್ನುತ್ತಿದ್ದಾರೆ ಅಧಿಕಾರಿಗಳು

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ