AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಯ ಹತ್ಯೆಯಾಗಿದೆ, ಇದಕ್ಕೆ ಹೊಣೆ ಯಾರು? ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್​ ಗರಂ

Haveri medical student Naveen janagoudar: ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಶೆಲ್ ದಾಳಿಯಲ್ಲಿ ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿದ್ದಾನೆ. ಈ ಸುದ್ದಿ ನಾಡಿಗೆ ಶಿವರಾತ್ರಿಯ ದಿನ ಬರಸಿಡಿಲಿನಂತೆ ಅಪ್ಪಳಿಸಿದೆ. ವಿದ್ಯಾರ್ಥಿ ನವೀನನ ಸಾವಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಕಂಬನಿ ಮಿಡಿದಿದ್ದಾರೆ

ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಯ ಹತ್ಯೆಯಾಗಿದೆ, ಇದಕ್ಕೆ ಹೊಣೆ ಯಾರು? ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್​ ಗರಂ
ಡಿಕೆ ಶಿವಕುಮಾರ
TV9 Web
| Edited By: |

Updated on:Mar 01, 2022 | 6:55 PM

Share

ರಷ್ಯಾ ಮತ್ತು ಉಕ್ರೇನ್ ಪರಸ್ಪರ ಸಡ್ಡು ಹೊಡೆದು ಕಾದಾಡತೊಡಗಿವೆ (Russia Ukraine War). ಆದರೆ ಈ ಮಧ್ಯೆ ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿದ್ದಾನೆ. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾನೆ (Death of Haveri medical student Naveen janagoudar). ಈ ಸುದ್ದಿ ನಾಡಿಗೆ ಶಿವರಾತ್ರಿಯ ದಿನ ಬರಸಿಡಿಲಿನಂತೆ ಅಪ್ಪಳಿಸಿದೆ. ವಿದ್ಯಾರ್ಥಿ ನವೀನನ ಸಾವಿಗೆ ಕಂಬನಿ ಮಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK shivakumar) ಕರ್ನಾಟಕದ ಓರ್ವ ಪ್ರತಿಭಾವಂತ ವಿದ್ಯಾರ್ಥಿಯ ಹತ್ಯೆಯಾಗಿದೆ, ಇದಕ್ಕೆ ಹೊಣೆ ಯಾರು? ಎಂದು ಕೇಂದ್ರ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಉಕ್ರೇನ್​ನ ಖಾರ್ಕಿವ್‌ನಲ್ಲಿ ಕರ್ನಾಟಕದ ಓರ್ವ ಪ್ರತಿಭಾವಂತ ವಿದ್ಯಾರ್ಥಿಯ ಹತ್ಯೆಯಾಗಿದೆ ಎಂದು ಬೆಂಗಳೂರಿನಲ್ಲಿ ಮೇಕೆದಾಟು ಪಾದಯಾತ್ರೆ ವೇಳೆ ವಿಷಾದಿಸಿರುವ ಡಿ.ಕೆ. ಶಿವಕುಮಾರ್​, ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಉಕ್ರೇನ್​ನಲ್ಲಿರುವ ವಿದ್ಯಾರ್ಥಿಗಳ ಕರೆತರಲು ನಾಲಕ್ಕು ಸಚಿವರ ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರ ನೇಮಿಸಿರುವ ಆ ಸಚಿವರು ಏನು ಮಾಡುತ್ತಿದ್ದಾರೆ? ಭಾರತದ ವಿದೇಶಾಂಗ ವ್ಯಾವಹಾರಗಳ ಸಚಿವಾಲಯ ಏನಾಗಿದೆ? ಮೋದಿ ಎಲ್ಲರನ್ನೂ ಕರೆತರುತ್ತೇನೆ ಅಂದಿದ್ರು, ಈಗ ಏನಾಗಿದೆ? ವಿದ್ಯಾರ್ಥಿ ನವೀನ್ ಸಾವಿಗೆ ಯಾರು ಹೊಣೆ ಎಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನದೇ ಜಿಲ್ಲೆಯ ಕಂದನನ್ನು ಕಳೆದುಕೊಂಡೆ, ಅದೇ ಗ್ರಾಮದ ಮತ್ತೊಬ್ಬರಿಗೂ ಗಾಯವಾಗಿದೆ -ಸಿಎಂ ಬೊಮ್ಮಾಯಿ ಬೆಂಗಳೂರು: ರಷ್ಯಾ ಮತ್ತು ಉಕ್ರೇನ್(Russia Ukraine War) ನಡುವಿನ ಭೀಕರ ಕದನ ಮುಂದುವರೆದಿದೆ. ರಷ್ಯಾ ಸೇನೆಯ ರಾಕೆಟ್‌ ದಾಳಿಗೆ ಖಾರ್ಕಿವ್‌ನಲ್ಲಿ ಕರ್ನಾಟಕದ ಓರ್ವ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ (21) ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿ ನವೀನ್ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಭಾವುಕರಾಗಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಸಿಎಂ ಬೊಮ್ಮಾಯಿ ಭಾವುಕರಾಗಿದ್ದು ಅದೇ ಊರಿನ ಮತ್ತೋರ್ವ ವಿದ್ಯಾರ್ಥಿಗೆ ಗಾಯವಾಗಿದೆ ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ಸಾವಿನ ಬಗ್ಗೆ ಭಾವುಕರಾಗಿ ಮಾತನಾಡಿದ ಸಿಎಂ, ಮೃತ ನವೀನ್ ಒಂದು ವಾರದಿಂದ ಬಂಕರ್ನಲ್ಲಿ ಇದ್ದರು. ಆದ್ರೆ ಇಂದು ನವೀನ್ ವಾಯು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಅವರು 4 ನೇ ವರ್ಷದಲ್ಲಿ ಓದುತ್ತಿದ್ದರು. ಅವ್ರ ಜೊತೆಗೆ ಅದೇ ಗ್ರಾಮದ ಮತ್ತೊಬ್ಬರಿಗೂ ಗಾಯವಾಗಿದೆ. ಈ ವಿಚಾರ ನನಗೆ ನೋವು ತಂದಿದೆ. ನಮಗೆ ತುಂಬಾ ಬೇಕಾದ ಕುಟುಂಬ. ಎಂಇಎ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಮೃತದೇಹ ವಾಪಸ್‌ ಪಡೆಯುವ ಬಗ್ಗೆ ಚರ್ಚಿಸಿದ್ದೇನೆ. ನವೀನ್ ಕುಟುಂಬದವರ ಜೊತೆ ಪ್ರಧಾನಿ ಚರ್ಚಿಸಿದ್ದಾರೆ ಎಂದರು.

ಇದನ್ನೂ ಓದಿ:ನನ್ನದೇ ಜಿಲ್ಲೆಯ ಕಂದನನ್ನು ಕಳೆದುಕೊಂಡೆ, ಅದೇ ಗ್ರಾಮದ ಮತ್ತೊಬ್ಬರಿಗೂ ಗಾಯವಾಗಿದೆ -ಸಿಎಂ ಬೊಮ್ಮಾಯಿ ಪ್ರಾಥಮಿಕ ಮಾಹಿತಿ

ಇದನ್ನೂ ಓದಿ: Shivaratri: ಈಶ್ವರನ ಹತ್ತೊಂಬತ್ತು ಅವತಾರಗಳು -ಇದು ಲೋಕ ಕಲ್ಯಾಣಕ್ಕಾಗಿ ಪರಮೇಶ್ವರನ ಅವತಾರಗಳು, ಅವು ಯಾವುವು?

Published On - 6:40 pm, Tue, 1 March 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?