AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 20ರಿಂದ ಆನ್​ಲೈನ್ ಕ್ಲಾಸ್ ಕೂಡ ಬಂದ್ ಆಗುತ್ತೆ.. ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ

ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಕಾರಣ ಡಿ.20ರಿಂದ ಶಾಲೆಗಳನ್ನು ಮುಚ್ಚಿ ಆನ್​ಲೈನ್​ ಕ್ಲಾಸ್​ ಬಂದ್ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಮಂಡಳಿ(ರುಪ್ಸಾ) ನಿರ್ಧರಿಸಿದೆ.

ಡಿಸೆಂಬರ್ 20ರಿಂದ ಆನ್​ಲೈನ್ ಕ್ಲಾಸ್ ಕೂಡ ಬಂದ್ ಆಗುತ್ತೆ.. ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 18, 2020 | 3:40 PM

Share

ಬೆಂಗಳೂರು: ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಡಿ. 20ರಿಂದ ಆನ್​ಲೈನ್ ಕ್ಲಾಸ್​ ಬಂದ್ ಮಾಡಲು ನಿರ್ಧರಿಸಲಾಗಿದ್ದು, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರುಪ್ಸಾ ಮುಂದಾಗಿದೆ.

 ಡಿಸೆಂಬರ್ 10ರವರೆಗೆ ಸರ್ಕಾರಕ್ಕೆ ಗಡುವು ಕೊರೊನಾ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಶಾಲೆಗಳನ್ನು ತೆರೆಯಲು ಸದ್ಯ ಈಗ ಸರ್ಕಾರ ಚಿಂತಿಸುತ್ತಿದೆ. ಈ ನಡುವೆ ಶಿಕ್ಷಣ ಸಂಸ್ಥೆಗಳು ಖಾಸಗಿ ಶಾಲೆಗಳನ್ನು ಮುಚ್ಚಲು ಮುಂದಾಗಿವೆ. ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಕಾರಣ ಡಿ. 20ರಿಂದ ಶಾಲೆಗಳನ್ನು ಮುಚ್ಚಿ ಆನ್​ಲೈನ್​ ಕ್ಲಾಸ್​ ಬಂದ್ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಮಂಡಳಿ (ರುಪ್ಸಾ) ನಿರ್ಧರಿಸಿದೆ. ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ರುಪ್ಸಾ ಅಧ್ಯಕ್ಷ ಲೋಕೇಶ್​ ತಾಳಿಕಟ್ಟೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಹಾಗೂ ಡಿಸೆಂಬರ್ 10ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ಆದರೆ ಯಾವುದೇ ಪ್ರಯೋಜನವಾಗದ ಕಾರಣ ಅಂತಿಮವಾಗಿ ಶಾಲೆ ಬಂದ್​ ಮಾಡಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಖಾಸಗಿ ಶಾಲೆಗಳನ್ನು ಮುಚ್ಚಿದ್ರೆ ಲಕ್ಷಾಂತರ ಮಕ್ಕಳಿಗೆ ಸಮಸ್ಯೆ ಉಂಟಾಗುತ್ತೆ. ಆದರೂ 10,000 ಖಾಸಗಿ ಶಾಲೆಗಳನ್ನು ಮುಚ್ಚಿ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ. ಸರ್ಕಾರ ಬೇಡಿಕೆಗಳನ್ನ ಈಡೇರಿಸುವವರೆಗೂ ಶಾಲೆ ತೆರೆಯಲ್ಲ. ಆನ್​ಲೈನ್​ ಕ್ಲಾಸ್​ ಬಂದ್ ಮಾಡುತ್ತೇವೆ ಎಂದು ರುಪ್ಸಾ ತಿಳಿಸಿದೆ. ಇನ್ನು ಡಿ. 20ರಂದು ರುಪ್ಸಾ ಪ್ರತಿನಿಧಿಗಳ ಸಭೆ ಬಳಿಕ ಈ ಬಗ್ಗೆ ಖಚಿತ ನಿರ್ಧಾರ ಪ್ರಕಟವಾಗುತ್ತೆ.

ಕೋವಿಡ್ ವೇಳೆ ಬಂದ್ ಆಗಲಿವೆಯಾ 10 ಸಾವಿರ ಖಾಸಗಿ ಶಾಲೆಗಳು?

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್