AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ: ಕನ್ನಡಿಗನಿಗೆ ಒಲಿದ ಯುವ ಪುರಸ್ಕಾರ..!

ಕೇಂದ್ರ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಯುವ ಪುರಸ್ಕಾರ ಪ್ರಶಸ್ತಿ ಆರ್. ದಿಲೀಪ್ ಕುಮಾರ್ ಅವರ "ಪಚ್ಚೆಯ ಜಗುಲಿ" ಮತ್ತು ಬಾಲ ಪುರಸ್ಕಾರ ಪ್ರಶಸ್ತಿ ಕೆ. ಶಿವಲಿಂಗಪ್ಪ ಹಂದಿಹಾಳು ಅವರ "ನೋಟ್ ಬುಕ್" ಕೃತಿಗೆ ಲಭಿಸಿದೆ. ಎರಡೂ ಕೃತಿಗಳು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿವೆ. ಪ್ರಶಸ್ತಿ ವಿಜೇತರಿಗೆ ತಲಾ 50,000 ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕ ನೀಡಲಾಗುತ್ತದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ: ಕನ್ನಡಿಗನಿಗೆ ಒಲಿದ ಯುವ ಪುರಸ್ಕಾರ..!
ಆರ್​ ದಿಲೀಪ್​ ಕುಮಾರ್
ಹರೀಶ್ ಜಿ.ಆರ್​. ನವದೆಹಲಿ
| Updated By: ವಿವೇಕ ಬಿರಾದಾರ|

Updated on:Jun 18, 2025 | 5:36 PM

Share

ನವದೆಹಲಿ/ಬೆಂಗಳೂರು, ಜೂನ್​ 18: ಕೇಂದ್ರ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಯುವ ಪುರಸ್ಕಾರ ಪ್ರಶಸ್ತಿ (Sahitya Akademi Yuva Puraskar) ಮತ್ತು ಬಾಲ ಪುರಸ್ಕಾರ (Bal Puraskar) ಪ್ರಶಸ್ತಿ ಪ್ರಕಟವಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಕೊಡಮಾಡುವ 2025ನೇ ಸಾಲಿನ ಯುವ ಪುರಸ್ಕಾರ ಆರ್.ದಿಲೀಪ್ ಕುಮಾರ್​​ ಅವರ ‘ಪಚ್ಚೆಯ ಜಗುಲಿ’ಗೆ ಲಭಿಸಿದೆ. ಬಾಲ ಪುರಸ್ಕಾರ ಪ್ರಶಸ್ತಿ ಕೆ.ಶಿವಲಿಂಗಪ್ಪ ಹಂದಿಹಾಳು​ ಅವರ ‘ನೋಟ್ ಬುಕ್’ ಸಣ್ಣ ಕಥೆಗಳ ಸಂಕಲನಕ್ಕೆ ಲಭಿಸಿದೆ. ನೋಟ್​ ಬುಕ್​ ಮಕ್ಕಳ ಸಣ್ಣ ಕಥೆಗಳ ಪುಸ್ತಕವು 2021ರಲ್ಲಿ ಪ್ರಕಟವಾಗಿತ್ತು.

ಆರ್​. ದಿಲೀಪ್​ ಕುಮಾರ್​ ಅವರು 1991ರ ಮಾರ್ಚ್​ 16 ರಂದು ಮೈಸೂರಿನಲ್ಲಿ ಜನಿಸಿದರು. ದಿಲೀಪ್ ಕುಮಾರ್ ಅವರು ಸದ್ಯ ಚಾಮರಾಜನಗರದಲ್ಲಿ ವಾಸವಾಗಿದ್ದಾರೆ. ಇವರು ಪದವಿ ಶಿಕ್ಷಣವನ್ನು ಸರ್ಕಾರಿ ಪದವಿ ಕಾಲೇಜು ಚಾಮರಾಜನಗರ, ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಜೆಎಸ್​ಎಸ್​ ಕಾಲೇಜು ಚಾಮರಾಜನಗರದಲ್ಲಿ ಪೂರೈಸಿದರು.

ಇದೇ ಕಾಲೇಜಿನಲ್ಲಿ ಬಿಎಡ್​ ಪದವಿಯನ್ನು ಪಡೆದರು. ನಾಲ್ಕು ವರ್ಷಗಳ ಕಾಲ ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆಗಳಲ್ಲಿನ ಪದವಿ ಪೂರ್ವ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರು ತಲಾ 50 ಸಾವಿರ ನಗದು ಹಾಗೂ ಫಲಕಗಳನ್ನು ಪಡೆಯಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Wed, 18 June 25

ಮಳೆಗಾಲದಲ್ಲಿ ಮಕ್ಕಳ ಪ್ರತಿನಿತ್ಯದ ಗೋಳಿದು, ಶಾಸಕರಿಗಿಲ್ಲ ಕಾಳಜಿ
ಮಳೆಗಾಲದಲ್ಲಿ ಮಕ್ಕಳ ಪ್ರತಿನಿತ್ಯದ ಗೋಳಿದು, ಶಾಸಕರಿಗಿಲ್ಲ ಕಾಳಜಿ
ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ಜತೆ ಪ್ರಧಾನಿ ಮೋದಿ ರೋಡ್ ಶೋ
ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ಜತೆ ಪ್ರಧಾನಿ ಮೋದಿ ರೋಡ್ ಶೋ
ಎಫ್ಐಅರ್​ನಲ್ಲಿ ಹೆಸರಿರುವ ಕಾರಣ ಶಾಸಕನ ವಿಚಾರಣೆ ನಡೆಯಲಿದೆ: ಪರಮೇಶ್ವರ್
ಎಫ್ಐಅರ್​ನಲ್ಲಿ ಹೆಸರಿರುವ ಕಾರಣ ಶಾಸಕನ ವಿಚಾರಣೆ ನಡೆಯಲಿದೆ: ಪರಮೇಶ್ವರ್
ಬೈಕ್​, ಕಾರು ಆಯ್ತು ಈಗ ಥೈಲ್ಯಾಂಡ್​ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್
ಬೈಕ್​, ಕಾರು ಆಯ್ತು ಈಗ ಥೈಲ್ಯಾಂಡ್​ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್
ಕೇವಲ ವಂಚನೆಯಿಂದ ಐಷಾರಾಮಿ ಬದುಕು ನಡೆಸಿದವನನ್ನು ಬಂಧಿಸಿದ ಪೊಲೀಸ್
ಕೇವಲ ವಂಚನೆಯಿಂದ ಐಷಾರಾಮಿ ಬದುಕು ನಡೆಸಿದವನನ್ನು ಬಂಧಿಸಿದ ಪೊಲೀಸ್
ಮಂಗಳೂರು ನಟೋರಿಯಸ್‌ ವಂಚಕನ ರಹಸ್ಯ ಕೋಣೆಲಿ ವಿದೇಶಿ ಯುವತಿಯರು, ಮದ್ಯ ರಾಶಿ!
ಮಂಗಳೂರು ನಟೋರಿಯಸ್‌ ವಂಚಕನ ರಹಸ್ಯ ಕೋಣೆಲಿ ವಿದೇಶಿ ಯುವತಿಯರು, ಮದ್ಯ ರಾಶಿ!
ಸಿದ್ದರಾಮಯ್ಯ ಕಾರ್ಯಕ್ರಮದ ತಯಾರಿ ನೋಡಿ ಬರುವಷ್ಟರಲ್ಲಿ ಕಳ್ಳರ ಕೈ ಚಳಕ
ಸಿದ್ದರಾಮಯ್ಯ ಕಾರ್ಯಕ್ರಮದ ತಯಾರಿ ನೋಡಿ ಬರುವಷ್ಟರಲ್ಲಿ ಕಳ್ಳರ ಕೈ ಚಳಕ
ಬೆಳಗಿನ ಜಾವದಿಂದಲೇ ದೇವಿದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತರು
ಬೆಳಗಿನ ಜಾವದಿಂದಲೇ ದೇವಿದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತರು
ಪಾರ್ವತಮ್ಮ ಕಟ್ಟಿ ಬೆಳೆಸಿದ ವಜ್ರೇಶ್ವರಿ ಕಂಬೈನ್ಸ್​ಗೆ 50 ವರ್ಷ
ಪಾರ್ವತಮ್ಮ ಕಟ್ಟಿ ಬೆಳೆಸಿದ ವಜ್ರೇಶ್ವರಿ ಕಂಬೈನ್ಸ್​ಗೆ 50 ವರ್ಷ
ವಿಡಿಯೋ: ಆಟೋ ಡ್ರೈವರ್ ಮೇಲೆ ಬಸ್ ಹರಿಸಲು ಮುಂದಾದ ಬಿಎಂಟಿಸಿ ಚಾಲಕ
ವಿಡಿಯೋ: ಆಟೋ ಡ್ರೈವರ್ ಮೇಲೆ ಬಸ್ ಹರಿಸಲು ಮುಂದಾದ ಬಿಎಂಟಿಸಿ ಚಾಲಕ