AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 20ರಿಂದ ಆನ್​ಲೈನ್ ಕ್ಲಾಸ್ ಕೂಡ ಬಂದ್ ಆಗುತ್ತೆ.. ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ

ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಕಾರಣ ಡಿ.20ರಿಂದ ಶಾಲೆಗಳನ್ನು ಮುಚ್ಚಿ ಆನ್​ಲೈನ್​ ಕ್ಲಾಸ್​ ಬಂದ್ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಮಂಡಳಿ(ರುಪ್ಸಾ) ನಿರ್ಧರಿಸಿದೆ.

ಡಿಸೆಂಬರ್ 20ರಿಂದ ಆನ್​ಲೈನ್ ಕ್ಲಾಸ್ ಕೂಡ ಬಂದ್ ಆಗುತ್ತೆ.. ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Dec 18, 2020 | 3:40 PM

Share

ಬೆಂಗಳೂರು: ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಡಿ. 20ರಿಂದ ಆನ್​ಲೈನ್ ಕ್ಲಾಸ್​ ಬಂದ್ ಮಾಡಲು ನಿರ್ಧರಿಸಲಾಗಿದ್ದು, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರುಪ್ಸಾ ಮುಂದಾಗಿದೆ.

 ಡಿಸೆಂಬರ್ 10ರವರೆಗೆ ಸರ್ಕಾರಕ್ಕೆ ಗಡುವು ಕೊರೊನಾ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಶಾಲೆಗಳನ್ನು ತೆರೆಯಲು ಸದ್ಯ ಈಗ ಸರ್ಕಾರ ಚಿಂತಿಸುತ್ತಿದೆ. ಈ ನಡುವೆ ಶಿಕ್ಷಣ ಸಂಸ್ಥೆಗಳು ಖಾಸಗಿ ಶಾಲೆಗಳನ್ನು ಮುಚ್ಚಲು ಮುಂದಾಗಿವೆ. ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಕಾರಣ ಡಿ. 20ರಿಂದ ಶಾಲೆಗಳನ್ನು ಮುಚ್ಚಿ ಆನ್​ಲೈನ್​ ಕ್ಲಾಸ್​ ಬಂದ್ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಮಂಡಳಿ (ರುಪ್ಸಾ) ನಿರ್ಧರಿಸಿದೆ. ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ರುಪ್ಸಾ ಅಧ್ಯಕ್ಷ ಲೋಕೇಶ್​ ತಾಳಿಕಟ್ಟೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಹಾಗೂ ಡಿಸೆಂಬರ್ 10ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ಆದರೆ ಯಾವುದೇ ಪ್ರಯೋಜನವಾಗದ ಕಾರಣ ಅಂತಿಮವಾಗಿ ಶಾಲೆ ಬಂದ್​ ಮಾಡಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಖಾಸಗಿ ಶಾಲೆಗಳನ್ನು ಮುಚ್ಚಿದ್ರೆ ಲಕ್ಷಾಂತರ ಮಕ್ಕಳಿಗೆ ಸಮಸ್ಯೆ ಉಂಟಾಗುತ್ತೆ. ಆದರೂ 10,000 ಖಾಸಗಿ ಶಾಲೆಗಳನ್ನು ಮುಚ್ಚಿ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ. ಸರ್ಕಾರ ಬೇಡಿಕೆಗಳನ್ನ ಈಡೇರಿಸುವವರೆಗೂ ಶಾಲೆ ತೆರೆಯಲ್ಲ. ಆನ್​ಲೈನ್​ ಕ್ಲಾಸ್​ ಬಂದ್ ಮಾಡುತ್ತೇವೆ ಎಂದು ರುಪ್ಸಾ ತಿಳಿಸಿದೆ. ಇನ್ನು ಡಿ. 20ರಂದು ರುಪ್ಸಾ ಪ್ರತಿನಿಧಿಗಳ ಸಭೆ ಬಳಿಕ ಈ ಬಗ್ಗೆ ಖಚಿತ ನಿರ್ಧಾರ ಪ್ರಕಟವಾಗುತ್ತೆ.

ಕೋವಿಡ್ ವೇಳೆ ಬಂದ್ ಆಗಲಿವೆಯಾ 10 ಸಾವಿರ ಖಾಸಗಿ ಶಾಲೆಗಳು?

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!