AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲಾಡಳಿತ ಕೊವಿಡ್​ನಿಂದ ಸಾವನ್ನಪ್ಪಿದವರ ಸಂಖ್ಯೆ ಮುಚ್ಚಿಟ್ಟಿದೆ: ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆರೋಪ

Mysore News: ಈ ರೀತಿ ಲೆಕ್ಕ ಕೊಡುವುದಕ್ಕೆ ಐಎಎಸ್ ಏಕೆ ಬೇಕು? ಎಸ್ಎಸ್ಎಲ್​ಸಿ ಓದಿದವರು ಕೊಡಬಹುದು. ಡಿಸಿ ರೋಹಿಣಿ ಸಿಂಧೂರಿ ತಮ್ಮ ಸಾರ್ವಜನಿಕ ಸೇವೆಯ ಎಲ್ಲವೂ ಇದೇ ರೀತಿ ಮೋಸದ್ದು. ಇಲ್ಲಿಗೆ ಕಳಂಕ ರಹಿತ ಒಳ್ಳೆಯ ಅಧಿಕಾರಿ ಬೇಕು. ಇದನ್ನು ನಾನು ಅವತ್ತೇ ಇದನ್ನು ಹೇಳಿದ್ದೆ. ಇದಕ್ಕಿಂತ ದಾಖಲಾತಿ ಬೇಕು ಅಂದರೆ ಸತ್ತವರ ಮನೆಗೆ ಹೋಗೋಣ

ಮೈಸೂರು ಜಿಲ್ಲಾಡಳಿತ ಕೊವಿಡ್​ನಿಂದ ಸಾವನ್ನಪ್ಪಿದವರ ಸಂಖ್ಯೆ ಮುಚ್ಚಿಟ್ಟಿದೆ: ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆರೋಪ
ಸಾ.ರಾ.ಮಹೇಶ್
Follow us
sandhya thejappa
| Updated By: Digi Tech Desk

Updated on:May 31, 2021 | 12:10 PM

ಮೈಸೂರು: ಜಿಲ್ಲಾಡಳಿತ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆರೋಪಿಸಿದ್ದಾರೆ. ಸಾವಿನ ಸಂಖ್ಯೆ ನೋಡಿ ನನಗೆ ಆಘಾತವಾಯಿತು. ಮೈಸೂರು ನಗರ ವ್ಯಾಪ್ತಿಯಲ್ಲೇ 969 ಸೋಂಕಿತರು ಸಾವನ್ನಪ್ಪಿದ್ದಾರೆ. ಮೇ 1 ರಿಂದ 29ರ ವರೆಗೆ 969 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಜಿಲ್ಲಾಡಳಿತ ಕೇವಲ 238 ಜನರ ಲೆಕ್ಕವನ್ನು ಕೊಟ್ಟಿದೆ. 731 ಜನರ ಸಾವಿನ ಲೆಕ್ಕವನ್ನು ಜಿಲ್ಲಾಡಳಿತ ಕೊಟ್ಟಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ಆರೋಪಿಸಿದ್ದಾರೆ.

ಈ ರೀತಿ ಲೆಕ್ಕ ಕೊಡುವುದಕ್ಕೆ ಐಎಎಸ್ ಏಕೆ ಬೇಕು? ಎಸ್ಎಸ್ಎಲ್​ಸಿ ಓದಿದವರು ಕೊಡಬಹುದು. ಡಿಸಿ ರೋಹಿಣಿ ಸಿಂಧೂರಿ ತಮ್ಮ ಸಾರ್ವಜನಿಕ ಸೇವೆಯ ಎಲ್ಲವೂ ಇದೇ ರೀತಿ ಮೋಸದ್ದು. ಇಲ್ಲಿಗೆ ಕಳಂಕ ರಹಿತ ಒಳ್ಳೆಯ ಅಧಿಕಾರಿ ಬೇಕು. ಇದನ್ನು ನಾನು ಅವತ್ತೇ ಇದನ್ನು ಹೇಳಿದ್ದೆ. ಇದಕ್ಕಿಂತ ದಾಖಲಾತಿ ಬೇಕು ಅಂದರೆ ಸತ್ತವರ ಮನೆಗೆ ಹೋಗೋಣ. ಸಾವಿನ ಲೆಕ್ಕದ ಸಮಗ್ರ ತನಿಖೆಯಾಗಬೇಕು. ಅಧಿಕಾರಿ ಮೇಲೆ ಕ್ರಮ ತೆಗೆದುಕೊಳ್ಳುವುದು ನಿಮಗೆ ಬಿಟ್ಟಿದ್ದು ಎಂದು ಸಾ.ರಾ.ಮಹೇಶ್ ಅಭಿಪ್ರಾಯಪಟ್ಟರು.

ಅಧಿಕಾರಿಗಳು ಏನೇ ಮಾಡಿದರು ನಂಬುತ್ತಾರೆ. ರಾಜಕಾರಣಿಗಳು ಸತ್ಯ ಹೇಳಿದರು ನಂಬುವುದಿಲ್ಲ. ಮೈಸೂರು ಜಿಲ್ಲಾಡಳಿತ ಸರ್ಕಾರಕ್ಕೂ ವಂಚನೆ ಮಾಡಿದೆ. ರೋಹಿಣಿ ಸಿಂಧೂರಿ ಬೇರೆಯವರ ಮೇಲೆ ಹಾಕುತ್ತಾರೆ. ಬೇರೆಯವರ ಮೇಲೆ ಹಾಕೋದರಲ್ಲಿ ಅವರು ಎಕ್ಸ್​ಪರ್ಟ್​. ಮೈಸೂರು ಜಿಲ್ಲೆಯಲ್ಲಿ 3 ಸಾವಿರ ಜನ ಮೃತಪಟ್ಟಿದ್ದಾರೆ. ನೊಂದಂತಹ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡಿ. ನಿಮ್ಮ ಲೆಕ್ಕದ ಪ್ರಕಾರ ಉಳಿದವರಿಗೆ ಪರಿಹಾರ ಹೇಗೆ? ಎಂದು ಪ್ರಶ್ನಿಸಿದ ಅವರು ಮಾನವೀಯತೆ, ಮನುಷ್ಯತ್ವ, ತಾಯಿ ಹೃದಯವೇ ಇಲ್ವಾ? ಸರ್ಕಾರವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದೀರಾ. ಇದೇ ವಿಷಯವನ್ನು ನಾನು ಸಿಎಂ ವಿಸಿಯಲ್ಲಿ ಹೇಳಿದ್ದೇನೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತೆ. ಮಾನವ ಹಕ್ಕುಗಳ ಆಯೋಗ, ರಾಜ್ಯಪಾಲರಿಗೆ ದೂರು ನೀಡುತ್ತೇನೆ. ಸಿಎಂ ಯಡಿಯೂರಪ್ಪ ಅವರಿಗೆ ಕಳುಹಿಸಿ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಉಸಿರಾಟದ ಸಮಸ್ಯೆ, ಕೊರೊನಾದಿಂದ ಬಿಹಾರದಲ್ಲಿ ನಾಲ್ವರು ಮಕ್ಕಳ ಸಾವು

Central Vista ಸೆಂಟ್ರಲ್ ವಿಸ್ಟಾ ಯೋಜನೆ ಕಾಮಗಾರಿಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

(Sa Ra Mahesh alleges that Mysore District Administration hide the corona death cases number)

Published On - 11:41 am, Mon, 31 May 21

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್