AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಕಡಿಮೆ ಆಗುವ ಸಾಧ್ಯತೆಯಿದೆ: ಕೇಂದ್ರ ಸಚಿವ ಸದಾನಂದ ಗೌಡ

ಕರ್ನಾಟಕದಲ್ಲಿ ಕೊರೊನಾ ಔಷಧಿ ಕೊರತೆಯ ಬಗ್ಗೆ ಮಾತನಾಡಿದ ಕೇಂದ್ರ ಸಚಿವರು ರೆಮ್​ಡಿಸಿವಿರ್ ಕೊರತೆ ಇದೆ ಎಂದು ಹೇಳಲಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಬಂದಿದ್ದರಿಂದ ರೆಮ್​ಡಿಸಿವಿರ್ ರಪ್ತು ಮಾಡಲಾಗುತ್ತಿತ್ತು. ಸದ್ಯಕ್ಕೆ ರೆಮ್​ಡಿಸಿವಿರ್ ರಫ್ತು ಬ್ಯಾನ್ ಮಾಡಲಾಗಿದೆ ಎಂದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಕಡಿಮೆ ಆಗುವ ಸಾಧ್ಯತೆಯಿದೆ: ಕೇಂದ್ರ ಸಚಿವ ಸದಾನಂದ ಗೌಡ
D.V.ಸದಾನಂದ ಗೌಡ
sandhya thejappa
sandhya thejappa|

Updated on:Apr 13, 2021 | 12:28 PM

Share

ದೆಹಲಿ: ಕೊರೊನಾ ವೇಳೆ ಯೂರಿಯಾಗಿಂತ ಡಿಎಪಿ ಹೆಚ್ಚು ಬಳಕೆಯಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 12 ಲಕ್ಷ ಮೆಟ್ರಿಕನ್ ಟನ್ ಡಿಎಪಿ ಹೆಚ್ಚು ಅವಶ್ಯಕತೆ ಇದೆ. ಆದರೆ ಈ ವರ್ಷ ರಸಗೊಬ್ಬರಗಳ ಕೊರತೆ ಇರುವುದಿಲ್ಲ. ರಸಗೊಬ್ಬರ ಬೆಲೆ ಏರಿಕೆ ಭಯ ರೈತರಲ್ಲಿ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಕಚ್ಚಾ ದರ ಹೆಚ್ಚಾಗಿದೆ ಎಂದು ಹೇಳಿದ ಸದಾನಂದಗೌಡ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಕಡಿಮೆ ಆಗುವ ಸಾಧ್ಯತೆ ಇದೆ. ಒಂದು ತಿಂಗಳ ಒಳಗೆ ದರ ಕಡಿಮೆ ಆಗಲಿದೆ. ಮುಂದಿನ ಎರಡುವರೆ ತಿಂಗಳಿಗೆ ಬೇಕಾಗುವಷ್ಟು ಗೊಬ್ಬರ ದಾಸ್ತಾನು ಇದೆ. ಹಳೆಯ ದರದಲ್ಲಿ ರಸಗೊಬ್ಬರ ಮಾರಾಟಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಔಷಧಿ ಕೊರತೆಯ ಬಗ್ಗೆ ಮಾತನಾಡಿದ ಕೇಂದ್ರ ಸಚಿವರು ರೆಮ್​ಡಿಸಿವಿರ್ ಕೊರತೆ ಇದೆ ಎಂದು ಹೇಳಲಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಬಂದಿದ್ದರಿಂದ ರೆಮ್​ಡಿಸಿವಿರ್ ರಪ್ತು ಮಾಡಲಾಗುತ್ತಿತ್ತು. ಸದ್ಯಕ್ಕೆ ರೆಮ್​ಡಿಸಿವಿರ್ ರಫ್ತು ಬ್ಯಾನ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಔಷಧಿಯ ಕೊರತೆ ಎದುರಾಗಲ್ಲ. ಕರ್ನಾಟಕದಲ್ಲಿ ವೆಂಟಿಲೇಟರ್​ಗಳ ಕೊರತೆಯೂ ಆಗಲ್ಲ ಎಂದರು. ನಂತರ 3 ಲಕ್ಷ ವೆಂಟಿಲೇಟರ್​ಗಳ ಉತ್ಪಾದನೆ ಆಗುತ್ತಿದೆ ಎಂದು ತಿಳಿಸಿದರು.

ಕುಮಾರಸ್ವಾಮಿ ವಿರುದ್ಧ ಸದಾನಂದಗೌಡ ವಾಗ್ದಾಳಿ ಕುಮಾರಸ್ವಾಮಿ ಅಲ್ಪತನದ ಮಾತುಗಳನ್ನು ಆಡಿದ್ದಾರೆ. ಅವರ ತಂದೆ ಮಣ್ಣಿನ ಮಗ ಅಂತಾರೆ. ಕೇಂದ್ರದಿಂದ ಬರುವ ಗೊಬ್ಬರದ ಸಬ್ಸಿಡಿ ಬಗ್ಗೆ ಗೊತ್ತಿಲ್ಲ. ಬಾಯಿಗೆ ಬಂದ ಹಾಗೆ ಕುಮಾರಸ್ವಾಮಿ ಮಾತಾಡುತ್ತಾರೆ. ಕುಮಾರಸ್ವಾಮಿಯೇ ಚರ್ಚಾಸ್ಪದ ವ್ಯಕ್ತಿ ಎಂದು ಸದಾನಂದ ಗೌಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ

ಲಾಕ್​ಡೌನ್​ ಇಲ್ಲದಿದ್ದರೂ ಕಠಿಣ ಕ್ರಮ ಜಾರಿಗೊಳಿಸಿ, ಜನ ಹಳ್ಳಿಗೆ ಹೋಗುವುದನ್ನು ತಡೆಯಿರಿ: ತಾಂತ್ರಿಕ ಸಲಹಾ ಸಮಿತಿ ಸೂಚನೆ

ಯುಗಾದಿ ಹಬ್ಬಕ್ಕೆ ಲವರ್​ ಬಾಯ್​ ಲುಕ್​ನಲ್ಲಿ ಬಂದ ಪ್ರಭಾಸ್​! ರಾಧೆ ಶ್ಯಾಮ್​ ಹೊಸ ಪೋಸ್ಟರ್​ ವೈರಲ್​

(Sadananda Gowda said fertilizer prices could be reduced in the international market)

Published On - 12:25 pm, Tue, 13 April 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್