AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೇಸ್ ಮೆಡಿಸಿನ್ ಅಭಿವೃದ್ಧಿಯಲ್ಲಿ ಇಸ್ರೋ ಜೊತೆ ಕೈಜೋಡಿಸಿದ ಆರ್​​ವಿಸಿಇ ವಿಧ್ಯಾರ್ಥಿಗಳು

ಬೆಂಗಳೂರಿನ ಆರ್‌ವಿಸಿಇ ಕಾಲೇಜಿನ ವಿದ್ಯಾರ್ಥಿಗಳು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ RVSAT-1 ಎಂಬ ಮೈಕ್ರೋ ಬಯೋಲಾಜಿಕಲ್ ನಾನೋ ಉಪಗ್ರಹ, ISRO ಯ PSLV-C60 ಮೂಲಕ ಉಡಾವಣೆಯಾಗಿದೆ. ಇದು ಬಾಹ್ಯಾಕಾಶದಲ್ಲಿ ಕರುಳಿನ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಅಧ್ಯಯನ ಮಾಡುತ್ತದೆ. ಈ ಯೋಜನೆಯು ಭವಿಷ್ಯದ ಬಾಹ್ಯಾಕಾಶ ಕಾರ್ಯಾಚರಣೆಗಳಲ್ಲಿ ಗಗನಯಾತ್ರಿಗಳ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಒಂದು ಮಹತ್ವದ ಸಾಧನೆಯಾಗಿದೆ.

ಸ್ಪೇಸ್ ಮೆಡಿಸಿನ್ ಅಭಿವೃದ್ಧಿಯಲ್ಲಿ ಇಸ್ರೋ ಜೊತೆ ಕೈಜೋಡಿಸಿದ ಆರ್​​ವಿಸಿಇ ವಿಧ್ಯಾರ್ಥಿಗಳು
ಸ್ಪೇಸ್ ಮೆಡಿಸಿನ್ ಅಭಿವೃದ್ಧಿಯಲ್ಲಿ ಇಸ್ರೋ ಜೊತೆ ಕೈಜೋಡಿಸಿದ ಆರ್​​ವಿಸಿಇ ವಿಧ್ಯಾರ್ಥಿಗಳು
ವಿವೇಕ ಬಿರಾದಾರ
|

Updated on:Feb 25, 2025 | 8:33 AM

Share

ಬೆಂಗಳೂರು, ಫೆಬ್ರವರಿ 25: ಭಾರತ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ವಿವಿಧ ಯಶಸ್ವಿ ಮಿಷನ್​ಗಳ ಮೂಲಕ ಜಾಗತಿಕ ಬಾಹ್ಯಾಕಾಶ ಲೋಕ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಇಸ್ರೋದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಯಾದ PSLV-4 ತನ್ನ ಕಕ್ಷೆ ಸೇರಿದ್ದು, ಬೆಂಗಳೂರಿನ ವಿದ್ಯಾರ್ಥಿಗಳು ಇದರ ಭಾಗವಾಗಿ ಕೆಲಸ ಮಾಡಿದ್ದು, ದೇಶದ ಮೊದಲ ವಿದ್ಯಾರ್ಥಿ ನಿರ್ಮಿತ ಮೈಕ್ರೋ ಬಯಲಾಜಿಕಲ್ ನ್ಯಾನೋ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

SPADEX/POEM-4 ಮಿಷನ್‌ನ ಭಾಗವಾಗಿ ಕಳೆದ ಡಿಸೆಂಬರ್‌ನಲ್ಲಿ ಇಸ್ರೋದ PSLV C-60 ನಲ್ಲಿ ಉಡಾವಣೆಯಾದ ಭಾರತದ ಮೊದಲ ಮೈಕ್ರೋ ಬಯೋಲಾಜಿಕಲ್ ನ್ಯಾನೊ ಸಾಟ್‌ಲೈಟ್ RVSAT-1 ಅನ್ನು ವಿನ್ಯಾಸ ಮತ್ತು ಅಭಿವೃದ್ಧಿ ಮಾಡುವ ಬೆಂಗಳೂರಿನ RV ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ತಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಬಾಹ್ಯಾಕಾಶದಲ್ಲಿ ಕರುಳಿನ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಅಧ್ಯಯನ ಮಾಡುವ ಸಲುವಾಗಿ ಬೆಂಗಳೂರಿನ RV ಕಾಲೇಜ್ ಆಫ್ ಎಂಜಿನಿಯರಿಂಗ್‌ನ ವಿದ್ಯಾರ್ಥಿಗಳ ತಂಡವು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ.

ಕರುಳಿನ ಬ್ಯಾಕ್ಟೀರಿಯಾವು ಜೀರ್ಣಕ್ರಿಯೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಮೂಲಕ ನಮ್ಮ ಆರೋಗ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇನ್ನು ಬಾಹ್ಯಾಕಾಶದಲ್ಲಿ ಕರುಳಿನ ಬ್ಯಾಕ್ಟೀರಿಯಾಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ತಿಳಿದುಕೊಳ್ಳಲು ಈ ಪ್ರಯೋಗ ನಿರ್ಣಾಯಕವಾಗಿದ್ದು, ಇಸ್ರೋ ಬಾಹ್ಯಾಕಾಶ ಕಾರ್ಯಾಚರಣೆಗಳ ಸಮಯದಲ್ಲಿ ಭಾರತೀಯ ಗಗನಯಾತ್ರಿಗಳನ್ನು ಆರೋಗ್ಯವಾಗಿಡಲು ಮಾರ್ಗಗಳನ್ನು ಕಂಡುಕೊಳ್ಳಲು ಇದು ಮಹತ್ವದ ಪಾತ್ರ ವಹಿಸಲಿದೆ ಎಂದು ಆರ್​ವಿಸಿಇ ಕಾಲೇಜು ಪ್ರಾಂಶುಪಾಲ ಸುಬ್ರಮಣ್ಯ ಹೇಳಿದರು.

ಕಳೆದ ಡಿಸೆಂಬರ್ ತಿಂಗಳಲ್ಲಿ ಶ್ರೀಹರಿಕೋಟದಿಂದ ಉಡಾವಣೆಯಾದ ದೇಶಿ ನಿರ್ಮಿತ ರಾಕೆಟ್ PSLV ಕಕ್ಷೆ ಸೇರಿದ್ದು, RVSAT-1 ಮೈಕ್ರೋ ಬಯಲೋಜಿಕಲ್ ನ್ಯಾನೋ ಸ್ಯಾಟಲೈಟ್​ನಲ್ಲಿ ಸಕ್ರಿಯವಾಗಿದ್ದು, ಬ್ಯಾಕ್ಟೀರಿಯಾ ಚಲನವಲನ ದೃಢವಾಗಿದೆ. ಈ ಮೂಲಕ ಬಾಹ್ಯಾಕಾಶದಲ್ಲಿ ಮುಂದಿನ ದಿನಗಳಲ್ಲಿ ಗಗನ ಯಾತ್ರಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿಡುವ ಸಂಬಂಧದ ಅಧ್ಯಯನಗಳಿಗೆ ಇದು ಪುಷ್ಟಿ ನೀಡಲಿದೆ.

ಇದನ್ನೂ ಓದಿ: ಸ್ಪೇಸ್ ಡಾಕಿಂಗ್ ಆಯ್ತು; 2025ರ ಮೊದಲಾರ್ಧದಲ್ಲಿ ಭಾರತದಿಂದ ಬಾಹ್ಯಾಕಾಶ ಯೋಜನೆಗಳ ಸರಮಾಲೆ

ಒಟ್ಟಾರೆಯಾಗಿ ವಿವಿಧ ಮಿಷನ್​ಗಳ ಮೂಲಕ ಬಾಹ್ಯಾಕಾಶ ಲೋಕದಲ್ಲಿ ದೇಶದ ಪ್ರಬಲ ರಾಷ್ಟ್ರಗಳಿಗೆ ಪೈಪೋಟಿ ನೀಡುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡುವ ವಿಶ್ವಾಸವಿದ್ದು, ಬೆಂಗಳೂರಿನ RV ಕಾಲೇಜ್ ಆಫ್ ಇಂಜಿನಿಯರಿಂಗ್​ನ ವಿದ್ಯಾರ್ಥಿಗಳು ಇಸ್ರೋ ಜೊತೆಗೆ ಕೆಲಸ ಮಾಡಿರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರವೇ ಸರಿ.

ವರದಿ: ಲಕ್ಷ್ಮೀ. ಎನ್​

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 am, Tue, 25 February 25

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ