AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ಪಡೆದ ಶತಾಯುಷಿ ಸಾಲುಮರದ ತಿಮ್ಮಕ್ಕ

ಸಾಲು ಮರದ ತಿಮ್ಮಕ್ಕನ ಸಾಧನೆ ಅಪಾರ ಮತ್ತು ಎಲ್ಲರಿಗೂ ಮಾದರಿ. ಮಕ್ಕಳಾಗದ ತಿಮ್ಮಕ್ಕ ಮರಗಳನ್ನು ನೆಟ್ಟು ತನ್ನ ಹೊಟ್ಟೆಯಲ್ಲಿ ಜನಿಸಿದ ಮಗುವಿಗಿಂತ ಚೆನ್ನಾಗಿ ನೋಡಿಕೊಂಡಿದ್ದಾರೆ. ಇವರ ಸಾಧನೆ ಯುವ ಜನತೆಗೆ ಸ್ಫೂರ್ತಿ.

ಕೊವಿಡ್ ಲಸಿಕೆ ಪಡೆದ ಶತಾಯುಷಿ ಸಾಲುಮರದ ತಿಮ್ಮಕ್ಕ
ಲಸಿಕೆ ಪಡೆದ ಸಾಲುಮರದ ತಿಮ್ಮಕ್ಕ
TV9 Web
| Edited By: |

Updated on: Jul 18, 2021 | 3:30 PM

Share

ಹಾಸನ: ಪದ್ಮಶ್ರೀ ಪ್ರಶಸ್ತಿ ವಿಜೇತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಕೊರೊನಾ ಲಸಿಕೆಯನ್ನು ಪಡೆದರು. ಅರೋಗ್ಯ ಇಲಾಖೆಯ ಅಧಿಕಾರಿಗಳು ವೃಕ್ಷ ಮಾತೆಯ ಮನೆಗೆ ತೆರಳಿ ಕೋವಿಶೀಲ್ಡ್ ವ್ಯಾಕ್ಸಿನ್ ಮೊದಲ ಡೋಸ್​ನ ನೀಡಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಪದ್ಮಶ್ರಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ತಡವಾಗಿ ಲಸಿಕೆ ಪಡೆದಿದ್ದಾರೆ. ಜಿಲ್ಲೆಯ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ತಿಮ್ಮಕ್ಕ ನೆಲೆಸಿದ್ದಾರೆ. ಸ್ಥಳೀಯ ಶಾಸಕ ಕೆ.ಎಸ್.ಲಿಂಗೇಶ್ ಸಮ್ಮುಖದಲ್ಲಿ ತಿಮ್ಮಕ್ಕನಿಗೆ ಲಸಿಕೆ ನೀಡಲಾಗಿದೆ.

ಕೊರೊನಾ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಿದರು ಕೆಲವರು ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಾರೆ. ಲಸಿಕೆಯಿಂದ ಅಡ್ಡ ಪರಿಣಾಮಗಳಾಗುತ್ತವೆ ಅಂತ ಹೆದರಿ ಹಿಂದೆ ಸರಿಯುತ್ತಾರೆ. ಗ್ರಾಮಗಳಿಗೆ ಅಧಿಕಾರಿಗಳು ತೆರಳಿ ಕೊರೊನಾ ಲಸಿಕೆ ಪಡೆಯಿರಿ ಅಂತ ಸೂಚಿಸಿದ್ದರೂ ಜನ ಮಾತ್ರ ಅವರ ಮಾತುಗಳನ್ನು ಕೇಳದೆ ಬೇಜವಾಬ್ದಾರಿಯಾಗಿ ವರ್ತಿಸಿದ ಉದಾಹಾರಣೆಗಳು ಬಹಳಷ್ಟಿವೆ. ಈ ಎಲ್ಲದರ ನಡುವೆ 110 ವರ್ಷದ ವೃಕ್ಷ ಮಾತೆ ತಿಮ್ಮಕ್ಕ ಕೊರೊನಾ ಲಸಿಕೆ ಪಡೆದು ಜಾಗೃತಿ ಮೂಡಿಸಿದ್ದಾರೆ.

ಸಾಲು ಮರದ ತಿಮ್ಮಕ್ಕನ ಸಾಧನೆ ಅಪಾರ ಮತ್ತು ಎಲ್ಲರಿಗೂ ಮಾದರಿ. ಮಕ್ಕಳಾಗದ ತಿಮ್ಮಕ್ಕ ಮರಗಳನ್ನು ನೆಟ್ಟು ತನ್ನ ಹೊಟ್ಟೆಯಲ್ಲಿ ಜನಿಸಿದ ಮಗುವಿಗಿಂತ ಚೆನ್ನಾಗಿ ನೋಡಿಕೊಂಡಿದ್ದಾರೆ. ಇವರ ಸಾಧನೆ ಯುವ ಜನತೆಗೆ ಸ್ಫೂರ್ತಿ. ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ತಿಮ್ಮಕ್ಕ ಇದೀಗ ಕೊರೊನಾ ಲಸಿಕೆ ಪಡೆಯುವ ಮೂಲಕ ಲಸಿಕೆ ಮೇಲಿದ್ದ ಭಯವನ್ನು ದೂರ ಮಾಡಿದ್ದಾರೆ. ಯಾವುದೇ ಭಯವಿಲ್ಲದೆ ಕೊವಿಡ್ ಲಸಿಕೆಯನ್ನು ಪಡೆಯಬಹುದು ಅಂತ ಸಾಲು ಮರದ ತಿಮ್ಮಕ್ಕ ತಾನು ಲಸಿಕೆ ಪಡೆಯುವ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ

‘ಅವಾ ಯಾವನೊ ಡಿಕೆ ಪಾಕೆ ಅಂತೆಲ್ಲ ಹೇಳ್ತಾನೆ, ನನ್ ಹಾಳ್ ಮಾಡೋಕೆ ಈ ಕೆಲಸ ಮಾಡ್ತಿದ್ದೀರಾ’: ಅಭಿಮಾನಿಗಳ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ

ನಾಟಿ ಕೋಳಿ ಮೊಟ್ಟೆ ಮಾರಿ ಜೀವನ ಸಾಗಿಸುತ್ತಿರುವ ವೃದ್ಧೆ; ಯುವಕರನ್ನು ನಾಚಿಸುವಂತಿದೆ 90 ವರ್ಷದ ಅಜ್ಜಿಯ ಉತ್ಸಾಹ

(Saalumarada Thimmakka has been vaccinated for coronavirus in hassan)

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್