AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿನಂತೆ ಕಾಂಗ್ರೆಸ್​​ಗೆ ಮುಂದಿನ ಬಾರಿ ಮೇಯರ್ ಸ್ಥಾನ ನೀಡುತ್ತೇವೆ, ಆದರೆ ಮಾತಿನ ಮೇಲೆ ಹಿಡಿತವಿರಬೇಕು: ಸಾ.ರಾ.ಮಹೇಶ್

ಮಾತಿನ ಮೇಲೆ ಹಿಡಿತವಿರಬೇಕು. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮೇಯರ್ ಸ್ಥಾನ ಕೊಡುತ್ತಿದ್ದೆವು. ಆದರೆ ಹೀನಾಯವಾಗಿ ಮಾತನಾಡಿದ್ದರಿಂದ ಕೊಡಲಿಲ್ಲ. ನಮ್ಮ ಶಕ್ತಿ ಏನೆಂದು ತೋರಿಸಲು ಅಭ್ಯರ್ಥಿ ಹಾಕಿದೆವು ಅಷ್ಟೆ ಎಂದು ಸಾ.ರಾ.ಮಹೇಶ್​ ತಿಳಿಸಿದ್ದಾರೆ.

ಮಾತಿನಂತೆ ಕಾಂಗ್ರೆಸ್​​ಗೆ ಮುಂದಿನ ಬಾರಿ ಮೇಯರ್ ಸ್ಥಾನ ನೀಡುತ್ತೇವೆ, ಆದರೆ ಮಾತಿನ ಮೇಲೆ ಹಿಡಿತವಿರಬೇಕು: ಸಾ.ರಾ.ಮಹೇಶ್
ಸಾ.ರಾ.ಮಹೇಶ್
sandhya thejappa
| Edited By: |

Updated on: Feb 28, 2021 | 11:46 AM

Share

ಮೈಸೂರು: ಪಾಲಿಕೆಯಲ್ಲಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆ ಆರ್ ನಗರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್, ಮೇಯರ್ ಆಯ್ಕೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ನಮ್ಮ ಮಾತಿನಂತೆ ಮುಂದಿನ ಬಾರಿ ಕಾಂಗ್ರೆಸ್​ಗೆ ಮೇಯರ್ ಸ್ಥಾನ ನೀಡುತ್ತೇವೆ. ಆದರೆ ಮಾತಿನ ಮೇಲೆ ಹಿಡಿತವಿರಬೇಕು. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮೇಯರ್ ಸ್ಥಾನ ಕೊಡುತ್ತಿದ್ದೆವು. ಆದರೆ ಹೀನಾಯವಾಗಿ ಮಾತನಾಡಿದ್ದರಿಂದ ಕೊಡಲಿಲ್ಲ. ನಮ್ಮ ಶಕ್ತಿ ಏನೆಂದು ತೋರಿಸಲು ಅಭ್ಯರ್ಥಿ ಹಾಕಿದೆವು ಅಷ್ಟೆ ಎಂದು ತಿಳಿಸಿದ್ದಾರೆ.

ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ ಕೊನೇ ಕ್ಷಣದಲ್ಲಿ ಮೈತ್ರಿಯಾಗಲು ಜಿ.ಟಿ.ದೇವೇಗೌಡ ಮತ್ತು ಸಂದೇಶ್ ನಾಗರಾಜ್ ಕಾರಣ. ಅವರು ಚುನಾವಣೆಗೆ ಬಂದಿದ್ದರೆ ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ. ಮೈತ್ರಿ ಗೊಂದಲಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣರಾಗಿದ್ದಾರೆ ಎಂದು ಹೇಳಿಕೆ ನೀಡಿದ ಸಾ.ರಾ.ಮಹೇಶ್ ಮೈಸೂರು ಜಿಲ್ಲೆಯಿಂದಲೇ ಜನತಾದಳದ ಶಕ್ತಿಯನ್ನು ಸಿದ್ದರಾಮಯ್ಯ ಅವರಿಗೆ ತೋರಿಸಿದ್ದೇವೆ. ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ ಎಂದರು.

ಮೈತ್ರಿ ಬಗ್ಗೆ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ಹೀಗಿದ್ದಾಗ ಇದಕ್ಕೆ ತನ್ವೀರ್ ಸೇಠ್ ಹೇಗೆ ಕಾರಣರಾಗುತ್ತಾರೆ. ತನ್ವೀರ್ ಸೇಠ್​ನನ್ನು ಅವರ ಪಕ್ಷ ಉಚ್ಚಾಟನೆ ಮಾಡಿದರೆ ನಾವು ಅವರನ್ನು ನಮ್ಮ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಅವರೊಬ್ಬರು ಅಲ್ಪ ಸಂಖ್ಯಾತ ಸಮುದಾಯದ ಮುಖಂಡ. ಹೀಗಾಗಿ ತನ್ವೀರ್ ಸೇಠ್​ಗೆ ಜೆಡಿಎಸ್ ಪಕ್ಷಕ್ಕೆ ಸದಾ ಸ್ವಾಗತ ಎಂದು ಹೇಳಿದರು. ಇನ್ನು  ಮೈಸೂರು ಪಾಲಿಕೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಕ್ಕೆ ನಾವು ನಿರ್ಧಾರ ಮಾಡಿರಲಿಲ್ಲ. ಪಕ್ಷೇತರರ ಜೊತೆ ಸೇರಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೆವು ಎಂದು ಹೇಳಿದ ಸಾ.ರಾ.ಮಹೇಶ್, ಪಕ್ಷೇತರರ ಜೊತೆ ಸ್ವತಂತ್ರವಾಗಿ ಪಕ್ಷದ ಬಲ ತೋರಿಸಲು ಮುಂದಾಗಿದ್ದೆವು. ಆದರೆ ಮತ್ತೆ ಡಿ.ಕೆ.ಶಿವಕುಮಾರ್ ಕರೆ ಮಾಡಿದ್ದರು. ನಾನು ಕಾಲ್ ರಿಸೀವ್ ಮಾಡಿರಲಿಲ್ಲ. ಬಳಿಕ ತನ್ವೀರ್ ಸೇಠ್ ಮೆಸೇಜ್ ಮಾಡಿದ್ದರು. ಆಗ ಮತ್ತೆ ಡಿ.ಕೆ. ಶಿವಕುಮಾರ್ ಕರೆ ಮಾಡಿದಾಗ ಕುಮಾರಸ್ವಾಮಿ ಮಾತನಾಡಿದರು. ಕರೆಯಲ್ಲಿ ಮೈತ್ರಿಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು ಎಂದು ತಿಳಿಸಿದರು.

ಇದನ್ನೂ ಓದಿ

ನಾಳೆಯಿಂದ ಆನ್​ಲೈನ್, ಆಫ್​ಲೈನ್ ಕ್ಲಾಸ್​ ಸಂಪೂರ್ಣ ಬಂದ್ -ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್

ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!