AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ಪಂಚಭೂತಗಳಲ್ಲಿ ಲೀನ

ಅಂತ್ಯಸಂಸ್ಕಾರಕ್ಕೂ ಮುನ್ನ ಸಖರಾಯಪಟ್ಟಣದ ಕಾಲೇಜು ಆವರಣದಲ್ಲಿ ಧರ್ಮೇಗೌಡರಿಗೆ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಈ ವೇಳೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕೂಡ ಹಾಜರಿದ್ದರು.

ವಿಧಾನ ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ಪಂಚಭೂತಗಳಲ್ಲಿ ಲೀನ
ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಎಚ್​ಡಿ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: |

Updated on:Dec 29, 2020 | 6:43 PM

Share

ಚಿಕ್ಕಮಗಳೂರು: ಆತ್ಮಹತ್ಯೆಗೆ ಶರಣಾಗಿರುವ ವಿಧಾನ ಪರಿಷತ್ ಉಪಸಭಾಪತಿ S.L.ಧರ್ಮೇಗೌಡ  ಅಂತ್ಯಕ್ರಿಯೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸರಪನಹಳ್ಳಿ ನೆರವೇರಿತು. ತಂದೆ ಚಿತೆಗೆ ಪುತ್ರ ಎಸ್.ಡಿ.ಸೋನಾಲ್ ಅಗ್ನಿ ​ಸ್ಪರ್ಶ ಮಾಡಿದರು. ಈ ಮೂಲಕ ಅವರು ಪಂಚಭೂತಗಳಲ್ಲಿ ಲೀನವಾದರು.

ಅಂತ್ಯಸಂಸ್ಕಾರಕ್ಕೂ ಮುನ್ನ ಸಖರಾಯಪಟ್ಟಣದ ಕಾಲೇಜು ಆವರಣದಲ್ಲಿ ಧರ್ಮೇಗೌಡರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹಾಜರಿದ್ದರು. ಧರ್ಮೇಗೌಡರಿಗೆ ಗಣ್ಯಾತಿಗಣ್ಯರು, ಮಠಾಧೀಶರು, ಕುಟುಂಬ ಸದಸ್ಯರು, ಬಂಧುಗಳು, ಗ್ರಾಮಸ್ಥರ ಅಶ್ರುತರ್ಪಣ ಅರ್ಪಿಸಿದರು. ಇನ್ನು ಅಂತ್ಯ ಸಂಸ್ಕಾರದ ವೇಳೆ ಅಪಾರ ಸಂಖ್ಯೆಯಲ್ಲಿ ಸಂಬಂಧಿಕರು, ಬಂಧುಗಳು ನೆರೆದಿದ್ದರು.

ಆತ್ಮಹತ್ಯೆಗೆ ಶರಣಾಗಿದ್ದ ಧರ್ಮೇಗೌಡ H.D.ಕುಮಾರಸ್ವಾಮಿ ಆಪ್ತರಾಗಿದ್ದ ಎಸ್.ಎಲ್.ಧರ್ಮೇಗೌಡ. ಗನ್‌ಮ್ಯಾನ್‌, ಎಸ್ಕಾರ್ಟ್ ಸಿಬ್ಬಂದಿ ಮನೆಗೆ ಕಳುಹಿಸಿ ಸೋಮವಾರ ಸಂಜೆ ವೇಳೆಗೆ ತಮ್ಮ ಡ್ರೈವರ್ ಜತೆ ಕಾರಿನಲ್ಲಿ ಸಖರಾಯಪಟ್ಟಣದ ಮನೆಯಿಂದ ಗುಣಸಾಗರಕ್ಕೆ ಬಂದಿದ್ದರು.

ಬಳಿಕ ರೈಲು ಹಳಿ ಬಳಿ ಕಾರು ನಿಲ್ಲಿಸಲು ಕಾರು ಚಾಲಕನಿಗೆ ಸೂಚಿಸಿದ್ದರು. ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು. ನೀನು ಹೋಗು ಎಂದು ಚಾಲಕನನ್ನು ಮನೆಗೆ ಕಳುಹಿಸಿದ್ದಾರೆ. ನಂತರ ಕಡೂರಿನ ವ್ಯಕ್ತಿಗೆ ಕರೆ ಮಾಡಿ ಜನಶತಾಬ್ಧಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ಬಳಿಕ ತಮ್ಮ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಮಾಡಿಕೊಂಡು ಚಲಿಸುವ ರೈಲಿಗೆ ತಲೆ ಕೊಟ್ಟಿದ್ದಾರೆ. ರಾತ್ರಿ 10 ಗಂಟೆಯಾದರೂ ಅವರು ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಧರ್ಮೇಗೌಡ ಅವರಿಗಾಗಿ ಹುಡುಕಾಟ ಶುರುವಾಗಿತ್ತು. ಈ ವೇಳೆ ಗುಣಸಾಗರ ಬಳಿ ತಡರಾತ್ರಿ 1.30ರ ಸುಮಾರಿಗೆ ಧರ್ಮೇಗೌಡರ ಮೃತದೇಹ ಪತ್ತೆಯಾಗಿತ್ತು.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ

Published On - 6:40 pm, Tue, 29 December 20

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್