Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆದುಳಿನ ಶಸ್ತ್ರಚಿಕಿತ್ಸೆಯಾಗಿ ಒಂದು ತಿಂಗಳ ನಂತರ ಇಂಡೋನೇಷ್ಯಾಕ್ಕೆ ತೆರಳಿದ ಸದ್ಗುರು

ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರುಗಳು ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಇದೀಗ ಹತ್ತು ದಿನಗಳ ಇಂಡೋನೇಷ್ಯಾ ಪ್ರವಾಸ ಕೈಗೊಂಡಿದ್ದು, ಈ ವೇಳೆ ವಿವಿಧ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇನ್ನು ಇಂದು ಒಡಿಶಾದ "ಬಾಲಿ ಜಾತ್ರೆ" ಮತ್ತು ಎರಡು ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳ ಕುರಿತು ಇಂಡೋನೇಷಿಯಾದ ಪ್ರವಾಸೋದ್ಯಮ ಸಚಿವರಿಗೆ ವಿವರಿಸಿದರು.

ಮೆದುಳಿನ ಶಸ್ತ್ರಚಿಕಿತ್ಸೆಯಾಗಿ ಒಂದು ತಿಂಗಳ ನಂತರ ಇಂಡೋನೇಷ್ಯಾಕ್ಕೆ ತೆರಳಿದ ಸದ್ಗುರು
ಸದ್ಗುರು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 20, 2024 | 8:01 PM

ಇಂಡೋನೇಷ್ಯಾ, ಏಪ್ರಿಲ್.20: ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಸದ್ಗುರು(Sadhguru) ಅವರು ಮೆದುಳಿನ ಶಸ್ತ್ರಚಿಕಿತ್ಸೆ ಆದ ಒಂದು ತಿಂಗಳ ನಂತರ ಮತ್ತೆ ಕಾರ್ಯಪ್ರವೃತ್ತರಾಗಿದ್ದಾರೆ. ನಿನ್ನೆ(ಏ.19) ನಡೆದ ಲೋಕಸಭೆ ಚುನಾವಣೆ ಮತದಾನದಲ್ಲಿ ಮತ ಚಲಾಯಿಸಿದ ನಂತರ, ಭಾರತ ಮತ್ತು ಆಗ್ನೇಯ ಏಷ್ಯಾದ ನಡುವಿನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಂಬಂಧಗಳ ಕುರಿತು ಅನ್ವೇಷಿಸಲು ಹತ್ತು ದಿನಗಳ ಪ್ರವಾಸ ಕೈಗೊಂಡಿದ್ದು, ಇಂದು ಇಂಡೋನೇಷ್ಯಾ(Indonesia)ದ ಬಾಲಿಗೆ ತಲುಪಿದರು. ಈ ವೇಳೆ ಇಂಡೋನೇಷ್ಯಾದ ಪ್ರವಾಸೋದ್ಯಮ ಸಚಿವರಾದ ಶ್ರೀ ಸ್ಯಾಂಡಿಯಾಗ ಯುನೊ ಮತ್ತು ಬಾಲಿಯಲ್ಲಿರುವ ಭಾರತದ ಕಾನ್ಸುಲ್ ಜನರಲ್ ಡಾ. ಶಶಾಂಕ್ ವಿಕ್ರಮ್ ಸ್ವಾಗತಿಸಿದರು.

ಇನ್ನು ಸಚಿವರೊಂದಿಗೆ ಮಾತನಾಡುತ್ತಾ, ಸದ್ಗುರುಗಳು ಎರಡು ದೇಶಗಳ ನಡುವಿನ ಐತಿಹಾಸಿಕ ಸಂಬಂಧವನ್ನು ವಿವರಿಸಿದರು.  “ಬಲಿ ಜಾತ್ರೆ” ಕುರಿತು ಹೇಳುತ್ತಾ ಇದು  ಒಡಿಶಾದ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿದ್ದು, ಬಾಲಿಯೊಂದಿಗೆ ಒಡಿಶಾದ ಜನರ ಹಿಂದಿನ ಒಡನಾಟವನ್ನು ತಿಳಿಸಿದರು. ಈ ಸಂದರ್ಭದಲ್ಲಿ, ಒಡಿಶಾದ ಜನರು ತಮ್ಮ ಪೂರ್ವಜರು ಬಾಲಿಗೆ ತೆರಳಿದ ಸ್ಮರಣಾರ್ಥವಾಗಿ ಪ್ರಯಾಣದ ಸಾಂಕೇತಿಕ ಸೂಚಕವಾಗಿ ಬಣ್ಣದ ಕಾಗದ, ಒಣಗಿದ ಬಾಳೆ ಮರದ ತೊಗಟೆಗಳು ಮತ್ತು ಕಾರ್ಕ್‌ಗಳಿಂದ ಮಾಡಿದ ಚಿಕಣಿ ಆಟಿಕೆ ದೋಣಿಗಳನ್ನು ತಯಾರಿಸಿದ ಕುರಿತು ಪ್ರಸ್ತಾಪಿಸಿದರು. ಇದೇ ವೇಳೆ ಇಂಡೋನೇಷ್ಯಾದ ವಿವಿಧ ಆಧ್ಯಾತ್ಮಿಕ ಸ್ಥಳಗಳನ್ನು ನಿರ್ವಹಿಸುವ ವಿಧಾನವನ್ನು ಶ್ಲಾಘಿಸಿದರು.

ಇದನ್ನೂ ಓದಿ:Sadhguru Jaggi Vasudev: ಮೆದುಳಿನಲ್ಲಿ ರಕ್ತಸ್ರಾವ; ಸದ್ಗುರು ಜಗ್ಗಿ ವಾಸುದೇವ್​​ಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ

ವಿವಿಧ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಲಿರುವ ಸದ್ಗುರು

ಇಂಡೋನೇಷ್ಯಾಕ್ಕೆ 10 ದಿನಗಳ ಪ್ರವಾಸ ಕೈಗೊಂಡಿರುವ ಸಮಯದಲ್ಲಿ, ಸದ್ಗುರುಗಳು ಬೆಸಾಕಿ, ತೀರ್ಥ ಎಂಪುಲ್ ದೇವಾಲಯ ಮತ್ತು ಇತರ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ದೇವಾಲಯದ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಬಳಿಕ ಕಾಂಬೋಡಿಯಾಕ್ಕೆ ತೆರಳಲಿದ್ದಾರೆ. ಇನ್ನು ಸಾಮಾಜಿಕ ಮಾಧ್ಯಮದಲ್ಲಿ ಅತೀ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ